ಸರ್ಕಾರಿ ನೌಕರರಿಗೆ ಸಿಹಿಸುದ್ದಿ: ಶೀಘ್ರದಲ್ಲೇ ಮಿಲಿಟರಿ ಕ್ಯಾಂಟೀನ್ ಮಾದರಿಯಲ್ಲಿ ಸಿಗಲಿದೆ ದಿನಸಿ, ಅಗತ್ಯ ಸರಕುಗಳು
ರಾಜ್ಯ ಸರ್ಕಾರಿ ಉದ್ಯೋಗಿಗಳು ಇನ್ನು ಮುಂದೆ ಸೇನಾ ಸಿಬ್ಬಂದಿ ಮಾದರಿಯಲ್ಲಿ ಅಗತ್ಯ ವಸ್ತುಗಳು ಮತ್ತು ದಿನಸಿಯನ್ನು ರಿಯಾಯಿತಿ ದರದಲ್ಲಿ ಖರೀದಿಸಬಹುದು. ಹೇಗೆ ಅಂತೀರಾ ಈ ಸುದ್ದಿ ಓದಿ.
ಬೆಂಗಳೂರು, ಜನವರಿ. 30: ರಾಜ್ಯ ಸರ್ಕಾರಿ ಉದ್ಯೋಗಿಗಳಿಗೆ ಸರ್ಕಾರ ಸಿಹಿಸುದ್ದಿ ನೀಡಿದ್ದು, ಶೀಘ್ರದಲ್ಲೇ ಮಿಲಿಟರಿ ಸಿಬ್ಬಂದಿ ಮಾದರಿಯಲ್ಲೇ ಇವರು ರಿಯಾಯಿತಿ ದರದಲ್ಲಿ ದಿನಸಿ ಮತ್ತು ಅಗತ್ಯ ವಸ್ತುಗಳನ್ನು ಖರೀದಿಸಬಹುದಾಗಿದೆ.
ಹೌದು, ಸರ್ಕಾರ ರಾಜ್ಯಾದ್ಯಂತ ಎಲ್ಲಾ ಜಿಲ್ಲೆಗಳಲ್ಲಿ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದಿಂದ ಸೇನಾ ಕ್ಯಾಂಟೀನ್ ಮಾದರಿಯ ವ್ಯವಸ್ಥೆಯನ್ನು ಸ್ಥಾಪಿಸಲಿದೆ. ನೌಕರರ ಸಂಘ ಸ್ಥಾಪಿಸುವ ಈ ಫ್ಯಾಮಿಲಿ ಮಾರ್ಟ್ಗಳಲ್ಲಿ ಸರ್ಕಾರಿ ನೌಕರರು ಶೇಕಡಾ 10 ರಿಂದ 60 ರಷ್ಟು ರಿಯಾಯಿತಿಯಲ್ಲಿ ಅಗತ್ಯ ಸರಕುಗಳು ಮತ್ತು ದಿನಸಿಗಳನ್ನು ಖರೀದಿಸಬಹುದು.
ಮಾರ್ಟ್ ಕ್ಯಾಂಟೀನ್ ಸ್ಟೋರ್ಸ್ ಡಿಪಾರ್ಟ್ಮೆಂಟ್ (ಸಿಎಸ್ಡಿ) ಯಂತೆಯೇ ಈ ಫ್ಯಾಮಿಲಿ ಮಾರ್ಟ್ಗಳು ಇರಲಿವೆ. ಸಿಎಸ್ಡಿಗಳಲ್ಲಿ ಸೈನಿಕರು, ಮಾಜಿ ಸೈನಿಕರು ಮತ್ತು ಅವರ ಕುಟುಂಬಗಳಿಗಾಗಿ ಮಾಡಲಾಗಿದ್ದು, ಇವುಗಳನ್ನು ಮಿಲಿಟರಿ ಕ್ಯಾಂಟೀನ್ ಎಂದು ಕರೆಯಲಾಗುತ್ತದೆ. ಇವುಗಳಲ್ಲಿ ದಿನಸಿ, ಎಲೆಕ್ಟ್ರಾನಿಕ್ ವಸ್ತುಗಳು ಮತ್ತು ಇತರ ವಸ್ತುಗಳು ಸೇರಿದಂತೆ ದೈನಂದಿನ ಬಳಕೆಗೆ ಗುಣಮಟ್ಟದ ಉತ್ಪನ್ನಗಳು ಮಾರ್ಟ್ನಲ್ಲಿ ಭಾರಿ ರಿಯಾಯಿತಿ ದರದಲ್ಲಿ ಲಭ್ಯವಿರುತ್ತವೆ.

ಪ್ರಸ್ತುತ, ರಾಜ್ಯ ಸರ್ಕಾರದ ಕೃಷಿ, ಗೃಹ, ನಗರಾಭಿವೃದ್ಧಿ, ಆರೋಗ್ಯ, ಪ್ರವಾಸೋದ್ಯಮ, ಶಿಕ್ಷಣ, ಆಹಾರ ಮತ್ತು ನಾಗರಿಕ ಸರಬರಾಜು ಸೇರಿದಂತೆ 72 ಇಲಾಖೆಗಳಲ್ಲಿ 5.2 ಲಕ್ಷ ಉದ್ಯೋಗಿಗಳಿದ್ದಾರೆ. ಮಾಜಿ ಉದ್ಯೋಗಿಗಳು ಮತ್ತು ಅವರ ಕುಟುಂಬದವರು ಕೂಡ ಈ ಮಾರ್ಟ್ ಅನ್ನು ಬಳಸಿಕೊಳ್ಳಬಹುದು.
"ಶಿವಮೊಗ್ಗದಲ್ಲಿ ಮೊದಲ ಫ್ಯಾಮಿಲಿ ಮಾರ್ಟ್ ಉದ್ಘಾಟನೆಯಾಗಲಿದೆ. ಫೆಬ್ರವರಿ 4 ರಂದು ರಾಜ್ಯ ಮಟ್ಟದ ಸರ್ಕಾರಿ ನೌಕರರ ಸಮಾವೇಶವನ್ನು ಆಯೋಜಿಸಿದ್ದೇವೆ. ಈ ವೇಳೆ ಮಾರ್ಟ್ ಅನ್ನು ಉದ್ಘಾಟಿಸಲಾಗುವುದು. ರಾಜ್ಯಾದ್ಯಂತ ಎಲ್ಲಾ ಜಿಲ್ಲೆಗಳಲ್ಲಿ ಇದೇ ರೀತಿಯ ಮಾರ್ಟ್ಗಳನ್ನು ಸ್ಥಾಪಿಸಲಾಗುವುದು" ಎಂದು ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್.ಷಡಕ್ಷರಿ ಮಾಹಿತಿ ನೀಡಿದ್ದಾರೆ.

"ಈ ಮಾರ್ಟ್ಗಳು ಸರ್ಕಾರಿ ಭೂಮಿಯಲ್ಲಿ ಇರಲಿದ್ದು, ಅವುಗಳನ್ನು ಖಾಸಗಿ ಏಜೆನ್ಸಿ ನಡೆಸಲಿವೆ. ಇಲ್ಲಿ ದೊರೆಯುವ ಉತ್ಪನ್ನಗಳು ಸಿಬ್ಬಂದಿಗೆ ಕೈಗೆಟುಕುವ ದರದಲ್ಲಿ ಲಭ್ಯವಿರುತ್ತವೆ . ಹೆಚ್ಚಿನ ಸಂಖ್ಯೆಯ ಉದ್ಯೋಗಿಗಳು ವಸ್ತುಗಳನ್ನು ಖರೀದಿಸಲು ಬರುವುದರಿಂದ, ಅವುಗಳನ್ನು ನಡೆಸುವ ಏಜೆನ್ಸಿಗೆ ಇದು ಆರ್ಥಿಕವಾಗಿ ಸಹಾಯ ಮಾಡುತ್ತದೆ" ಎಂದು ಸಿ.ಎಸ್.ಷಡಕ್ಷರಿ ಹೇಳಿದ್ದಾರೆ.
"ಮಾರ್ಟ್ಗಳನ್ನು ಸ್ಥಾಪಿಸಲು ಈಗಾಗಲೇ ಪ್ರತಿ ಜಿಲ್ಲೆಯಲ್ಲೂ ಭೂಮಿಯನ್ನು ಪಡೆಯಲಾಗುತ್ತಿದೆ. ಬೆಂಗಳೂರಿನಲ್ಲಿ, ಕನಿಷ್ಠ ನಾಲ್ಕು ಮಾರ್ಟ್ಗಳನ್ನು ಆರಂಭಿಸಬೇಕಾಗುತ್ತದೆ. ಆದರೆ ಮುಖ್ಯ ವಿಷಯವೆಂದರೆ ಬೆಂಗಳೂರಿನಲ್ಲಿ ಭೈಮಿ ಸಿಗುವುದು. ಈ ಬಗ್ಗೆ ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಮಾತನಾಡುತ್ತೇವೆ. ನಾಲ್ಕು ದಿಕ್ಕಿನಲ್ಲಿ ಮಾರ್ಟ್ಗಳನ್ನು ಸ್ಥಾಪಿಸಲಾಗುವುದು. ಇದು ಸಿಬ್ಬಂದಿಗೆ ಹತ್ತಿರದ ಮಾರ್ಟ್ನಿಂದ ಉತ್ಪನ್ನಗಳನ್ನು ಖರೀದಿಸಲು ಅನುಕೂಲಕರವಾಗಿದೆ" ಎಂದು ಹೇಳಿದ್ದಾರೆ.
-
IPL 2026 RCB: ಹ್ಯಾಜಲ್ವುಡ್, ಯಶ್ ದಯಾಳ್ ಅಲಭ್ಯರಾದ್ರೆ ಆರ್ಸಿಬಿ ಮುಂದಿರುವ 'ಪ್ಲಾನ್ ಬಿ' ಏನು? -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಬೆಂಗಳೂರು ಇ-ಖಾತಾ ದಂಧೆ ಬಯಲು: ಬ್ರ್ಯಾಂಡ್ ಬೆಂಗಳೂರಿಗೆ ಆರ್ ಅಶೋಕ್ ತೀವ್ರ ಟೀಕೆ -
Bengaluru: 50 ವಾರ್ಡ್ಗಳಲ್ಲಿ ಕಸ ವಿಲೇವಾರಿ ಸ್ಥಗಿತ; ವೇತನ ವಿಳಂಬಕ್ಕೆ ಮುನಿದು ಸಾಮೂಹಿಕ ರಜೆ ಹಾಕಿದ ಕಾರ್ಮಿಕರು -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
Bengaluru: ಬಿಡಿಎಗೆ 50ರ ಸಂಭ್ರಮ; ಹೊಸ ಲೋಗೋ, ಟ್ಯಾಗ್ಲೈನ್ ವಿನ್ಯಾಸ ಮಾಡಿ 1 ಲಕ್ಷ ರೂ. ಬಹುಮಾನ ಗೆಲ್ಲಿ -
ಮಾರ್ಚ್ 24ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಸರ್ಕಾರಿ PU ಕಾಲೇಜುಗಳ ಮೂಲಸೌಕರ್ಯ ಅಭಿವೃದ್ಧಿಗೆ ಬರೋಬ್ಬರಿ 9,383 ರೂ. ಲಕ್ಷ ಅನುದಾನ ಮಂಜೂರು -
ಹಿಂದುಳಿದ, ದುರ್ಬಲ ವರ್ಗದ ಮಕ್ಕಳಿಗೆ ಖಾಸಗಿ ಅನುದಾನ ರಹಿತ ಶಾಲೆಗಳಲ್ಲಿ ಶೇ. 25 ರಷ್ಟು ಉಚಿತ ಪ್ರವೇಶಕ್ಕೆ ಅರ್ಜಿ ಆಹ್ವಾನ












Click it and Unblock the Notifications