ಮೆಟ್ರೋ ಹತ್ಬೇಕಾ ಹಾಗಾದರೆ ನಿಮ್ಮ ಸ್ಮಾರ್ಟ್ಕಾರ್ಡ್ನಲ್ಲಿ 50ರೂ ಇರ್ಲೇಬೇಕು
ಬೆಂಗಳೂರು, ಮಾರ್ಚ್ 28:ನಮ್ಮ ಮೆಟ್ರೋ ಹತ್ತಬೇಕಾದರೆ ನಿಮ್ಮ ಸ್ಮಾರ್ಟ್ಕಾರ್ಡ್ನಲ್ಲಿ 50ರೂ ಬ್ಯಾಲೆನ್ಸ್ ಇರಲೇಬೇಕು ಎನ್ನುವ ಮೆಟ್ರೋ ನಿಗಮದ ಹೊಸ ನಿಯಮಕ್ಕೆ ಪ್ರಯಾಣಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಲೋಕಸಭಾ ಚುನಾವಣೆ 2019 : ವಿಶೇಷ ಪುಟ | ಗ್ಯಾಲರಿ
ಈ ನಿಯಮದ ಬಗ್ಗೆ ಯಾವುದೇ ಮಾಹಿತಿ ನೀಡದೆ ಏಕಾಏಕಿ ಜಾರಿ ಮಾಡಿದ್ದಾರೆ. 10 ರೂ ನೀಡಿ ಪ್ರಯಾಣಿಸುವವರ ಕಾರ್ಡ್ನಲ್ಲಿಯೂ ಕನಿಷ್ಠ 50 ರೂ ಇರಲೇಬೇಕು ಎಂದು ಮೆಟ್ರೋ ನಿಗಮ ಹೇಳುತ್ತಿದೆ.

ಕನಿಷ್ಠ 50ರೂ ಇದ್ದರಷ್ಟೇ ಮೆಟ್ರೋ ಗೇಟ್ ತೆರೆಯುತ್ತೆ
ಕನಿಷ್ಠ 50ರೂ ಇದ್ದರಷ್ಟೇ ಪ್ರವೇಶಕ್ಕೆ ಗೇಟ್ ತೆರೆಯಲಿದೆ. ಪ್ರಯಾಣಿಕರು ಇಳಿಯುವ ನಿಲ್ದಾಣದಲ್ಲಿ ಟಾಪ್ ಅಪ್ ಸಮಸ್ಯೆ ಎದುರಾಗಬಾರದು ಎನ್ನುವ ಕಾರಣದಿಂದ ಈ ನಿಯಮ ಅನುಷ್ಠಾನಗೊಳಿಸಲಾಗಿದೆ ಎಂದು ಬಿಎಂಆರ್ಸಿಎಲ್ ಸಮರ್ಥಿಸಿಕೊಂಡಿದೆ.

ಯಾವುದೇ ಮುನ್ಸೂಚನೆ ಇಲ್ಲದೆ ಜಾರಿಗೆ
ಮುನ್ಸೂಚನೆ ನೀಡದೆ ಏಕಾಏಕಿ ಈ ನಿಯಮ ಜಾರಿಗೊಳಿಸಿರುವ ಬಿಎಂಆರ್ಸಿಎಲ್ ವಿರುದ್ಧ ಪ್ರಯಾಣಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅಐಜ್ಞಾನಿಕ ನಿಯಮದ ವಿರುದ್ಧ ಸಂಪಿಗೆ ರಸ್ತೆ ಮೆಟ್ರೋ ನಿಲ್ದಾಣದಲ್ಲಿ ನೂರಾರು ಪ್ರಯಾಣಿಕರು ಬುಧವಾರ ಪ್ರತಿಭಟನೆ ನಡೆಸಿದ್ದಾರೆ.

ಮೆಟ್ರೋ ನಿಲ್ದಾಣದಲ್ಲಿ ಹೆಚ್ಚಿದ ಜನದಟ್ಟಣೆ
ಪ್ರತಿ ಮೆಟ್ರೋ ನಿಲ್ದಾಣದಲ್ಲಿ ಆಟೋಮ್ಯಾಟಿಕ್ ಫೇರ್ ಕಲೆಕ್ಟರ್ ಗೇಟ್ ಅಳವಡಿಸಲಾಗಿದೆ. ಸ್ಮಾರ್ಟ್ ಕಾರ್ಡ್ ಅಥವಾ ಟೋಕನ್ ಅನ್ನು ಗೇಟ್ ಮೇಲಿರಿಸಿದಾಗ ತನ್ನಿಂದ ತಾನಾಗಿಯೇ ಗೇಟ್ ತೆರೆದುಕೊಳ್ಳುತ್ತದೆ. ಇದಕ್ಕೆ ತಕ್ಕಂತೆ ಎಎಫ್ಸಿ ಗೇಟ್ನ ತಂತ್ರಾಂಶ ಬದಲಾಯಿಸಲಾಗಿದೆ.

ಶೇ.50ರಷ್ಟು ಪ್ರಯಾಣಿಕರು ಸ್ಮಾರ್ಟ್ ಕಾರ್ಡ್ ಹೊಂದಿದ್ದಾರೆ
ಪ್ರತಿದಿನ ಮೆಟ್ರೋದಲ್ಲಿ 3.5 ಲಕ್ಷ ಮಂದಿ ಪ್ರಯಾಣಿಸುತ್ತಾರೆ. ನಾಯಂಡಹಳ್ಳಿ-ಬೈಯಪ್ಪನಹಳ್ಳಿ ನೇರಳೆ ಮಾರ್ಗದಲ್ಲಿ ಶೇ.59.84 ಪ್ರಯಾಣಿಕರು ಸ್ಮಾರ್ಟ್ ಕಾರ್ಡ್ ಬಳಕೆ ಮಾಡುತ್ತಾರೆ. ನೇರಳೆ ಮಾರ್ಗದಲ್ಲಿ ಶೇ.34.14 ಹಾಗೂ ಹಸಿರು ಮಾರ್ಗದಲ್ಲಿ ಶೇ.40.16 ಟೋಕನ್ ಬಳಕೆದಾರರಿದ್ದಾರೆ.
|
ಬಿಎಂಆರ್ಸಿಎಲ್ ಮಾಹಿತಿ ನೀಡಿದ್ದು ರಾತ್ರಿ 9ಗಂಟೆಗೆ
ಸಂಜೆ ಹೊಸ ನಿಯಮ ಜಾರಿಗೊಳಿಸಿರುವ ಬಿಎಂಆರ್ಸಿಎಲ್ ರಾತ್ರಿ 9 ಗಂಟೆಗೆ ಪತ್ರಿಕಾ ಪ್ರಕಟಣೆ ಹೊರಡಿಸಿ ಮಾಹಿತಿ ನೀಡಿದೆ. ಪ್ರಯಾಣಿಕರು ಪ್ರತಿಭಟನೆ ಮಾಡಿದ ಬಳಿಕ ಎಚ್ಚೆತ್ತುಕೊಂಡಿರುವ ಬಿಎಂಆರ್ಸಿಎಲ್ ಬಳಿಕ ಮಾಹಿತಿ ನೀಡಿದೆ. ನಿಲ್ದಾಣದ ಸಿಬ್ಬಂದಿಗಳಿಗೂ ಸೂಕ್ತ ಮಾಹಿತಿ ಇರಲಿಲ್ಲ. ಇವತ್ತು 50 ಅಂತಾರೆ ನಾಳೆ 500 ರೂ ಮಾಡಿದರೆ ಏನು ಗತಿ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
-
Krunal Pandya: ವಿರಾಟ್ ಕೊಹ್ಲಿ - 2026ರ ಆರ್ಸಿಬಿ ತಂಡದ ಬಗ್ಗೆ ಸ್ಟಾರ್ ಆಟಗಾರ ಕೃನಾಲ್ ಪಾಂಡ್ಯರಿಂದ ಮಹತ್ವ ವಿಷಯ ರಿವೀಲ್ -
Viral Video: ವಿದೇಶಿ ಛಾಯಾಗ್ರಾಹಕರ ಫೋಟೋಗ್ರಫಿ ಹುಚ್ಚುತನಕ್ಕೆ ಜೀವ ಕಳೆದುಕೊಂಡಿತೇ ಭಾರತದ ಮುದ್ದಾದ ಆನೆ, ಏನಿದು ಚರ್ಚೆ -
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Cricket: ವಿಶ್ವದಾಖಲೆ ಬರೆದ ಕಿವೀಸ್ ವನಿತೆಯರು: ಭಾರತದ ದಾಖಲೆ ಅಳಿಸಿ ಹಾಕಿದ ನ್ಯೂಜಿಲೆಂಡ್ ಅಬ್ಬರ -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ












Click it and Unblock the Notifications