Breaking: ಬೆಂಗಳೂರಿನಲ್ಲಿ ಎರಡು ಭಾರಿ ಭೂಮಿ ಕಂಪಿಸಿದ ಅನುಭವ
ಬೆಂಗಳೂರು, ನವೆಂಬರ್ 26: ನಗರದಲ್ಲಿ ಎರಡು ಭಾರಿ ಭೂಮಿ ಕಂಪಿಸಿದ ಅನುಭವವಾಗಿದೆ.
Recommended Video
ಜೆಪಿ ನಗರ, ಯಲಚೇನಹಳ್ಳಿ, ರಾಜರಾಜೇಶ್ವರಿ ನಗರ, ಕೆಂಗೇರಿ, ಕಗ್ಗಲೀಪುರ, ಹೆಮ್ಮಿಗೆಪುರ, ಜ್ಞಾನಭಾರತಿನಗರ, ಮೈಸೂರು ರಸ್ತೆಯ ಕೆಲ ಪ್ರದೇಶಗಳಲ್ಲಿ ಭೂಮಿ ಕಂಪಿಸಿರುವ ಅನುಭವವಾಗಿದೆ.
ಎರಡು ಸಲ ಭೂಮಿ ಕಂಪಿಸಿದ ಅನುಭವವಾಗಿದೆ. ಮೊದಲ ಸಲ ಲಘುವಾಗಿ ಕಂಪಿಸಿದ ಅನುಭವವಾಗಿದ್ದು, ನಂತರ ಭಾರೀ ಶಬ್ದ ಕೇಳಿಬಂದಿತ್ತು ಎಂದು ಹಲವರು ಮಾಹಿತಿ ನೀಡಿದ್ದಾರೆ. ಹೆಚ್ಚಿನ ಮಾಹಿತಿ ಇನ್ನಷ್ಟೇ ಬರಬೇಕಿದೆ.
ಇಂದು ಮಧ್ಯಾಹ್ನ 12:15ರ ಸುಮಾರಿಗೆ 10-15 ನಿಮಿಷಗಳ ಅಂತರದಲ್ಲಿ 2 ಭಾರೀ ಬೆಂಗಳೂರಿನ ಆರ್.ಆರ್ ನಗರ, ನಾಗರಭಾವಿ, ಕೆಂಗೇರಿ, ಯಶವಂತಪುರ, ಕಗ್ಗಲಿಪುರ, ಹೆಗ್ಗಲಪುರ, ಜ್ಞಾನಭಾರತಿ, ಉಲ್ಲಾಳ ಸೇರಿದಂತೆ ಹಲವೆಡೆ ದೊಡ್ಡ ಶಬ್ಧ ಉಂಟಾಗಿದೆ. ಇದರ ಪರಿಣಾಮ ಮನೆಯಲ್ಲಿರುವ ಕೆಲವು ವಸ್ತುಗಳು ಕೆಳಕ್ಕುರುಳಿದೆ. ಇದರಿಂದಾಗಿ ಬೆಂಗಳೂರಿನ ಜನರು ಆತಂಕಕ್ಕೆ ಒಳಗಾಗಿದ್ದಾರೆ.
ಮತ್ತೊಂದೆಡೆ ಮಂಡ್ಯದಲ್ಲಿ ಕೂಡ ಬೆಳಗ್ಗೆ 11.50ರ ಸುಮಾರಿಗೆ ಇದೇ ರೀತಿ ಜೋರು ಶಬ್ಧ ಕೇಳಿ ಬಂದಿದ್ದು, ಶಬ್ಧಕ್ಕೆ ಮನೆ, ಕಚೇರಿ ಕಟ್ಟಡಗಳ ಕಿಟಕಿಗಳು, ವಸ್ತುಗಳು ನಡುಗಿದೆ. ಈ ಹಿಂದೆ ಕೆಆರ್ಎಸ್, ಪಾಂಡವಪುರ, ಶ್ರೀರಂಗಪಟ್ಟಣ ವ್ಯಾಪ್ತಿಯಲ್ಲಿ ಕೂಡ ಈ ಶಬ್ಧ ಕೇಳಿಬಂದಿತ್ತು.
ರಾಮನಗರ ಜಿಲ್ಲೆಯ ಕೆಲವೆಡೆ ಭೂಮಿ ಕಂಪಿಸಿದ ಅನುಭವವಾಗಿದೆ, ಮಾಗಡಿ, ಚನ್ನಪಟ್ಟಣದಲ್ಲಿ ಜನರಿಗೆ ಈ ಅನುಭವವಾಗಿದೆ, ಚನ್ನಪಟ್ಟಣದ ಮೆಣಸಿಗನಹಳ್ಳಿ ಭಾಗದ ರೈತರು ಆತಂಕಗೊಂಡಿದ್ದಾರೆ, ಸುಮಾರು 12.30ರ ಸುಮಾರಿಗೆ ಈ ಅನುಭವವಾಗಿದೆ, ಮಾಗಡಿಯ ಕೆಲವು ಪ್ರದೇಶಗಳಲ್ಲಿಯೂ ಭೂಮಿ ಕಂಪಿಸಿದ ಅನುಭವವಾಗಿದೆ.
ಕೆಂಗೇರಿ ಹಾಗೂ ಅದರ ಸುತ್ತಮುತ್ತಲಿನಲ್ಲಿ ಕೇಳಿಸಿದ ಶಬ್ದ ಭೂಕಂಪ ಅಲ್ಲ ಎಂದು ಕೆಎಸ್ಎನ್ಡಿಎಂಸಿ ಸ್ಪಷ್ಟನೆ ನೀಡಿದೆ.