ತೀವ್ರಗೊಂಡ ಬಿಸಿಯೂಟ ನೌಕರರ ಪ್ರತಿಭಟನೆ: ಬೇಡಿಕೆಗಳೇನು?
ಬೆಂಗಳೂರು, ಜನವರಿ 21: ಇಂದಿನಿಂದ ಎರಡು ದಿನಗಳ ಕಾಲ ಬಿಸಿಯೂಟ ನೌಕರರು ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನದಲ್ಲಿ ಪ್ರತಿಭಟನೆ ಹಮ್ಮಿಕೊಂಡಿದ್ದಾರೆ.
ಸರ್ಕಾರಿ ಶಾಲೆಗಳಲ್ಲಿ ಓದುತ್ತಿರುವ ಮಕ್ಕಳ ಪೋಷಕರು ಶಾಲೆಗಳಲ್ಲಿ ಎರಡು ದಿನಗಳ ಕಾಲ ಅಡುಗೆ ತಯಾರಿಸಲು ಒಪ್ಪಿಕೊಂಡ ಹಿನ್ನೆಲೆಯಲ್ಲಿ ಯಾವ ಮಕ್ಕಳಿಗೂ ತೊಂದರೆಯಾಗದಂತೆ ವ್ಯವಸ್ಥೆ ಮಾಡಿ ಬಂದು ಪ್ರತಿಭಟನೆ ಆರಂಭಿಸಿದ್ದಾರೆ.
ಕನಿಷ್ಠ ವೇತನ ಒದಗಿಸುವಂತೆ ಅವರು ಒತ್ತಾಯಿಸುತ್ತಿದ್ದಾರೆ. ಇಂದು ಸ್ವಾತಂತ್ರ್ಯ ಉದ್ಯಾನದ ಸುತ್ತಮುತ್ತಲ ಪ್ರದೇಶಗಳಲ್ಲಿ ಟ್ರಾಫಿಕ್ ಜಾಮ್ ಉಂಟಾಗಿದೆ.

ಪ್ರಮುಖ ಬೇಡಿಕೆಗಳೇನು?
ಕನಿಷ್ಠ ವೇತನ, ಉದ್ಯೋಗ ಭದ್ರತೆ, ಪಿಎಫ್, ಇಎಸ್ಐ ಸೌಲಭ್ಯ, ಮೂರು ಸಾವಿರ ಪಿಂಚಣಿ ಹಾಗೂ ನಿವೃತ್ತಿ ಹೊಂದಿದ ಮೇಲೆ 2 ಲಕ್ಷ ರೂ. ಕೈಗೆ ಬರುವಂತೆ ಮಾಡುವಂತೆ ಒತ್ತಾಯಿಸುತ್ತಿದ್ದಾರೆ.
ಬೆಂಗಳೂರಿನ ಸಂಗೊಳ್ಳಿ ರಾಯಣ್ಣ ರೈಲು ನಿಲ್ದಾಣದಿಂದ ಜಾತಾ ಮೂಲಕ ಪ್ರತಿಭಟನಾಕಾರರು ಸ್ವಾತಂತ್ರ್ಯ ಉದ್ಯಾನಕ್ಕೆ ಆಗಮಿಸುತ್ತಿದ್ದಾರೆ. ಎರಡು ದಿನಕ್ಕೆ ಬೇಕಾಗುವ ಊಟ, ಹೊದಿಗೆ ವ್ಯವಸ್ಥೆಗಳನ್ನು ಮಾಡಿಕೊಂಡಿರುವುದಾಗಿ ಕರ್ನಾಟಕ ರಾಜ್ಯ ಬಿಸಿಯೂಟ ನೌಕರರ ಸಂಘದ ಕೆಜಿ ಸೋಮರಾಜೆ ತಿಳಿಸಿದ್ದಾರೆ.

ಮೈಸೂರಿನಲ್ಲಿ ಒಟ್ಟು ಎಷ್ಟು ಬಿಸಿಯೂಟ ನೌಕರರಿದ್ದಾರೆ
ಮೈಸೂರಿನಲ್ಲಿ ಒಟ್ಟು 5206 ಮಂದಿ ಬಿಸಿಯೂಟ ನೌಕರರಿದ್ದಾರೆ. ಎಚ್ಡಿ ಕೋಟೆಯಲ್ಲಿ 725, ಹುಣಸೂರಿನಲ್ಲಿ 727, ಕೆಆರ್ ನಗರದಲ್ಲಿ 591, ಮೈಸೂರು ತಾಲೂಕಿನಲ್ಲಿ 621, ಮೈಸೂರು ಉತ್ತರದಲ್ಲಿ 363, ಮೈಸೂರು ದಕ್ಷಿಣದಲ್ಲಿ 182, ನಂಜನಗೂಡಿನಲ್ಲಿ 758, ಪೆರಿಯಾಪಟ್ಟಣದಲ್ಲಿ 623, ಟಿ ನರಸೀಪುರದಲ್ಲಿ 589 ಮಂದಿ ಬಿಸಿಯೂಟ ನೌಕರರಿದ್ದಾರೆ.

ಜಿಲ್ಲೆಯಲ್ಲಿರುವ ಯಾವ ಮಕ್ಕಳಿಗೂ ತೊಂದರೆಯಾಗಲ್ಲ
ಜಿಲ್ಲೆಯಲ್ಲಿರುವ ಯಾವ ಮಕ್ಕಳಿಗೂ ತೊಂದರೆಯಾಗುವುದಿಲ್ಲ, ನಾವು ಕೆಲಸ ಮಾಡುತ್ತಿರುವ ಶಾಲೆಗಳಲ್ಲಿ ಓದುತ್ತಿರುವ ಮಕ್ಕಳ ಪೋಷಕರ ಬಳಿ ಮನವಿ ಮಾಡಿದ್ದೇವೆ. ಅವರು ಬಿಸಿಯೂಟ ತಯಾರು ಮಾಡಲು ಒಪ್ಪಿಕೊಂಡ ಬಳಿಕವೇ ನಾವು ಪ್ರತಿಭಟನೆ ನಡೆಸಲು ನಿರ್ಧರಿಸಿದೆವು ಎಂದು ಬಿಸಿಯೂಟ ನೌಕರರೊಬ್ಬರು ತಿಳಿಸಿದ್ದಾರೆ.

ಎರಡು ದಿನ ಪ್ರತಿಭಟನೆ
ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನದೆದುರು ಜನವರಿ 21 ಹಾಗೂ 22 ರಂದು ಬಿಸಿಯೂಟ ನೌಕರರು ಪ್ರತಿಭಟನೆ ಹಮ್ಮಿಕೊಂಡಿದ್ದಾರೆ. ರೈಲ್ವೆ ನಿಲ್ದಾಣದಿಂದ ಸ್ವಾತಂತ್ರ್ಯ ಉದ್ಯಾನಕ್ಕೆ ಈಗಾಗಲೇ ಪ್ರತಿಭಟನಾ ಮೆರವಣಿಗೆ ಆರಂಭವಾಗಿದೆ.
-
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
ಬೆಂಗಳೂರು ಬಿಸಿನೆಸ್ ಕಾರಿಡಾರ್ ಯೋಜನೆಗೆ ಚಾಲನೆ: ಕಾಮಗಾರಿಗೆ 3,348 ಕೋಟಿ ರೂ ಟೆಂಡರ್ ಆಹ್ವಾನ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ -
Dolly Dhananjay: ಆ ಚಿತ್ರಕಥೆ.. 6 ತಿಂಗಳು ನನ್ನ ಟೇಬಲ್ ಮೇಲೆ ಬಿದ್ದಿತ್ತು: ನಟ ಡಾಲಿ ಧನಂಜಯ್ -
SSLC Maths Exam: ಎಸ್ಎಸ್ಎಲ್ಸಿ ಗಣಿತ ಪರೀಕ್ಷೆಯಲ್ಲಿ ಪಠ್ಯದ ಹೊರತಾದ ಪ್ರಶ್ನೆಗಳ ಆರೋಪ, ಕೃಪಾಂಕಕ್ಕಾಗಿ ಹೆಚ್ಚಿದ ಒತ್ತಾಯ -
ಪರಮಾತ್ಮ ಹೇಳಿದ್ರೂ ಹಿಂದೆ ಸರಿಯಲ್ಲ ಎಂದಿದ್ದ ಕಾಂಗ್ರೆಸ್ನ ಸಾದಿಕ್ ಪೈಲ್ವಾನ್ ನಾಮಪತ್ರ ಹಿಂಪಡೆಯಲು ಇದೆ ಹಲವು ಕಾರಣ -
Tamil Nadu Election: ತನ್ನ ಡ್ರೈವರ್ ಮಗನಿಗೆ MLA ಟಿಕೆಟ್ ಘೋಷಿಸಿದ ನಟ ದಳಪತಿ ವಿಜಯ್, ಭಾವುಕ ಕ್ಷಣದ ವಿಡಿಯೋ ವೈರಲ್ -
ವಿರಾಟ್ ಅಸಲಿ ಆಟ ಇನ್ನೂ ಬಾಕಿಯಿದೆ; ಕಿಂಗ್ ಕೊಹ್ಲಿಗೆ ವಿಶೇಷ ಮನವಿ ಮಾಡಿಕೊಂಡ ಅಂಬಟಿ ರಾಯುಡು, ಭಾರೀ ವೈರಲ್ -
Bengaluru Weather: ನಗರಕ್ಕೆ ಇಂದು ಸೋಮವಾರವು ಗುಡುಗು ಸಹಿತ ಮಳೆ ಎಚ್ಚರಿಕೆ, ಸವಾರರೇ ಗಮನಿಸಿ -
Prakash Raj Mother passed Away: ನಟ ಪ್ರಕಾಶ್ ರಾಜ್ ತಾಯಿ ಸ್ವರ್ಣಲತಾ ನಿಧನ, ಚಿತ್ರರಂಗದ ಗಣ್ಯರಿಂದ ಸಂತಾಪ












Click it and Unblock the Notifications