ಮೆಟ್ರೋ ಹತ್ಬೇಕಾ ಹಾಗಾದರೆ ನಿಮ್ಮ ಸ್ಮಾರ್ಟ್ಕಾರ್ಡ್ನಲ್ಲಿ 50ರೂ ಇರ್ಲೇಬೇಕು
ಬೆಂಗಳೂರು, ಮಾರ್ಚ್ 28:ನಮ್ಮ ಮೆಟ್ರೋ ಹತ್ತಬೇಕಾದರೆ ನಿಮ್ಮ ಸ್ಮಾರ್ಟ್ಕಾರ್ಡ್ನಲ್ಲಿ 50ರೂ ಬ್ಯಾಲೆನ್ಸ್ ಇರಲೇಬೇಕು ಎನ್ನುವ ಮೆಟ್ರೋ ನಿಗಮದ ಹೊಸ ನಿಯಮಕ್ಕೆ ಪ್ರಯಾಣಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಲೋಕಸಭಾ ಚುನಾವಣೆ 2019 : ವಿಶೇಷ ಪುಟ | ಗ್ಯಾಲರಿ
ಈ ನಿಯಮದ ಬಗ್ಗೆ ಯಾವುದೇ ಮಾಹಿತಿ ನೀಡದೆ ಏಕಾಏಕಿ ಜಾರಿ ಮಾಡಿದ್ದಾರೆ. 10 ರೂ ನೀಡಿ ಪ್ರಯಾಣಿಸುವವರ ಕಾರ್ಡ್ನಲ್ಲಿಯೂ ಕನಿಷ್ಠ 50 ರೂ ಇರಲೇಬೇಕು ಎಂದು ಮೆಟ್ರೋ ನಿಗಮ ಹೇಳುತ್ತಿದೆ.

ಕನಿಷ್ಠ 50ರೂ ಇದ್ದರಷ್ಟೇ ಮೆಟ್ರೋ ಗೇಟ್ ತೆರೆಯುತ್ತೆ
ಕನಿಷ್ಠ 50ರೂ ಇದ್ದರಷ್ಟೇ ಪ್ರವೇಶಕ್ಕೆ ಗೇಟ್ ತೆರೆಯಲಿದೆ. ಪ್ರಯಾಣಿಕರು ಇಳಿಯುವ ನಿಲ್ದಾಣದಲ್ಲಿ ಟಾಪ್ ಅಪ್ ಸಮಸ್ಯೆ ಎದುರಾಗಬಾರದು ಎನ್ನುವ ಕಾರಣದಿಂದ ಈ ನಿಯಮ ಅನುಷ್ಠಾನಗೊಳಿಸಲಾಗಿದೆ ಎಂದು ಬಿಎಂಆರ್ಸಿಎಲ್ ಸಮರ್ಥಿಸಿಕೊಂಡಿದೆ.

ಯಾವುದೇ ಮುನ್ಸೂಚನೆ ಇಲ್ಲದೆ ಜಾರಿಗೆ
ಮುನ್ಸೂಚನೆ ನೀಡದೆ ಏಕಾಏಕಿ ಈ ನಿಯಮ ಜಾರಿಗೊಳಿಸಿರುವ ಬಿಎಂಆರ್ಸಿಎಲ್ ವಿರುದ್ಧ ಪ್ರಯಾಣಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅಐಜ್ಞಾನಿಕ ನಿಯಮದ ವಿರುದ್ಧ ಸಂಪಿಗೆ ರಸ್ತೆ ಮೆಟ್ರೋ ನಿಲ್ದಾಣದಲ್ಲಿ ನೂರಾರು ಪ್ರಯಾಣಿಕರು ಬುಧವಾರ ಪ್ರತಿಭಟನೆ ನಡೆಸಿದ್ದಾರೆ.

ಮೆಟ್ರೋ ನಿಲ್ದಾಣದಲ್ಲಿ ಹೆಚ್ಚಿದ ಜನದಟ್ಟಣೆ
ಪ್ರತಿ ಮೆಟ್ರೋ ನಿಲ್ದಾಣದಲ್ಲಿ ಆಟೋಮ್ಯಾಟಿಕ್ ಫೇರ್ ಕಲೆಕ್ಟರ್ ಗೇಟ್ ಅಳವಡಿಸಲಾಗಿದೆ. ಸ್ಮಾರ್ಟ್ ಕಾರ್ಡ್ ಅಥವಾ ಟೋಕನ್ ಅನ್ನು ಗೇಟ್ ಮೇಲಿರಿಸಿದಾಗ ತನ್ನಿಂದ ತಾನಾಗಿಯೇ ಗೇಟ್ ತೆರೆದುಕೊಳ್ಳುತ್ತದೆ. ಇದಕ್ಕೆ ತಕ್ಕಂತೆ ಎಎಫ್ಸಿ ಗೇಟ್ನ ತಂತ್ರಾಂಶ ಬದಲಾಯಿಸಲಾಗಿದೆ.

ಶೇ.50ರಷ್ಟು ಪ್ರಯಾಣಿಕರು ಸ್ಮಾರ್ಟ್ ಕಾರ್ಡ್ ಹೊಂದಿದ್ದಾರೆ
ಪ್ರತಿದಿನ ಮೆಟ್ರೋದಲ್ಲಿ 3.5 ಲಕ್ಷ ಮಂದಿ ಪ್ರಯಾಣಿಸುತ್ತಾರೆ. ನಾಯಂಡಹಳ್ಳಿ-ಬೈಯಪ್ಪನಹಳ್ಳಿ ನೇರಳೆ ಮಾರ್ಗದಲ್ಲಿ ಶೇ.59.84 ಪ್ರಯಾಣಿಕರು ಸ್ಮಾರ್ಟ್ ಕಾರ್ಡ್ ಬಳಕೆ ಮಾಡುತ್ತಾರೆ. ನೇರಳೆ ಮಾರ್ಗದಲ್ಲಿ ಶೇ.34.14 ಹಾಗೂ ಹಸಿರು ಮಾರ್ಗದಲ್ಲಿ ಶೇ.40.16 ಟೋಕನ್ ಬಳಕೆದಾರರಿದ್ದಾರೆ.
|
ಬಿಎಂಆರ್ಸಿಎಲ್ ಮಾಹಿತಿ ನೀಡಿದ್ದು ರಾತ್ರಿ 9ಗಂಟೆಗೆ
ಸಂಜೆ ಹೊಸ ನಿಯಮ ಜಾರಿಗೊಳಿಸಿರುವ ಬಿಎಂಆರ್ಸಿಎಲ್ ರಾತ್ರಿ 9 ಗಂಟೆಗೆ ಪತ್ರಿಕಾ ಪ್ರಕಟಣೆ ಹೊರಡಿಸಿ ಮಾಹಿತಿ ನೀಡಿದೆ. ಪ್ರಯಾಣಿಕರು ಪ್ರತಿಭಟನೆ ಮಾಡಿದ ಬಳಿಕ ಎಚ್ಚೆತ್ತುಕೊಂಡಿರುವ ಬಿಎಂಆರ್ಸಿಎಲ್ ಬಳಿಕ ಮಾಹಿತಿ ನೀಡಿದೆ. ನಿಲ್ದಾಣದ ಸಿಬ್ಬಂದಿಗಳಿಗೂ ಸೂಕ್ತ ಮಾಹಿತಿ ಇರಲಿಲ್ಲ. ಇವತ್ತು 50 ಅಂತಾರೆ ನಾಳೆ 500 ರೂ ಮಾಡಿದರೆ ಏನು ಗತಿ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
-
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Karnataka Weather Mar 12: ಬಿಸಿಲು ಹೆಚ್ಚಳದ ನಡುವೆ ಮಾರ್ಚ್ 15ರಿಂದ ಕರ್ನಾಟಕದಲ್ಲಿ ಮಳೆ, ಹೇಗಿದೆ ಇಂದಿನ ವೆದರ್ -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ












Click it and Unblock the Notifications