ಮೆಟ್ರೋ-2 ಕಾಮಗಾರಿ: ನಿಗದಿತ ವೇಳೆಗೆ ಪೂರ್ಣ ನಿರೀಕ್ಷೆ
ಬೆಂಗಳೂರು, ಜನವರಿ 18 : ಬೈಯಪ್ಪನಹಳ್ಳಿಯಿಂದ ವೈಟ್ ಫೀಲ್ಡ್ ನಮ್ಮ ಮೆಟ್ರೋ ಎರಡನೇ ಹಂತದ ಮಾರ್ಗದ ವಿಸ್ತರಣೆ ಕಾಮಗಾರಿ ಪ್ರಗತಿಯಲ್ಲಿದೆ. ಈ ಎತ್ತರಿಸಿದ ಮಾರ್ಗದ 30 ಕಾಂಕ್ರೀಟ್ ಕಂಬಗಳು ಆರೇ ತಿಂಗಳಿನಲ್ಲಿ ಪೂರ್ಣಗೊಂಡಿದೆ.
ಈ ಮಾರ್ಗದಲ್ಲಿ ಒಟ್ಟು 579 ಕಾಂಕ್ರೀಟ್ ಪಿಲ್ಲರ್ ಗಳು ಬರಲಿದ್ದು ಬೈಯಪ್ಪನಹಳ್ಳಿಯಿಂದ ವಿಶ್ವೇಶ್ವರಯ್ಯ ಕೈಗಾರಿಕಾ ಪ್ರದೇಶ ನಿಲ್ದಾಣದವರೆಗೆ ೧೮ ಕಂಬಗಳು ಹಾಗೂ ಅಲ್ಲಿಂದ ವೈಟ್ ಫೀಲ್ಡ್ ವರೆಗೆ 12 ಕಂಬಗಳು ಪೂರ್ಣಗೊಂಡಿದೆ.
ಬೈಯಪ್ಪನಹಳ್ಳಿಯಿಂದ ವಿಶ್ವೇಶ್ವರಯ್ಯ ಕೈಗಾರಿಕಾ ಪ್ರದೇಶದವರೆಗಿನ ಕಾಮಗಾರಿಯನ್ನು ರೀಚ್ 1ಎ ಹಾಗೂ ವಿಶ್ವೇಶ್ವರಯ್ಯ ಕೈಗಾರಿಕಾ ಪ್ರದೇಶ ನಿಲ್ದಾಣದಿಂದ ವೈಟ್ ಫೀಲ್ಡ್ ವರೆಗಿನ ಕಾಮಗಾರಿಯನ್ನು ರೀಚ್ 1ಬಿ ಎಂದು ವಿಂಗಡಿಸಲಾಗಿದೆ. ಈ ಎರಡೂ ಪ್ಯಾಕೇಜ್ ಗಳನ್ನೂ ಐಟಿಡಿ ಸಿಮೆಂಟೇಷನ್ ಇಂಡಿಯಾ ಕಂಪನಿಗೆ ವಹಿಸಲಾಗಿದೆ.

ಈ ಮಾರ್ಗದಲ್ಲಿ ಒಟ್ಟು 2,600 ಕಡೆ ತಳಪಾಯ ನಿರ್ಮಿಸಬೇಕಿದ್ದು, ಈ ಪೈಕಿ 1,100 ಕಡೆ ಇದರ ಕೆಲಸ ಮುಗಿದಿದೆ. 220 ಕೆವಿ ವಿದ್ಯುತ್ ಮಾರ್ಗ ಸ್ಥಳಾಂತರ ಬಾಕಿ: ಮೆಟ್ರೋ ಕಾಮಗಾರಿಗಾಗಿ ಕುಂದಲಹಳ್ಳಿ ನಿಲ್ದಾಣದಿಂದ ಸತ್ಯಸಾಯಿ ಆಸ್ಪತ್ರೆ ನಿಲ್ದಾಣದವರೆಗೆ ಸುಮಾರು3 ಕಿ.ಮೀ ನಷ್ಟು ದೂರ220ವ್ಯಾಟ್ ವಿದ್ಯುತ್ ಮಾರ್ಗವನ್ನು ಸ್ಥಳಾಂತರಿಸಿ ಅಲ್ಲಿ ನೆಲದಡಿಯಲ್ಲಿ ಕೇಬಲ್ ಅಳವಡಿಸಬೇಕಿದೆ. ಈ ಸಲುವಾಗಿ ಕೆಪಿಟಿಸಿಯಲ್ಲಿ ಮೆಟ್ರೋ ನಿಗಮ 64 ಕೋಟಿ ರೂ ಪಾವತಿಸಿದೆ.
ಸ್ಥಳಾಂತರ ಕಾರ್ಯ ಆಗದ ಕಾರಣ ಈ ಪ್ರದೇಶದಲ್ಲಿ ಮಾತ್ರ ಇನ್ನೂ ಕಾಮಗಾರಿ ಆರಂಭವಾಗಿಲ್ಲ. 2017 ರ ಜೂನ್ ನಲ್ಲಿ ಕಾಮಗಾರಿ ಪ್ರಾರಂಭವಾಗಿತ್ತು. ಕಾಮಗಾರಿ ಪೂರ್ಣಗೊಳಿಸಲು 27 ತಿಂಗಳ ಕಾಲಾವಕಾಶ ನೀಡಲಾಗಿತ್ತು. ಆ ಪ್ರಕಾರ 2020ರ ಒಳಗೆ ಎಲ್ಲ ಕೆಲಸಗಳು ಪೂರ್ಣಗೊಳ್ಳಬೇಕಿದೆ. ಕಾಮಗಾರಿ ವೇಗವನ್ನು ಗಮನಿಸಿದರೆ ಗಡುವಿನ ಒಳಗೆ ಮಾರ್ಗವು ಸಿದ್ಧವಾಗಲಿದೆ.
-
Gold Price Today: ಇಂದು ಚಿನ್ನ-ಬೆಳ್ಳಿ ದರದಲ್ಲಿ ದಾಖಲೆಯ ಇಳಿಕೆ, 30000 ರೂ ಕುಸಿದ ಬಿಳಿ ಲೋಹ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
RCB Vs SRH: ಎಸ್ಆರ್ಎಚ್ ವಿರುದ್ಧದ ಐಪಿಎಲ್ ಉದ್ಘಾಟನಾ ಪಂದ್ಯದ ಟಿಕೆಟ್ ಬುಕಿಂಗ್ ಕುರಿತು ಆರ್ಸಿಬಿ ಬಿಗ್ ಅಪ್ಡೇಟ್ -
ತಿಂಗಳಿಗೆ 50 ಸಾವಿರ ಸಂಬಳ ಇದೆಯಾ? 2026ರಲ್ಲಿ ಬೆಂಗಳೂರಿನಂತಹ ಮಹಾನಗರದಲ್ಲಿ ಜೀವನ ವೆಚ್ಚ ಎಷ್ಟಾಗುತ್ತೆ ಗೊತ್ತಾ? ಇಲ್ಲಿದೆ ಮಾಹಿತಿ -
ಜೋಶ್ ಹ್ಯಾಜಲ್ವುಡ್ ಔಟ್, 7 ಕೋಟಿಯ ಆಟಗಾರನಿಗಿಲ್ಲ ಸ್ಥಾನ; ಅಶ್ವಿನ್ ಹೇಳಿದ ಆರ್ಸಿಬಿ ಸಂಭಾವ್ಯ ಪ್ಲೇಯಿಂಗ್ 11 ಇಲ್ಲಿದೆ -
AI ಮೂಲಕ ಬರುವ ಉದ್ಯೋಗ ಅರ್ಜಿಗಳಿಂದ ಬೆಂಗಳೂರು ಉದ್ಯಮಿ ಬೇಸರ: 'ಅರ್ಜಿಗಳು ಜಾಸ್ತಿ, ಅರ್ಹತೆ ಕಡಿಮೆ’ -
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣದ ಸ್ಥಳ: ಸಚಿವ ಎಂ.ಬಿ.ಪಾಟೀಲ್ ಮಹತ್ವದ ಮಾಹಿತಿ -
Power Cut: ನಾಳೆ ಮಾ.22 ರಿಂದ 25ರವರೆಗೆ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ: ಬೆಸ್ಕಾಂ -
ಕೇವಲ 2 ನಿಮಿಷದಲ್ಲಿ ಉದ್ಯೋಗ ಅರ್ಜಿ ರಿಜೆಕ್ಟ್: 'ಎಐ' ನೇಮಕಾತಿ ಬಗ್ಗೆ ಭಾರತೀಯ ಮೂಲದ ವಿದ್ಯಾರ್ಥಿನಿ ಬೇಸರ -
Rishab Shetty: ಹೊಂಬಾಳೆ ಫಿಲ್ಮ್ಸ್ ಅನ್ಫಾಲೋ ಮಾಡಿದ ರಿಷಬ್ ಶೆಟ್ಟಿ: ಕಾಂತಾರ ಕುಟುಂಬದಲ್ಲಿ ಬಿರುಕು ವದಂತಿ -
Ration: ಪಡಿತರ ಚೀಟಿದಾರರಿಗೆ ಭರ್ಜರಿ ಗುಡ್ ನ್ಯೂಸ್ ಕೊಟ್ಟ ಕೇಂದ್ರ ಸರ್ಕಾರ -
ಆರ್ಸಿಬಿ ಮತ್ತೆ ಚಾಂಪಿಯನ್ ಆಗೋದು ಫಿಕ್ಸ್, ಹ್ಯಾಜಲ್ವುಡ್ ಅಲಭ್ಯತೆ ತಂಡಕ್ಕೆ ವರದಾನ ಎಂದ ಆರ್.ಅಶ್ವಿನ್












Click it and Unblock the Notifications