ಬೆಂಗಳೂರು ಮನೆ ಕಳೆದುಕೊಂಡ ಗಾಲಿ ಜನಾರ್ದನ ರೆಡ್ಡಿ
ಬೆಂಗಳೂರು, ಆ.17: ಅಕ್ರಮ ಗಣಿಗಾರಿಕೆ ಆರೋಪದ ಮೇಲೆ ಜೈಲುವಾಸಿಯಾಗಿರುವ ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿ ಅವರಿಗೆ ಮತ್ತೊಮ್ಮೆ ಹಿನ್ನಡೆಯಾಗಿದೆ. ಮನಿ ಲಾಂಡ್ರಿಂಗ್ ವಿರೋಧಿ ವಿಶೇಷ ನ್ಯಾಯಾಲಯವು ಕೋಟ್ಯಂತರ ಮೊತ್ತದ ಆಸ್ತಿಯನ್ನು ಮುಟ್ಟುಗೋಲು ಹಾಕಿಕೊಂಡಿದೆ. ಇದರಲ್ಲಿ ಬೆಂಗಳೂರಿನ ಫ್ಲಾಟ್ ಹಾಗೂ ಬಳ್ಳಾರಿಯ ಒಂದು ಮನೆ ಪ್ರಮುಖವಾಗಿದೆ.
ಬಹುಕೋಟಿ ಅಕ್ರಮ ಗಣಿಗಾರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಗಾಲಿ ಜನಾರ್ದನ ರೆಡ್ಡಿ ಹಾಗೂ ಅವರ ಪತ್ನಿ ಅರುಣಾ ಅವರಿಗೆ ಸೇರಿರುವ ಸುಮಾರು 37.86 ಕೋಟಿ ರು ಮೌಲ್ಯದ ಆಸ್ತಿಯನ್ನು ಮುಟ್ಟುಗೋಲು ಹಾಕಿಕೊಳ್ಳಲಾಗಿದೆ.[ರೆಡ್ಡಿಗೆ ಷರತ್ತುಬದ್ಧ ಜಾಮೀನು]
ಮುಟ್ಟುಗೋಲಾದ ಆಸ್ತಿಯಲ್ಲಿ 4 ಕೋಟಿ ರು ಮೌಲ್ಯದ ಬೆಂಗಳೂರಿನ ಫ್ಲಾಟ್, ಬಳ್ಳಾರಿಯಲ್ಲಿದ್ದ 14 ಲಕ್ಷ ರು ಮೌಲ್ಯದ ಮನೆ, ನಿಶ್ಚಿತ ಠೇವಣಿ ಹಾಗೂ ಬ್ಯಾಂಕ್ ಖಾತೆಯಲ್ಲಿರುವ ಮೊತ್ತವನ್ನು ಜಾರಿ ನಿರ್ದೇಶನಾಲಯ ವಶಕ್ಕೆ ತೆಗೆದುಕೊಂಡಿದೆ. ಅಕ್ರಮ ಹಣ ಚಲಾವಣೆ ನಿರ್ಬಂಧ ಕಾಯ್ದೆ(PMLA)ಯಡಿ ಮಾಜಿ ಸಚಿವ ಜನಾರ್ದನರೆಡ್ಡಿಗೆ ಸೇರಿರುವ ಸುಮಾರು 880 ಕೋಟಿ ರೂ ಆಸ್ತಿಯನ್ನು ಜಾರಿ ನಿರ್ದೇಶನಾಲಯ ಮುಟ್ಟುಗೋಲು ಹಾಕಿಕೊಳ್ಳುವ ಪ್ರಕ್ರಿಯೆಗೆ 2012ರಲ್ಲೇ ಚಾಲನೆ ಸಿಕ್ಕಿತ್ತು.

ಗಾಲಿ ರೆಡ್ಡಿ ಅವರ ಪತ್ನಿ ಜಿ ಲಕ್ಷ್ಮಿ ಅರುಣಾ ಅವರ ಒಡೆತನದ ಬಳ್ಳಾರಿ ಜಿಲ್ಲೆಯ ಹವಂಭಾವಿಯಲ್ಲಿರುವ ಮೆಸರ್ಸ್ ಅಸೋಸಿಯೇಟೆಡ್ ಮೈನಿಂಗ್ ಕಂಪನಿ(ಗುರು ಐರನ್ ಓರ್ ಮೈನ್ಸ್) ಕಂಪನಿಯ ಮೊತ್ತ 37,88,66,108.70 ಜಾರಿ ನಿರ್ದೇಶನಾಲಯ ಕೈ ಸೇರಿದೆ.[880 ಕೋಟಿ ರೂ ಆಸ್ತಿ ಮುಟ್ಟುಗೋಲು?]
ಇದಲ್ಲದೆ ಗಣಿಗಳ ಮಾಲೀಕರು ಮತ್ತು ನೋಂದಾಯಿತ ಮಾರಾಟಗಾರರ ಬ್ಯಾಂಕ್ ಖಾತೆಗಳಿಂದ ಈ ಲಾಭಾಂಶದ ಮೊತ್ತ ಹಲವು ಖಾತೆಗಳನ್ನು ದಾಟಿಕೊಂಡು, ಜನಾರ್ದನ ರೆಡ್ಡಿ ಮತ್ತು ಒಎಂಸಿ ಒಡತಿ ಗಾಲಿ ರೆಡ್ಡಿ ಅವರ ಪತ್ನಿ ಜಿ.ಲಕ್ಷ್ಮಿ ಅರುಣಾ ಅವರ ಖಾತೆ ಸೇರುತ್ತಿತ್ತು. ನಂತರ ರೆಡ್ಡಿ ದಂಪತಿ ಸ್ವಂತ ಚೆಕ್ಕುಗಳ ಮೂಲಕವೇ ಹಣವನ್ನು ಡ್ರಾ ಮಾಡುತ್ತಿದ್ದರು. ಹೀಗೆ 2,800 ಕೋಟಿ ರೂಪಾಯಿಗೂ ಹೆಚ್ಚು ಮೊತ್ತ ಅವರ ಖಜಾನೆಗೆ ಬಂದಿದೆ ಎನ್ನಲಾಗಿದೆ.
2007 ರಿಂದ 2009ರವರೆಗೆ 215 ಕೋಟಿ ರಫ್ತು ಸುಂಕ ವಂಚನೆ ಹಾಗೂ ಸರ್ಕಾರಕ್ಕೆ ಓಎಂಸಿಯಿಂದ 5100 ಕೋಟಿ ಮತ್ತು ಎಎಂಸಿ ಯಲ್ಲಿ 480 ಕೋಟಿ ರು ನಷ್ಟ ಉಂಟಾಗಿದೆ ಎಂದು ಕೋರ್ಟಿಗೆ 2012ರಲ್ಲಿ ಸಿಬಿಐ ಸಲ್ಲಿಸಿರುವ ಚಾರ್ಚ್ ಶೀಟ್ ನಲ್ಲಿ ಹೇಳಲಾಗಿದೆ. ಈ ಆಧಾರದ ಮೇಲೆ ತನಿಖೆ ಮುಂದುವರೆಸಿ ಪಿಎಂಎಲ್ ಎ ಕೋರ್ಟ್ ಆದೇಶದಂತೆ ಆಸ್ತಿ ಮುಟ್ಟುಗೋಲು ಹಾಕಿಕೊಳ್ಳಲಾಗಿದೆ ಎಂದು ಚೇರ್ಮನ್ ಕೆ ರಾಮಮೂರ್ತಿ ಹೇಳಿದ್ದಾರೆ.
-
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
ವಂದೇ ಭಾರತ್ ರೈಲಿನ ಊಟ ಸೇವಿಸಿದ ಮಹಿಳೆಗೆ ತೀವ್ರ ಅಲರ್ಜಿ, 2 ವರ್ಷದ ಮಗನಿಗೆ ಅತಿಸಾರ: IRCTC ಹೇಳಿದ್ದೇನು? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಬೆಂಗಳೂರು ಸೇರಿ ಪ್ರಮುಖ ನಗರಗಳಲ್ಲಿ ಇಂದು ಚಿನ್ನ-ಬೆಳ್ಳಿ ಬೆಲೆ ಎಷ್ಟಿದೆ? -
Oracle: ಒರಾಕಲ್ ಸಂಸ್ಥೆಯಲ್ಲಿ ವೆಚ್ಚ ಕಡಿತದ ಭಾಗವಾಗಿ ಕೆಲಸ ಕಳೆದುಕೊಂಡ 12,000 ಜನ, 30,000 ಜನರಿಗೆ ಸಂಕಷ್ಟ -
KSRTC: ಏಪ್ರಿಲ್ 10ರವರೆಗೆ ವಿದ್ಯಾರ್ಥಿಗಳ ಬಸ್ಪಾಸ್ ಅವಧಿ ವಿಸ್ತರಣೆ -
ಏಪ್ರಿಲ್ ಮೊದಲ ವಾರ ಬ್ಯಾಂಕ್ ಬಂದ್: ಗ್ರಾಹಕರು ಮುಂಚಿತವಾಗಿ ಯೋಜನೆ ಮಾಡಬೇಕು -
ನಮ್ಮ ಮೆಟ್ರೋ ಪ್ರಯಾಣಿಕರಿಗೆ ನಿರಾಸೆ: ಮೇ ತಿಂಗಳಿನಲ್ಲಿ ಆರಂಭವಾಗಬೇಕಿದ್ದ ಪಿಂಕ್ ಲೈನ್ ಸಂಚಾರ ವಿಳಂಬ ಸಾಧ್ಯತೆ -
ವಾಸ್ತು ಪ್ರಕಾರ ಬಾತ್ರೂಮ್ನಲ್ಲಿ ಉಪ್ಪು ಇಡುವುದರಿಂದ ಏನು ಲಾಭ? -
ಚಲಿಸುವ ರೈಲಿನ ಬೋಗಿಯಲ್ಲಿ ಬಟ್ಟೆ ಒಣಗಿಸಿದ ಪ್ರಯಾಣಿಕರು: Viral Video ನೋಡಿ ನೆಟ್ಟಿಗರು ಗರಂ -
ಹೋಟೆಲ್, ರೆಸ್ಟೋರೆಂಟ್ ಮಾಲೀಕರಿಗೆ ಶಾಕ್: ವಾಣಿಜ್ಯ ಗ್ಯಾಸ್ ಸಿಲಿಂಡರ್ ಬೆಲೆಯಲ್ಲಿ ಬರೋಬ್ಬರಿ 195 ರೂ. ಭಾರಿ ಏರಿಕೆ












Click it and Unblock the Notifications