ಬೆಂಗಳೂರು ಮನೆ ಕಳೆದುಕೊಂಡ ಗಾಲಿ ಜನಾರ್ದನ ರೆಡ್ಡಿ
ಬೆಂಗಳೂರು, ಆ.17: ಅಕ್ರಮ ಗಣಿಗಾರಿಕೆ ಆರೋಪದ ಮೇಲೆ ಜೈಲುವಾಸಿಯಾಗಿರುವ ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿ ಅವರಿಗೆ ಮತ್ತೊಮ್ಮೆ ಹಿನ್ನಡೆಯಾಗಿದೆ. ಮನಿ ಲಾಂಡ್ರಿಂಗ್ ವಿರೋಧಿ ವಿಶೇಷ ನ್ಯಾಯಾಲಯವು ಕೋಟ್ಯಂತರ ಮೊತ್ತದ ಆಸ್ತಿಯನ್ನು ಮುಟ್ಟುಗೋಲು ಹಾಕಿಕೊಂಡಿದೆ. ಇದರಲ್ಲಿ ಬೆಂಗಳೂರಿನ ಫ್ಲಾಟ್ ಹಾಗೂ ಬಳ್ಳಾರಿಯ ಒಂದು ಮನೆ ಪ್ರಮುಖವಾಗಿದೆ.
ಬಹುಕೋಟಿ ಅಕ್ರಮ ಗಣಿಗಾರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಗಾಲಿ ಜನಾರ್ದನ ರೆಡ್ಡಿ ಹಾಗೂ ಅವರ ಪತ್ನಿ ಅರುಣಾ ಅವರಿಗೆ ಸೇರಿರುವ ಸುಮಾರು 37.86 ಕೋಟಿ ರು ಮೌಲ್ಯದ ಆಸ್ತಿಯನ್ನು ಮುಟ್ಟುಗೋಲು ಹಾಕಿಕೊಳ್ಳಲಾಗಿದೆ.[ರೆಡ್ಡಿಗೆ ಷರತ್ತುಬದ್ಧ ಜಾಮೀನು]
ಮುಟ್ಟುಗೋಲಾದ ಆಸ್ತಿಯಲ್ಲಿ 4 ಕೋಟಿ ರು ಮೌಲ್ಯದ ಬೆಂಗಳೂರಿನ ಫ್ಲಾಟ್, ಬಳ್ಳಾರಿಯಲ್ಲಿದ್ದ 14 ಲಕ್ಷ ರು ಮೌಲ್ಯದ ಮನೆ, ನಿಶ್ಚಿತ ಠೇವಣಿ ಹಾಗೂ ಬ್ಯಾಂಕ್ ಖಾತೆಯಲ್ಲಿರುವ ಮೊತ್ತವನ್ನು ಜಾರಿ ನಿರ್ದೇಶನಾಲಯ ವಶಕ್ಕೆ ತೆಗೆದುಕೊಂಡಿದೆ. ಅಕ್ರಮ ಹಣ ಚಲಾವಣೆ ನಿರ್ಬಂಧ ಕಾಯ್ದೆ(PMLA)ಯಡಿ ಮಾಜಿ ಸಚಿವ ಜನಾರ್ದನರೆಡ್ಡಿಗೆ ಸೇರಿರುವ ಸುಮಾರು 880 ಕೋಟಿ ರೂ ಆಸ್ತಿಯನ್ನು ಜಾರಿ ನಿರ್ದೇಶನಾಲಯ ಮುಟ್ಟುಗೋಲು ಹಾಕಿಕೊಳ್ಳುವ ಪ್ರಕ್ರಿಯೆಗೆ 2012ರಲ್ಲೇ ಚಾಲನೆ ಸಿಕ್ಕಿತ್ತು.

ಗಾಲಿ ರೆಡ್ಡಿ ಅವರ ಪತ್ನಿ ಜಿ ಲಕ್ಷ್ಮಿ ಅರುಣಾ ಅವರ ಒಡೆತನದ ಬಳ್ಳಾರಿ ಜಿಲ್ಲೆಯ ಹವಂಭಾವಿಯಲ್ಲಿರುವ ಮೆಸರ್ಸ್ ಅಸೋಸಿಯೇಟೆಡ್ ಮೈನಿಂಗ್ ಕಂಪನಿ(ಗುರು ಐರನ್ ಓರ್ ಮೈನ್ಸ್) ಕಂಪನಿಯ ಮೊತ್ತ 37,88,66,108.70 ಜಾರಿ ನಿರ್ದೇಶನಾಲಯ ಕೈ ಸೇರಿದೆ.[880 ಕೋಟಿ ರೂ ಆಸ್ತಿ ಮುಟ್ಟುಗೋಲು?]
ಇದಲ್ಲದೆ ಗಣಿಗಳ ಮಾಲೀಕರು ಮತ್ತು ನೋಂದಾಯಿತ ಮಾರಾಟಗಾರರ ಬ್ಯಾಂಕ್ ಖಾತೆಗಳಿಂದ ಈ ಲಾಭಾಂಶದ ಮೊತ್ತ ಹಲವು ಖಾತೆಗಳನ್ನು ದಾಟಿಕೊಂಡು, ಜನಾರ್ದನ ರೆಡ್ಡಿ ಮತ್ತು ಒಎಂಸಿ ಒಡತಿ ಗಾಲಿ ರೆಡ್ಡಿ ಅವರ ಪತ್ನಿ ಜಿ.ಲಕ್ಷ್ಮಿ ಅರುಣಾ ಅವರ ಖಾತೆ ಸೇರುತ್ತಿತ್ತು. ನಂತರ ರೆಡ್ಡಿ ದಂಪತಿ ಸ್ವಂತ ಚೆಕ್ಕುಗಳ ಮೂಲಕವೇ ಹಣವನ್ನು ಡ್ರಾ ಮಾಡುತ್ತಿದ್ದರು. ಹೀಗೆ 2,800 ಕೋಟಿ ರೂಪಾಯಿಗೂ ಹೆಚ್ಚು ಮೊತ್ತ ಅವರ ಖಜಾನೆಗೆ ಬಂದಿದೆ ಎನ್ನಲಾಗಿದೆ.
2007 ರಿಂದ 2009ರವರೆಗೆ 215 ಕೋಟಿ ರಫ್ತು ಸುಂಕ ವಂಚನೆ ಹಾಗೂ ಸರ್ಕಾರಕ್ಕೆ ಓಎಂಸಿಯಿಂದ 5100 ಕೋಟಿ ಮತ್ತು ಎಎಂಸಿ ಯಲ್ಲಿ 480 ಕೋಟಿ ರು ನಷ್ಟ ಉಂಟಾಗಿದೆ ಎಂದು ಕೋರ್ಟಿಗೆ 2012ರಲ್ಲಿ ಸಿಬಿಐ ಸಲ್ಲಿಸಿರುವ ಚಾರ್ಚ್ ಶೀಟ್ ನಲ್ಲಿ ಹೇಳಲಾಗಿದೆ. ಈ ಆಧಾರದ ಮೇಲೆ ತನಿಖೆ ಮುಂದುವರೆಸಿ ಪಿಎಂಎಲ್ ಎ ಕೋರ್ಟ್ ಆದೇಶದಂತೆ ಆಸ್ತಿ ಮುಟ್ಟುಗೋಲು ಹಾಕಿಕೊಳ್ಳಲಾಗಿದೆ ಎಂದು ಚೇರ್ಮನ್ ಕೆ ರಾಮಮೂರ್ತಿ ಹೇಳಿದ್ದಾರೆ.
-
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
ಪಿಎಂ ಇ-ಬಸ್ ಯೋಜನೆ: ಕರ್ನಾಟಕದಲ್ಲಿ ರಸ್ತೆಗಿಳಿಯಲಿವೆ 750 ಇ-ಬಸ್ಗಳು; ಮಹಾರಾಷ್ಟ್ರಕ್ಕೆ ಸಿಂಹಪಾಲು -
Bengaluru Drone Survey: ಬೆಂಗಳೂರಿನಲ್ಲಿ ಆಸ್ತಿಗಳ ಡ್ರೋನ್ ಸರ್ವೇ: ಇದರ ಉದ್ದೇಶವೇನು, ವಿರೋಧವೇಕೆ ಇಲ್ಲಿದೆ ಮಾಹಿತಿ -
ಇರಾನ್ ಸಂಘರ್ಷ: ಭಾರತದ ಪ್ರಯತ್ನಕ್ಕೆ ಫಲ, ಕೊಲ್ಲಿ ಮಾರ್ಗವಾಗಿ ಭಾರತಕ್ಕೆ ಬಂದ ಮೊದಲ ತೈಲ ಟ್ಯಾಂಕರ್ -
ಒಣ ಮೆಣಸಿನಕಾಯಿ ಬಳಸುವ ಮುನ್ನ ಈ ಕೆಲಸ ಮಾಡಿದ್ದೀರಾ? ಆರೋಗ್ಯ ಕಾಪಾಡಲು ಇಲ್ಲಿದೆ ಸೂಪರ್ ಐಡಿಯಾ -
ಭಾರತದ ಹಡಗುಗಳಿಗೆ ಭರ್ಜರಿ ಸುದ್ದಿ ನೀಡಿದ ಇರಾನ್, ಗ್ಯಾಸ್ ಸಮಸ್ಯೆ ಇತ್ಯರ್ಥ ಸಾಧ್ಯತೆ | Operation Roaring Lion -
Swamijis: ಬಹುತೇಕ ಕಾವಿಧಾರಿ ಸ್ವಾಮೀಜಿಗಳು ಅವಿವಾಹಿತರು, ಆದರೆ ಅವರೆಲ್ಲರೂ ಬ್ರಹ್ಮಚಾರಿಗಳಲ್ಲ: ರವಿಕೃಷ್ಣ ರೆಡ್ಡಿ -
ಬೆಂಗಳೂರಿನ ಪ್ರಮುಖ ವಿದ್ಯುತ್ ಸ್ಥಾವರ ಬಂದ್; ರಾಜ್ಯದಲ್ಲಿ ವಿದ್ಯುತ್ ಕಡಿತದ ಭೀತಿ! -
ಅರಬ್ ದೇಶಗಳ ಬ್ಯಾಕಿಂಗ್ ಸೇವೆ ಮೇಲೆ ಇರಾನ್ ಸೇನೆ ದಾಳಿ ಸಾಧ್ಯತೆ ಹಿನ್ನೆಲೆ ಕಟ್ಟೆಚ್ಚರ | Operation Roaring Lion -
LPG Gas: ಗೃಹ-ವಾಣಿಜ್ಯ ಸಿಲಿಂಡರ್ ಬುಕಿಂಗ್ ಮಿತಿ, ದಾಸ್ತಾನು ನಿಯಮಗಳೇನು? ಗ್ಯಾಸ್ ದರಪಟ್ಟಿ












Click it and Unblock the Notifications