ಗರ್ಭಿಣಿಯರ ಆರೋಗ್ಯಕ್ಕಾಗಿ ಸರ್ಕಾರದಿಂದ ಪೌಷ್ಟಿಕ ಆಹಾರ
ಹುಟ್ಟುವ ಮಕ್ಕಳು ಆರೋಗ್ಯಕರವಾಗಿ ಇರಬೇಕೆಂಬ ಉದ್ದೇಶದಿಂದ ಗರ್ಭೀಣಿಯರ ಆರೋಗ್ಯಕ್ಕಾಗಿ ರಾಜ್ಯ ಸರ್ಕಾ ಮಧ್ಯಾಹ್ನದ ಬಿಸಿಯೂಟ ಒದಗಿಸಲು ಕ್ರಮಕೈಗೊಳ್ಳಲಿದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಉಮಾಶ್ರೀ ತಿಳಿಸಿದರು.
ಬೆಂಗಳೂರು, ನವೆಂಬರ್, 15: ಆರೋಗ್ಯವಂತ ಮಕ್ಕಳಿಗಾಗಿ ಮೊದಲು ಗರ್ಭಿಣಿಯರಿಗೆ ಆರೋಗ್ಯ ಚೆನ್ನಾಗಿರಬೇಕು. ಆದ್ದರಿಂದ ರಾಜ್ಯ ಸರ್ಕಾರ ಗರ್ಭಿಣಿಯರಿಗೆ ಪೌಷ್ಟಿಕ ಯುಕ್ತ ಮದ್ಯಾಹ್ನದ ಬಿಸಿಯೂಟ ಒದಗಿಸಲಿದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ಧಿ ಸಚಿವೆ ಉಮಾಶ್ರೀ ತಿಳಿಸಿದರು.
ಆರೋಗ್ಯವಂತ ಮಕ್ಕಳಿಂದ ಮಾತ್ರ ಉತ್ತಮ ದೇಶ ಕಟ್ಟಲು ಸಾಧ್ಯ. ಹಾಗಾಗಿ ಸರ್ಕಾರ ಗರ್ಭಿಣಿಯರ ಆರೋಗ್ಯದ ಬಗ್ಗೆ ಹೆಚ್ಚಿನ ಒತ್ತನ್ನು ನೀಡುತ್ತಿದ್ದು ಗರ್ಭಿಣಿಯರಿಗಾಗಿ ಸರ್ಕಾರ ಅನೇಕ ಕಲ್ಯಾಣ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತಿದೆ ಎಂದು ಉಮಾಶ್ರೀ ಅವರು ತಿಳಿಸಿದರು.

ಮಕ್ಕಳ ದಿನಾಚರಣೆ ಅಂಗವಾಗಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ನಗರದ ಬಾಲಭವನದಲ್ಲಿ ಸೋಮವಾರ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಮಕ್ಕಳ ಕಲ್ಯಾಣ ಕ್ಷೇತ್ರದಲ್ಲಿ ಉತ್ತಮ ಸೇವೆ ಸಲ್ಲಿಸಿದ ವ್ಯಕ್ತಿಗಳಿಗೆ ರಾಜ್ಯ ಪ್ರಶಸ್ತಿ ಪ್ರದಾನ ಮಾಡಿ ಅವರು ಮಾತನಾಡಿದರು.
ಗರ್ಭಾವಸ್ಥೆಯಲ್ಲಿ ಗರ್ಭಿಣಿಯರಿಗೆ ಉತ್ತಮ ರೀತಿಯ ಪೌಷ್ಟಿಕ ಆಹಾರ ನೀಡುವುದು ಹಾಗೂ ಅವರನ್ನು ಖುಷಿಯಾಗಿ ಇಡುವುದು ನಮ್ಮ ಜವಾಬ್ದಾರಿ. ಗರ್ಭಿಣಿಯರಿಗೆ ಬಿಸಿಯೂಟ ನೀಡುವ ಪ್ರಾಯೋಗಿಕ ಯೋಜನೆ ಈಗಾಗಲೇ ಜಾರಿಯಲ್ಲಿದ್ದು ಮುಂದಿನ ವರ್ಷದಿಂದ ರಾಜ್ಯದಾದ್ಯಂತ ವಿಸ್ತರಿಸುವ ಗುರಿ ಹೊಂದಲಾಗಿದೆ ಎಂದು ಅವರು ತಿಳಿಸಿದರು.
ಗರ್ಭಿಣಿಯರಿಗಾಗಿ ಅವರು ತೆಗೆದುಕೊಳ್ಳಬೇಕಾದ ಕ್ರಮಗಳನ್ನು ಒಳಗೊಂಡ ಸಿ.ಡಿ.ಯನ್ನು ಇಲಾಖೆ ಈಗಾಗಲೇ ಬಿಡುಗಡೆಗೊಳಿಸಿದ್ದು, ವಂಶೋದ್ಧಾರಕಿಯನ್ನು ಚೆನ್ನಾಗಿ ನೋಡಿಕೊಳ್ಳುವ ಜವಾಬ್ಧಾರಿ ನಮ್ಮ ಮೇಲಿದೆ ಎಂದು ಹೇಳಿದರು.
ಮಕ್ಕಳ ದಿನಾಚರಣೆ ಪ್ರಯುಕ್ತ ರಾಜ್ಯ ಸರ್ಕಾರ ಮತ್ತು ಕೇಂದ್ರ ಸರ್ಕಾರ ನೀಡುವ ಪ್ರಶಸ್ತಿ ವಿಜೇತರಿಗೆ ಶುಭ ಕೋರಿದ ಅವರು ಅವಘಡಗಳಲ್ಲಿ ಬೇರೆಯವರ ಪ್ರಾಣ ರಕ್ಷಣೆಯಲ್ಲಿ ಸಾಹಸ ಮೆರೆದು ಪ್ರಾಣ ಕಳೆದುಕೊಂಡ ಮಕ್ಕಳ ಪಾಲಕರಿಗೆ ಸಾಂತ್ವನ ಹೇಳಿದರು.
ಕಾರ್ಯಕ್ರಮದಲ್ಲಿ ವಿಧಾನಸಭೆ ಸದಸ್ಯೆ ಹಾಗೂ ಸಂಸದೀಯ ಕಾರ್ಯದರ್ಶಿಗಳು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಶ್ರೀಮತಿ ಶಕುಂತಲಾ ಟಿ. ಶೆಟ್ಟಿ, ಸೇರಿದಂತೆ ಹಿರಿಯ ಅಧಿಕಾರಿಗಳು, ಮಕ್ಕಳು, ಪಾಲಕರು ಉಪಸ್ಥಿತರಿದ್ದರು.
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications