ಬೈಯಪ್ಪನಹಳ್ಳಿಯಲ್ಲಿ ಮೆಟ್ರೋ ರೈಲು ಅಪಘಾತ ?
ಬೆಂಗಳೂರು, ಏಪ್ರಿಲ್ 28: ಬೈಯಪ್ಪನಹಳ್ಳಿ ಮೆಟ್ರೋ ಡಿಪೋದಲ್ಲಿ ಮೆಟ್ರೋ ರೈಲೊಂದು ಕಬ್ಬಿಣದ ತಡೆಗೋಡೆ ದಾಟಿ ಮುಂದಕ್ಕೆ ಹೋದ ಘಟನೆ ತಡವಾಗಿ ಬೆಳಕಿಗೆ ಬಂದಿದೆ.
ಏ.21ರ ಮಧ್ಯಾಹ್ನ 3 ಗಂಟೆಗೆ ಎಮರ್ಜೆನ್ಸಿ ತಂಡಕ್ಕೆ ತರಬೇತಿ ನೀಡುತ್ತಿದ್ದಾಗ ಲೋಕೊಪೈಲಟ್ ಅಜಾಗರೂಕತೆಯಿಂದ ರೈಲು ಚಲಾಯಿಸಿದ್ದಾರೆ. ಇದರಿಂದ ಹಳಿಗೆ ಅಳವಡಿಸಿದ್ದ ಕಬ್ಬಿಣದ ತಡೆಗೆ ರೈಲು ಡಿಕ್ಕಿ ಹೊಡೆದಿದೆ. ಈ ರಭಸಕ್ಕೆ ಹಳಿಯ ಮೇಲೆ ಹಾಕಿದ್ದ ಕಬ್ಬಿಣದ ತಡೆಗೋಡೆ ಅಂದಾಜು 1 ಅಡಿ ಹಿಂದಕ್ಕೆ ಚಲಿಸಿದೆ.
ಸಿಸಿ ಕ್ಯಾಮರಾ ದೃಶ್ಯ ಪರಿಶೀಲಿಸಿದಾಗ ರೈಲು ಕಬ್ಬಿಣದ ತಡೆಗೋಡೆಗೆ ಡಿಕ್ಕಿಯಾಗಿರುವುದು ಹಾಗೂ ಕೆಲ ನಿಮಿಷದ ನಂತರ ಹಿಂದಕ್ಕೆ ಚಲಿಸಿರುವುದು ಪತ್ತೆಯಾಗಿದೆ. ಈ ಕುರಿತು ಹಿರಿಯ ಅಧಿಕಾರಿಗಳು ಆಡಳಿತ ಮಂಡಳಿಗೆ ಇ-ಮೇಲ್ ಮೂಲಕ ಮಾಹಿತಿ ನೀಡಿದ್ದಾರೆ.

ತರಾತುರಿ ತರಬೇತಿ: ಕಳೆದ ತಿಂಗಳು ಮೆಟ್ರೋ ಸಿಬ್ಬಂದಿ ಮುಷ್ಕರ ನಡೆಸಲು ಸಿದ್ಧತೆ ನಡೆಸಿದ್ದಾಗ, ತುರ್ತು ಪರಿಸ್ಥಿತಿಯಲ್ಲಿ ರೈಲು ಕಾರ್ಯಾಚರಣೆಗೊಳಿಸಲು ಬಿಎಂಆರ್ ಸಿಎಲ್ 90 ಸಿಬ್ಬಂದಿಯ ವಿಶೇಷ ತಂಡ ರಚಿಸಿತ್ತು. ಈ ಸಿಬ್ಬಂದಿಗಳಿಗೆ ತರಾತುರಿಯಲ್ಲಿ ತರಬೇತಿ ನೀಡಿರುವುದ ಪರಿಣಾಮ ಈ ಅವಘಡ ಸಂಭವಿಸಿದೆ ಎಂದು ಮೆಟ್ರೋ ನೌಕರರ ಸಂಘದ ಸದಸ್ಯರು ಆರೋಪಿಸಿದ್ದಾರೆ.
-
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು -
ಉಚಿತ ಸೌಲಭ್ಯ ನೀಡಿದರೂ ಸರ್ಕಾರಿ ಶಾಲೆಗಳತ್ತ ಮುಖ ಮಾಡದ ಮಕ್ಕಳು: 3 ವರ್ಷಗಳಲ್ಲಿ ಶೇ.11.20ರಷ್ಟು ದಾಖಲಾತಿ ಕುಸಿತ -
"ನಿನಗೆ ಒಂದು ತಿಂಗಳು, ನನಗೆ ಎರಡು ವರ್ಷ": ಇಶಾನ್ ಕಿಶನ್-ಅಭಿಷೇಕ್ ಶರ್ಮಾ ನಡುವೆ ಜಟಾಪಟಿ -
ತಿರುಮಲಕ್ಕೆ ಹೋಗುತ್ತಿದ್ದ ತುಪ್ಪದ ಟ್ಯಾಂಕರ್ ಪಲ್ಟಿ: ತುಪ್ಪಕ್ಕಾಗಿ ಬಕೆಟ್ ಹಿಡಿದು ಬಂದ ಜನ, ವಿಡಿಯೋ Viral












Click it and Unblock the Notifications