ನಮ್ಮ ಮೆಟ್ರೋ ಪ್ರಯಾಣಿಕರಿಗೆ ದರ ಏರಿಕೆ ಬಿಸಿ
ಬೆಂಗಳೂರು, ಮಾ. 1 : ಶುಕ್ರವಾರ ಸಂಪಿಗೆ ರಸ್ತೆಯಿಂದ ಪೀಣ್ಯವರೆಗಿನ ನಮ್ಮ ಮೆಟ್ರೋ ಮಾರ್ಗವನ್ನು ಉದ್ಘಾಟನೆ ಮಾಡಿದ್ದ ಬಿಎಂಆರ್ ಸಿಎಲ್ ಶನಿವಾರ ಬೆಂಗಳೂರಿಗರಿಗೆ ಮೆಟ್ರೋ ದರ ಏರಿಕೆ ಶಾಕ್ ನೀಡಿದೆ. ಹೌದು ಎಂಜಿ ರೋಡ್-ಬೈಯಪ್ಪನಹಳ್ಳಿ ನಡುವಿನ ಮಾರ್ಗದಲ್ಲಿನ ಪ್ರಯಾಣದವರನ್ನು 2 ರೂ. ಹೆಚ್ಚಿಸಲಾಗಿದೆ.
ನಮ್ಮ ಮೆಟ್ರೋ ಪ್ರಯಾಣ ದರ ಏರಿಕೆ ಕುರಿತು ಬಿಎಂಆರ್ ಸಿಎಲ್ ಪ್ರಕಟಣೆ ಹೊರಡಿಸಿದ್ದು, ಶನಿವಾರದಿಂದಲೇ ನೂತನ ದರ ಜಾರಿಗೆ ಬಂದಿದೆ. ಎಂಜಿ ರಸ್ತೆ ಮತ್ತು ಬೈಯಪ್ಪನಹಳ್ಳಿ ನಡುವೆ ಇದ್ದ 15 ರೂ. ಪ್ರಯಾಣ ದರವನ್ನು 17 ರೂ.ಗಳಿಗೆ ಏರಿಕೆ ಮಾಡಲಾಗಿದೆ. ಹಾಗೆಯೇ ಎಂಜಿ ರಸ್ತೆಯಿಂದ ಪ್ರತಿ ನಿಲ್ದಾಣಕ್ಕೆ ತೆರಳುವ ದರವನ್ನು ಪರಿಷ್ಕರಣೆ ಮಾಡಲಾಗಿದೆ. [ನಮ್ಮ ಮೆಟ್ರೋಗೆ ಎರಡು ವರ್ಷದ ಸಂಭ್ರಮ]

ಎಂಜಿ ರಸ್ತೆ-ಬೈಯಪ್ಪನಹಳ್ಳಿ ನಡುವಿನ ನಮ್ಮ ಮೆಟ್ರೋ ಸಂಚಾರ ಆರಂಭವಾಗಿ ಎರಡು ವರ್ಷಗಳು ಕಳೆದಿವೆ. ಈ ಮಾರ್ಗದಲ್ಲಿ ಕನಿಷ್ಠ 10 ಮತ್ತು ಗರಿಷ್ಠ 15 ರೂ. ಪ್ರಯಾಣ ದರವಿತ್ತು. ಎರಡು ವರ್ಷಗಳಲ್ಲಿ ಈ ಮಾರ್ಗದಲ್ಲಿನ ಪ್ರಯಾಣ ದರವನ್ನು ಹೆಚ್ಚಳ ಮಾಡಿರಲಿಲ್ಲ. ಸದ್ಯ ರೀಚ್ 3 ಮತ್ತು 3ಎ ಜೊತೆಗೆ ಈ ಮಾರ್ಗದ ಪ್ರಯಾಣ ದರವನ್ನು ಹೆಚ್ಚಿಸಲಾಗಿದೆ. [ನಮ್ಮ ಮೆಟ್ರೋ ಪ್ರಯಾಣ ದರ ಹೆಚ್ಚಳ]
ರೀಚ್ 3 ಮತ್ತು 3ಎನ ಸಂಪಿಗೆ ರಸ್ತೆ-ಪೀಣ್ಯ ಮಾರ್ಗದಲ್ಲಿ ಸಂಚರಿಸುವ 'ಹಸಿರು ಬಣ್ಣ'ದ ನಮ್ಮ ಮೆಟ್ರೋ ಶುಕ್ರವಾರ ಅಧಿಕೃತವಾಗಿ ಚಾಲನೆ ನೀಡಲಾಗಿದೆ. ಮಾರ್ಚ್ 1ರ ಶನಿವಾರ ಬೆಳಗ್ಗೆಯಿಂದ ಮಾರ್ಗದಲ್ಲಿ ಮೆಟ್ರೋ ಪ್ರಯಾಣ ಆರಂಭವಾಗಿದೆ. ರಾಜಾಜಿನಗರ ಮೆಟ್ರೋ ನಿಲ್ದಾಣದಲ್ಲಿ ಸಿಎಂ ಸಿದ್ದರಾಮಯ್ಯ, ಕೇಂದ್ರ ಸಚಿವ ವೀರಪ್ಪ ಮೊಯ್ಲಿ, ಸಚಿವ ರೋಷನ್ ಬೇಗ್, ರಾಮಲಿಂಗಾ ರೆಡ್ಡಿ ರೈಲಿಗೆ ಹಸಿರು ನಿಶಾನೆ ತೋರಿದರು. ಈ ಮಾರ್ಗದ ಪ್ರಯಾಣದರ 23 ರೂ. ಎಂದು ನಿಗದಿಗೊಳಿಸಲಾಗಿದೆ. [ಸಂಪಿಗೆ ರಸ್ತೆ-ಪೀಣ್ಯ ರೈಲಿನ ಬಗ್ಗೆ ಓದಿ]
ಶುಕ್ರವಾರ ರೀಚ್ 3 ಮತ್ತು 3ಎ ಮಾರ್ಗಕ್ಕೆ ಚಾಲನೆ ನೀಡಿದ ನಂತರ ಬಿಎಂಆರ್ ಸಿಎಲ್ ಎಂಜಿ ರಸ್ತೆ-ಬೈಯಪ್ಪನಹಳ್ಳಿ ನಡುವಿನ ಪ್ರಯಾಣದರವನ್ನು ಪರಿಷ್ಕರಣೆ ಮಾಡಿದ್ದು, ಶನಿವಾರದಿಂದಲೇ ನೂತನ ದರ ಜಾರಿಗೆ ಬಂದಿದೆ. ನೂತನ ದರ ಪಟ್ಟಿ ಹೀಗಿದೆ
* ಎಂಜಿ ರಸ್ತೆ ಬೈಯಪ್ಪನಹಳ್ಳಿ - 17 ರೂ.
* ಎಂಜಿ ರಸ್ತೆ-ಇಂದಿರಾನಗರ - 14 ರೂ.
* ಎಂಜಿ ರಸ್ತೆ-ಹುಲಸೂರು -13 ರೂ.
* ಎಂಜಿ ರಸ್ತೆ- ಎಸ್ ವಿ ರಸ್ತೆ - 16 ರೂ.
-
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ












Click it and Unblock the Notifications