ಮೊಹಮ್ಮದ್ ನಲಪಾಡ್ ಪ್ರಕರಣ : ವಿದ್ವತ್ ನೀಡಿದ ಘಟನೆಯ ವಿವರ
Recommended Video

ಬೆಂಗಳೂರು, ಮಾರ್ಚ್ 04 : ಮೊಹಮ್ಮದ್ ನಲಪಾಡ್ನಿಂದ ಹಲ್ಲೆಗೊಳಗಾದ ವಿದ್ವತ್ ಲೋಕನಾಥ್ ಸಿಸಿಬಿ ಪೊಲೀಸರ ಮುಂದೆ ಹೇಳಿಕೆ ನೀಡಿದ್ದಾರೆ. ಘಟನೆ ನಡೆದು 15 ದಿನಗಳ ಬಳಿಕ ಅವರು ಚೇತರಿಸಿಕೊಂಡಿದ್ದು, ಪೊಲೀಸರು ಹೇಳಿಕೆ ದಾಖಲು ಮಾಡಿಕೊಂಡರು.
ಶನಿವಾರ ಸಂಜೆ ಮೊಹಮ್ಮದ್ ನಲಪಾಡ್ ಹಲ್ಲೆ ಪ್ರಕರಣದ ತನಿಖೆ ನಡೆಸುತ್ತಿರುವ ಸಿಸಿಬಿ ತನಿಖಾಧಿಕಾರಿ ಅಶ್ವಥ್ ಗೌಡ ಅವರ ನೇತೃತ್ವದ ತಂಡ ಮಲ್ಯ ಆಸ್ಪತ್ರೆಗೆ ಭೇಟಿ ನೀಡಿತ್ತು. ಸುಮಾರು ಎರಡು ಗಂಟೆಗಳ ಕಾಲ ವಿದ್ವತ್ ಹೇಳಿಕೆಯನ್ನು ತಂಡ ದಾಖಲು ಮಾಡಿಕೊಂಡಿತು.
ಫೆ.17ರಂದು ಬೆಂಗಳೂರಿನ ಯು.ಬಿ.ಸಿಟಿಯಲ್ಲಿನ ಫರ್ಜಿ ಕೆಫೆಯಲ್ಲಿ ವಿದ್ವತ್ ಮೇಲೆ ಮೊಹಮ್ಮದ್ ನಲಪಾಡ್ ಮತ್ತು ಆತನ ಸ್ನೇಹಿತರು ಮಾರಣಾಂತಿಕ ಹಲ್ಲೆ ನಡೆಸಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ 7 ಆರೋಪಿಗಳನ್ನು ಬಂಧಿಸಲಾಗಿದ್ದು, ಎಲ್ಲರೂ ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದಾರೆ.
ಮೊಹಮ್ಮದ್ ನಲಪಾಡ್ ಮತ್ತು ಉಳಿದ 6 ಆರೋಪಿಗಳು ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು 63ನೇ ಸೆಷನ್ಸ್ ನ್ಯಾಯಾಲಯ ಶುಕ್ರವಾರ ವಜಾಗೊಳಿಸಿದೆ. ಎಲ್ಲಾ ಆರೋಪಿಗಳ ನ್ಯಾಯಾಂಗ ಬಂಧನದ ಅವಧಿ ಮಾರ್ಚ್ 7ರಂದು ಅಂತ್ಯಗೊಳ್ಳಲಿದೆ. ವಿದ್ವತ್ ನೀಡಿದ ಹೇಳಿಕೆಯ ವಿವರಗಳು ಇಲ್ಲಿವೆ...

ಫೆ.17ರಂದು ಏನಾಯಿತು
ಫೆ.17ರ ಶನಿವಾರ ರಾತ್ರಿ 8 ಗಂಟೆಗೆ ಸ್ನೇಹಿತರ ಜೊತೆ ಫರ್ಜಿ ಕೆಫೆಗೆ ಬಂದೆ. 10 ಗಂಟೆ ಸುಮಾರಿಗೆ ಊಟ ಮುಗಿಸಿ ಹೊರಡಲು ಸಿದ್ಧರಾದೆವು. ಅದೇ ಸಮಯಕ್ಕೆ ಮೊಹಮ್ಮದ್ ನಲಪಾಡ್ ಮತ್ತು ಆತನ ಸ್ನೇಹಿತರು ಕೆಫೆಗೆ ಬಂದರು. ಆಗ ನನ್ನ ಕಾಲು ಮೊಹಮ್ಮದ್ ನಲಪಾಡ್ ಸ್ನೇಹಿತನಿಗೆ ತಾಕುತು.

ಕಾಲು ಚಾಚಿಕೊಂಡು ಕುಳಿತಿದ್ದೀಯಾ?
ಮೊಹಮ್ಮದ್ ನಲಪಾಡ್ ಸ್ನೇಹಿತನಿಗೆ ಕಾಲು ತಾಕಿದ ಕೂಡಲೇ ನಾನು ಕ್ಷಮೆ ಕೇಳಿದೆ. ಆಗ ಸ್ನೇಹಿತನೊಬ್ಬ 'ಏನೋ ಅಣ್ಣನ ಎದುರೇ ಕಾಲು ಚಾಚಿಕೊಂಡು ಕುಳಿತಿದ್ದೀಯಾ?' ಎನ್ನುತ್ತಾ ಗಲಾಟೆ ಆರಂಭಿಸಿದ. ಕಾಲಿನ ಮೂಳೆ ಮುರಿದಿದೆ ಎಂದು ಹೇಳಿದೆ. 'ಅಣ್ಣನ ಎದುರೇ ಮಾತನಾಡುತ್ತೀಯಾ ಎಂದು ಕೆನ್ನೆಗೆ ಹೊಡೆದ'. ನಂತರ ನನ್ನ ಸ್ನೇಹಿತರು ರಕ್ಷಣೆಗೆ ಬಂದರು ಆಗ ಎಲ್ಲರೂ ಸೇರಿ ಹಲ್ಲೆ ಮಾಡಿದರು.

ಬಾಟಲಿಯಿಂದ ಹಲ್ಲೆ ಮಾಡಿದರು
'ಬಾಟಲಿಯಿಂದ ನನ್ನ ಮೇಲೆ ಹಲ್ಲೆ ಮಾಡಿದರು. ಆಗ ಮೂಗಿನಿಂದ ರಕ್ತ ಸುರಿಯಲು ಆರಂಭಿಸಿತು. ಅಷ್ಟಕ್ಕೂ ಸುಮ್ಮನಾಗದೇ ನನ್ನ ಬಟ್ಟೆ ಹರಿದರು. ಕಾಲಿನಿಂದ ಒದೆಯಲು ಆರಂಭಿಸಿದರು. ಸ್ನೇಹಿತರು ನನ್ನನ್ನು ಆಸ್ಪತ್ರೆಗೆ ಸೇರಿಸಲು ಮುಂದಾದರು'.

ಪಾರ್ಕಿಂಗ್ ಲಾಟ್ನಲ್ಲೂ ಹಲ್ಲೆ
'ಸ್ನೇಹಿತರು ಆಸ್ಪತ್ರೆಗೆ ಸೇರಿಸಲು ನನ್ನನ್ನು ಕಾರಿನ ಬಳಿ ಕರೆದುಕೊಂಡು ಬಂದರು ಅಲ್ಲಿಗೂ ಹಿಂಬಾಲಿಸಿಕೊಂಡು ಬಂದ ಮೊಹಮ್ಮದ್ ನಲಪಾಡ್ ಮತ್ತು ಆತನ ಸ್ನೇಹಿತರು ನನ್ನ ಮೇಲೆ ಹಲ್ಲೆ ಮಾಡಿದರು'

ನಲಪಾಡ್ನನ್ನು ಪಾರ್ಟಿಯಲ್ಲಿ ನೋಡಿದ್ದೆ
'ನಲಪಾಡ್ನನ್ನು ಹಿಂದೆ ಪಾರ್ಟಿಗಳಲ್ಲಿ ನೋಡಿದ್ದೆ. ಆದರೆ, ಒಮ್ಮೆಯೂ ಅವರ ಜೊತೆ ಮಾತನಾಡಿರಲಿಲ್ಲ. ಆ ದಿನದ ಕೌರ್ಯ ನೆನಪು ಮಾಡಿಕೊಂಡರೆ ಇಂದಿಗೂ ಭಯವಾಗುತ್ತದೆ'.

ಗುರು ಬಂದಿದ್ದರಿಂದ ಹೊರ ಹೋದರು
'10.20ರ ಸುಮಾರಿಗೆ ಮಲ್ಯ ಆಸ್ಪತ್ರೆಗೆ ನನ್ನನ್ನು ಕರೆದುಕೊಂಡು ಬಂದರು. ನಲಪಾಡ್ ಮತ್ತು ಸ್ನೇಹಿತರು ಅಲ್ಲಿಗೂ ಬಂದು ಬೆದರಿಕೆ ಹಾಕಿದರು. ರಾಜ್ ಕುಮಾರ್ ಅವರ ಮೊಮ್ಮಗ ಗುರು ಆಸ್ಪತ್ರೆಗೆ ಬಂದರು. ಆಗ ನಲಪಾಡ್ ಮತ್ತು ಆತನ ಸ್ನೇಹಿತರು ಅಲ್ಲಿಂದ ತೆರಳಿದರು'.
-
SSLC ಪರೀಕ್ಷೆ-1 ಆರಂಭ: ಮಲ್ಲೇಶ್ವರಂನ ಕೆಪಿಎಸ್ ಶಾಲೆಗೆ ಸಚಿವ ಮಧು ಬಂಗಾರಪ್ಪ ಭೇಟಿ, ವಿದ್ಯಾರ್ಥಿಗಳಿಗೆ ಶುಭಹಾರೈಕೆ -
RCB: ಆರ್ಸಿಬಿಯಲ್ಲಿ ಜೋಶ್ ಹ್ಯಾಜಲ್ವುಡ್ ಸ್ಥಾನ ತುಂಬುವ ಆಟಗಾರ ಇವರೇ ನೋಡಿ -
ಶೆಲ್ ಬಂಕ್ನಲ್ಲಿ ಪೆಟ್ರೋಲ್ ದರ ಏರಿಕೆ: ಬೆಂಗಳೂರಿನಲ್ಲಿ 10 ದಿನಗಳಲ್ಲಿ 4.50 ರೂಪಾಯಿ ಹೆಚ್ಚಳ; ಇಲ್ಲಿದೆ ದರಪಟ್ಟಿ -
Gold Price Today: ಯುಗಾದಿಗೂ ಮೊದಲೇ ಚಿನ್ನದ ದರದಲ್ಲಿ ಭಾರೀ ಇಳಿಕೆ; ಆಭರಣ ಪ್ರಿಯರಿಗೆ ಇಂದೇ ಹಬ್ಬ -
Karnataka Weather: ಧಾರವಾಡದಲ್ಲಿ 101 ಮಿಮೀ ಮಳೆ ದಾಖಲು, ಒಳನಾಡಿಗೆ ಅಲಿಕಲ್ಲು ಸಹಿತ ಮಳೆ ಮುನ್ಸೂಚನೆ -
ಮಗುವನ್ನ ಸಾಕಲು ಹಣ ಬೇಕಾದ್ರೆ ಯಾರ ಜೊತೆ ಬೇಕಿದ್ರೂ ಮಲಗುವೆ: ಬಿಗ್ಬಾಸ್ ಖ್ಯಾತಿಯ ಚಂದ್ರಿಕಾ ದೀಕ್ಷಿತ್ -
Karnataka Weather: ಬೆಂಗಳೂರು ಸೇರಿದಂತೆ ರಾಜ್ಯದ 17 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ -
ಸರಕು ಖಾಲಿಯಾಯ್ತಾ ಪ್ರೇಮ್, ಇಡೀ ದೇಶದ ಮುಂದೆ ಕನ್ನಡಿಗರು ತಲೆತಗ್ಗಿಸುವಂತೆ ಮಾಡಿದಿರಿ: ಸೆರಗ ಸರ್ಸೆ ಹಾಡಿಗೆ ವಿರೋಧ -
ಟೀಂ ಇಂಡಿಯಾಗೆ ನನ್ನದೊಂದು ಸಲಾಂ, ಐಪಿಎಲ್ ಬಗ್ಗೆ ಮನದಾಳದ ಮಾತು ಬಿಚ್ಚಿಟ್ಟ ಪಂಜಾಬ್ ಕಿಂಗ್ಸ್ ಕೋಚ್ ರಿಕಿ ಪಾಂಟಿಂಗ್ -
Horoscope March 17; ಈ ರಾಶಿಯವರ ಅದೃಷ್ಟ ಇಂದು ಬದಲಾಗಬಹುದು -
Byadagi Chilli: ಕರ್ನಾಟಕದ ಕೆಂಪು ಚಿನ್ನ ಬ್ಯಾಡಗಿ ಮೆಣಸಿನಕಾಯಿಗೆ ಹೊಸ ಸಂಕಷ್ಟ, ರೈತರು ಕಂಗಾಲು -
Prem: ಅಂದು ಮೇಲುಕೋಟೆ ಹುಡುಗಿ, ಇಂದು ಸೆರಗ ಸರ್ಸೆ: ವಿವಾದಕ್ಕೆ ಕಾರಣವಾದ ಪ್ರೇಮ್ ಸಿನಿಮಾ ಹಾಡುಗಳು












Click it and Unblock the Notifications