ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಶಿವಕುಮಾರ ಸ್ವಾಮೀಜಿಗೆ ಭಾರತರತ್ನ ನೀಡದಿರುವುದಕ್ಕೆ ಡಿಕೆಶಿ ಏನಂದ್ರು?

By ಬೆಂಗಳೂರು ಪ್ರತಿನಿಧಿ
|
Google Oneindia Kannada News

ಬೆಂಗಳೂರು, ಜನವರಿ 27 : ಸಿದ್ದಗಂಗಾ ಮಠದ ಶ್ರೀ ಶಿವಕುಮಾರ ಸ್ವಾಮೀಜಿಗೆ ಭಾರತರತ್ನ ನೀಡದಿರುವುದಕ್ಕೆ ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್‌ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ಸಿದ್ಧಗಂಗಾ ಶ್ರೀಗಳಿಗೆ ಭಾರತ ರತ್ನ ಸಿಗಬೇಕಿತ್ತು, ಈ ಸಂಬಂಧ ಕೇಂದ್ರಕ್ಕೆ ಶಿಫಾರಸು ಮಾಡಲು ವಿಧಾನಸಭೆಯಲ್ಲೇ ನಿರ್ಣಯ ಮಾಡುತ್ತೇವೆ.

ಪ್ರಣಬ್ ಮುಖರ್ಜಿ, ನಾನಾಜಿ, ಭೂಪೇನ್ ಹಜಾರಿಕಾಗೆ ಭಾರತರತ್ನಪ್ರಣಬ್ ಮುಖರ್ಜಿ, ನಾನಾಜಿ, ಭೂಪೇನ್ ಹಜಾರಿಕಾಗೆ ಭಾರತರತ್ನ

ಈಗಾಗಲೇ ಸ್ವಾಮೀಜಿಗೆ ಭಾರತ ರತ್ನ ನೀಡುವಂತೆ ಕೇಂದ್ರ ಸರ್ಕಾರಕ್ಕೆ ಮುಖ್ಯಮಂತ್ರಿಗಳು ಮತ್ತು ಸಂಸದರು ಮನವಿ ಮಾಡಿದ್ದಾರೆ. ಈ ವಿಚಾರದಲ್ಲಿ ಕೇಂದ್ರದ ಮೇಲೆ ಮತ್ತಷ್ಟುಒತ್ತಡ ಹೇರುತ್ತೇವೆ ಶಿವಕುಮಾರ್ ಹೇಳಿದರು.

Minister DK Shivakumar expressed disappointment

ಕಳೆದ ವರ್ಷದಿಂದಲೂ ಸಿದ್ಧಗಂಗಾ ಶ್ರೀಗಳಿಗೆ ಭಾರತರತ್ನ ಪ್ರಶಸ್ತಿ ಪ್ರದಾನ ಮಾಡಬೇಕೆಂಬ ಕೂಗು ಕೇಳಿಬರುತ್ತಲೇ ಇತ್ತು. ಈ ವರ್ಷ ಮರಣೋತ್ತರವಾಗಿಯಾದರೂ ಶ್ರೀಗಳಿಗೆ ಭಾರತರತ್ನ ಪ್ರಶಸ್ತಿ ಘೋಷಣೆ ಮಾಡಬೇಕೆಂದು ಅಭಿಯಾನಗಳೂ ನಡೆದಿದ್ದವು.

ಭಾರತ ರತ್ನದ ಸುತ್ತಾ ಸುತ್ತಿಕೊಂಡಿರುವ ವಿವಾದಗಳು ಭಾರತ ರತ್ನದ ಸುತ್ತಾ ಸುತ್ತಿಕೊಂಡಿರುವ ವಿವಾದಗಳು

ಆದರೆ, ಈ ಬಾರಿ ಪ್ರಣಬ್ ಮುಖರ್ಜಿ ಸೇರಿ ಅಸ್ಸಾಮಿ ಗಾಯಕ ಭೂಪೇನ್ ಹಜಾರಿಕಾ ಮತ್ತು ಭಾರತೀಯ ಜನಸಂಘದ ನಾಯಕ ನಾನಾಜೀ ದೇಶಮುಖ್ ಅವರಿಗೆ ಭಾರತರತ್ನ ಪ್ರಶಸ್ತಿ ಘೋಷಿಸಲಾಗಿತ್ತು. ಈ ಹಿನ್ನೆಲೆಯಲ್ಲಿ ದೇಶಾದ್ಯಂತ ಅಸಮಾಧಾನ ವ್ಯಕ್ತವಾಗಿತ್ತು.

English summary
Minister DK Shivakumar expressed disappointment after Dr Shivakumara Swami did not receive Bharat Ratna.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X