Get Updates
Get notified of breaking news, exclusive insights, and must-see stories!

ಮೆಟ್ರೋ ಕಾಮಗಾರಿಗೆ ಮತ್ತೊಂದು ಬಲಿ

metro
ಬೆಂಗಳೂರು, ಸೆ.23 : ನಮ್ಮ ಮಟ್ರೋ ಕಾಮಗಾರಿ ಮತ್ತೊಂದು ಬಲಿ ಪಡೆದಿದೆ. ಹೆಸರಘಟ್ಟ ರಸ್ತೆಯ ಮೆಟ್ರೋ ಸ್ಟೇಷನ್ ಕಾಮಗಾರಿ ಕೆಲಸ ಮಾಡುತ್ತಿದ್ದ ಕಾರ್ಮಿರೊಬ್ಬರು ಭಾನುವಾರ ಮಧ್ಯಾಹ್ನ ಮೃತಪಟ್ಟಿದ್ದಾರೆ.

ಜಾರ್ಖಂಡ್ ಮೂಲದ ಕಮಲೇಶ್ ರಾವ್(32) ಮೃಪತಪಟ್ಟ ಕಾರ್ಮಿಕರಾಗಿದ್ದಾರೆ. ಹೆಸರಘಟ್ಟ ಸ್ಟೇಷನ್ ನಿರ್ಮಾಣ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದ ಇವರು, ಕಬ್ಬಿಣದ ರಾಡ್ ಗಳನ್ನು ಬಳಸಿ ನಿರ್ಮಿಸಿದ್ದ ಮೆಟ್ಟಿಲುಗಳ ಮೇಲೆ ನಿಂತು ಕೆಲಸ ಮಾಡುತ್ತಿದ್ದರು.

ಈ ಸಂದರ್ಭದಲ್ಲಿ ಆಕಸ್ಮಿಕವಾಗಿ ಕಾಲುಜಾರಿ ಬಿದ್ದು ಮೃತಪಟ್ಟಿದ್ದಾರೆ. ತಕ್ಷಣ ಅವರನ್ನು ಸಮೀಪದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಯಿತು. ತಲೆಗೆ ತೀವ್ರವಾದ ಪೆಟ್ಟು ಬಿದ್ದು, ರಕ್ತ ಸೋರಿಕೆಯಾದ ಕಾರಣ ಚಿಕಿತ್ಸೆ ಫಲಕಾರಿಯಾಗದೆ ಕಮಲೇಶ್ ಮೃತಪಟ್ಟಿದ್ದಾರೆ.

ಭಾನುವಾರ ಮೆಟ್ರೋ ಕಾಮಗಾರಿಗೆ ರಜೆ ಇರುತ್ತದೆ. ಆದರೆ, ಹೆಸರಘಟ್ಟ ನಿಲ್ದಾಣ ಕಾಮಗಾರಿಯಲ್ಲಿ ತೊಡಗಿಸಿಕೊಂಡಿದ್ದ ಕೆಲವು ಕಾರ್ಮಿಕರು ಅರ್ಧದಿನ ಕೆಲಸ ಮಾಡಿ, ರಜೆ ತೆಗೆದುಕೊಳ್ಳುವುದಾಗಿ ಕೆಲಸಕ್ಕೆ ಆಗಮಿಸಿದ್ದರು.

ಈ ಸಂದರ್ಭದಲ್ಲಿ ಕಮಲೇಶ್ ಕಾಲುಜಾರಿ ಬಿದ್ದು ಮೃತಪಟ್ಟಿದ್ದಾರೆ. ಕಾಮಗಾರಿಯ ಗುತ್ತಿಗೆ ಪಡೆದಿರುವ ವಿನೋದ್ ರಾಮ್ ಮತ್ತು ಇತರರ ವಿರುದ್ಧ ಪೀಣ್ಯ ಠಾಣೆಯಲ್ಲಿ ನಿರ್ಲಕ್ಷ್ಯತೆ ದೂರು ದಾಖಲಾಗಿದೆ.

ಕಮಲೇಶ್ ಸಾವಿನ ಕುರಿತು ತನಿಖೆ ನಡೆಸಿ, ಕ್ರಮ ಕೈಗೊಳ್ಳುವುದಾಗಿ ಡಿಸಿಪಿ ಸಂದೀಪ್ ಪಾಟೀಲ್ ಹೇಳಿದ್ದಾರೆ. ಶವದ ಮರಣೋತ್ತರ ಪರೀಕ್ಷೆ ನಡೆಸಿ, ಸಂಬಂಧಿಕರಿಗೆ ಹಸ್ತಾಂತರಿಸಲಾಗಿದೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+