ಏ. 29, 30 ರಂದು ಸಿರಿಧಾನ್ಯ ಅಡುಗೆ ಸ್ಪರ್ಧೆ: ನೀವೂ ಭಾಗವಹಿಸಿ!
ಕೃಷಿ ಇಲಾಖೆ ಆಯೋಜಿಸಿರುವ ಸಿರಿಧಾನ್ಯ ಮೇಳದಲ್ಲಿ ಸಿರಿಧಾನ್ಯದಿಂದ ತಯಾರಿಸಿದ ಅಡುಗೆ ಸ್ಪರ್ಧೆ ನಡೆಯಲಿದೆ.ಆಸಕ್ತರು ಭಾಗವಹಿಸಬಹುದು.
ಬೆಂಗಳೂರು, ಏಪ್ರಿಲ್ 21: ಆರೋಗ್ಯಕ್ಕೆ ಉತ್ತಮ ಎಂದು ನಿಮ್ಮ ಮನೆಯಲ್ಲಿ ಪ್ರತಿದಿನ ಮಿಲ್ಲೆಟ್ ಅಡುಗೆ ಮಾಡುತ್ತೀರಾ? ನಿಮ್ಮ ಅಡುಗೆ ಚಮಾತ್ಕಾರವನ್ನು ನಾಲ್ಕಾರು ಜನರಿಗೆ ತೋರಿಸುವ ಆಸೆಯಿದೆಯಾ? ಹಾಗಾದರೆ ಏಪ್ರಿಲ್ 29 ಮತ್ತು 30 ರಂದು ಬೆಂಗಳೂರಿನ ಅರಮನೆ ಮೈದಾನಕ್ಕೆ ಬನ್ನಿ.
ಕರ್ನಾಟಕ ರಾಜ್ಯದ ಕೃಷಿ ಇಲಾಖೆ ವಿವಿಧ ಇಲಾಖೆಗಳ ಸಹಯೋಗದಲ್ಲಿ, ಇದೇ ತಿಂಗಳ 27 ರಿಂದ 30 ರವರೆಗೆ ರಾಷ್ಟ್ರೀಯ ವ್ಯಾಪಾರ ಮೇಳ- ಸಾವಯವ ಮತ್ತು ಸಿರಿಧಾನ್ಯ 2017 ಕಾರ್ಯಕ್ರಮವನ್ನು ಆಯೋಜಿಸಿದೆ.

ಕಾರ್ಯಕ್ರಮದ ಭಾಗವಾಗಿ ಸಿರಿಧಾನ್ಯ ಅಡುಗೆ ಸ್ಪರ್ಧೆಯೂ ಇರಲಿದೆ! ಈ ಸ್ಪರ್ಧೆಗಳು ಏಪ್ರಿಲ್ 29 ಮತ್ತು 30 ರಂದು ನಡೆಯಲಿದ್ದು, ಆಸಕ್ತರು ತಮ್ಮ ಅಡುಗೆಯ ರುಚಿಯನ್ನು ಅಂದು ಎಲ್ಲರಿಗೂ ಉಣಬಡಿಸಬಹುದು! ವಿಜೇತರಿಗೆ 8,000 ರೂ. ನಗದು ಬಹುಮಾನವಿವೆ.
ಸಿಹಿ ತಿಂಡಿ, ಬೇಕರಿ ತಿನಿಸು ಸೇರಿದಂತೆ ಮೂರು ವಿಭಿನ್ನ ಸ್ಪರ್ಧೆಗಳಿದ್ದು, ಸ್ಪರ್ಧೆಗೆ ಹೆಸರನ್ನು ನೋಂದಾಯಿಸಲು ನಾಳೆಯೇ ಕೊನೆಯ ದಿನ (ಏಪ್ರಿಲ್ 22), ಸ್ಪರ್ಧಿಗಳು ತಮ್ಮ ನೋಂದಾವಣೆಯನ್ನು ಖಚಿತಪಡಿಸಲು ಅಥವಾ ಹೆಸರನ್ನು ಹಿಂಪಡೆಯಲು ಏಪ್ರಿಲ್ 24 ಕೊನೆಯ ದಿನವಾಗಿರುತ್ತದೆ. ಹೆಸರನ್ನು ನೋಂದಾಯಿಸಲು ಮತ್ತು ಹೆಚ್ಚಿನ ಮಾಹಿತಿ ತಿಳಿಯಲು ಇಲ್ಲಿ ಕ್ಲಿಕ್ ಮಾಡಿ.

ರಾಷ್ಟ್ರೀಯ ವ್ಯಾಪಾರ ಮೇಳ- ಸಾವಯವ ಮತ್ತು ಸಿರಿಧಾನ್ಯ 2017
ರಾಸಾಯನಿಕ ಮುಕ್ತ, ಕಲಬೆರಿಕೆಯಿಲ್ಲದ ಆಹಾರ ಪಡೆಯುವುದೇ ಬಹುದೊಡ್ಡ ಸವಾಲೆನ್ನಿಸಿರುವ ಈ ಕಾಲದಲ್ಲಿ ಸಿರಿಧಾನ್ಯಗಳು ವರವಾಗಿ ಪರಿಚಿತವಾಗಿವೆ. ಅದಕ್ಕೆಂದೇ ತಮ್ಮ ಆರೋಗ್ಯದ ಬಗ್ಗೆ ನೈಜ ಕಾಳಜಿ ಇರುವ ಪ್ರತಿಯೊಬ್ಬರೂ ಇತ್ತೀಚೆಗೆ ಸಿರಿಧಾನ್ಯ ಬಳಸುವುದಕ್ಕೆ ಆರಂಭಿಸಿದ್ದಾರೆ.
ಸಿರಿ ಧಾನ್ಯಗಳ ಬಗ್ಗೆ ಮತ್ತಷ್ಟು ಅರಿವು ಮೂಡಿಸುವ ಸಲುವಾಗಿ ಬೆಂಗಳೂರಿನ ಅರಮನೆ ಮೈದಾನದಲ್ಲಿ ರಾಷ್ಟ್ರೀಯ ವ್ಯಾಪಾರ ಮೇಳ- ಸಾವಯವ ಮತ್ತು ಸಿರಿಧಾನ್ಯ 2017 (National Trade Fair - Organics & Millets 2017)ಎಂಬ ಬೃಹತ್ ಕಾರ್ಯಕ್ರಮವೊಂದನ್ನು ಆಯೋಜಿಸಲಾಗಿದೆ.
ಸಿರಿಧಾನ್ಯದ ಕುರಿತು ಆಸಕ್ತಿ ಇರುವ ರೈತರು, ವ್ಯಾಪಾರಿಗಳು, ಗ್ರಾಹಕರಿಗೆ ಒಂದು ಉತ್ತಮ ವೇದಿಕೆ ನೀಡುವ ನಿಟ್ಟಿನಲ್ಲಿ ಈ ಕಾರ್ಯಕ್ರಮ ಆಯೋಜಿಸಲಾಗಿದೆ. ಅಷ್ಟೇ ಅಲ್ಲ, ಸಾವಯವ ಕೃಷಿಕರು ತಮ್ಮ ಉತ್ಪನ್ನಗಳಿಗೆ ಪ್ರಚಾರ ನೀಡಲು, ಪ್ರದರ್ಶಿಸಲು ಮತ್ತು ಮಾರಾಟ ಮಾಡಲು ಇಲ್ಲಿ ಅವಕಅಶ ನೀಡಲಾಗುತ್ತದೆ.
ಕಾರ್ಯಕ್ರಮದಲ್ಲಿ ಸಿರಿಧಾನ್ಯ ಪ್ರದರ್ಶನ, ವ್ಯಾಪಾರಿ-ಗ್ರಾಹಕ ಸಂವಹನ, ರೈತರ ಕಾರ್ಯಾಗಾರ, ಸಾವಯವ ಫುಡ್ ಕೋರ್ಟ್ ಇರಲಿವೆ. ಕರ್ನಾಟಕ ಸರ್ಕಾರದ ಕೃಷಿ ಇಲಾಖೆಯು ವಿವಿಧ ಇಲಾಖೆಗಳ ಸಹಯೋಗದಲ್ಲಿ ನಡೆಸುತ್ತಿರುವ ಈ ಮೇಳದಲ್ಲಿ 200 ಕ್ಕೂ ಹೆಚ್ಚು ಸ್ಟಾಲ್ ಹೂಡಲು ಅವಕಾಶವಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ಜನರನ್ನು ನಿರೀಕ್ಷಿಸಲಾಗಿದೆ.
-
PUC ವಿದ್ಯಾರ್ಥಿಗಳಿಗೆ ಗುಡ್ನ್ಯೂಸ್: ಇದೇ ವರ್ಷದಿಂದಲೇ ಸಿಗಲಿವೆ ಉಚಿತ ಪಠ್ಯ ಪುಸ್ತಕ -
Railway Food: ರೈಲು ಪ್ರಯಾಣಿಕರ ಬಳಿ ಬರುತ್ತೆ ಆಹಾರ: ರೈಲ್ವೆ ಇಲಾಖೆಗೆ ಕಂಪನಿಗಳ ಸಾಥ್ -
ಬೆಂಗಳೂರು ಸೇರಿ 11 ಜಿಲ್ಲೆಗಳಲ್ಲಿ ಕೈಗಾರಿಕಾ ಅಭಿವೃದ್ಧಿ: 18,430 ರೂ ಹೂಡಿಕೆಗೆ ಅಸ್ತು, 15000 ಉದ್ಯೋಗ ಸೃಷ್ಟಿ -
ಸೌದಿ ಅರೇಬಿಯಾದಲ್ಲಿ ಪಾಕಿಸ್ತಾನಿ ಸೇನಾಪಡೆ ನಿಯೋಜನೆ: ಮಿತ್ರ ರಾಷ್ಟ್ರಕ್ಕೆ 13,000 ಸೈನಿಕರು, ಯುದ್ಧ ವಿಮಾನಗಳ ರವಾನೆ -
Weekly Horoscope: ನಾಲ್ಕು ರಾಶಿಯವರಿಗೆ ಅದೃಷ್ಟ ಹೊತ್ತು ತರುವ ವಾರ ಇದು: ಹೇಗಿದೆ ನೋಡಿ ನಿಮ್ಮ ವಾರ ಭವಿಷ್ಯ -
Bengaluru Property: ಬೆಂಗಳೂರು ಮೆಟ್ರೋದ ಈ ಮಾರ್ಗಗಳಲ್ಲಿ ಭೂಮಿ, ಪ್ರಾಪರ್ಟಿ ಬೆಲೆ ಶೇ 20% ರಿಂದ ಶೇ 30% ಹೆಚ್ಚಳ -
Gold Price Drop: ವಾರದ ಮೊದಲ ದಿನವೇ ಚಿನ್ನ-ಬೆಳ್ಳಿ ದರ ಭರ್ಜರಿ ಕುಸಿತ, ಇಂದಿನ ದರಪಟ್ಟಿ -
Career Break: ಅಲಾರಂ ಇಲ್ಲದ ಜೀವನ ಬೇಕು ಎಂದು ಗೂಗಲ್ ಕೆಲಸ ಬಿಟ್ಟ ಯುವ ಟೆಕ್ಕಿ, ನೆಟ್ಟಿಗರ ಮೆಚ್ಚುಗೆ -
E-Khata: ಜನ ಸೇವಕ ಯೋಜನೆ: ಮನೆಯಲ್ಲೇ ಕುಳಿತು ಇ - ಖಾತಾ ಪಡೆಯಿರಿ, ಈ 5 ದಾಖಲೆಗಳಿದ್ದರೆ ಸಾಕು -
Gold Rings: ಅಕ್ಷಯ ತೃತೀಯಕ್ಕೆ ಖರೀದಿಸಬಹುದಾದ ಆಕರ್ಷಕ ವಿನ್ಯಾಸದ 5 ಚಿನ್ನದ ಉಂಗುರಗಳು -
ಮಂಡ್ಯದಲ್ಲಿ 500 ಎಕರೆ ಆಟೋ ಕೈಗಾರಿಕಾ ಹಬ್: ಎಂಬಿ ಪಾಟೀಲ, ಎಚ್ಡಿ ಕುಮಾರಸ್ವಾಮಿ ಮಹತ್ವದ ಚರ್ಚೆ -
April 13 Horoscope: 12 ರಾಶಿಗಳಿಗೆ ಇಂದು ಪ್ರೇಮ, ಹಣಕಾಸು, ಉದ್ಯೋಗದಲ್ಲಿ ಏನು ಹೇಳುತ್ತದೆ ನಿಮ್ಮ ರಾಶಿ?












Click it and Unblock the Notifications