ಡಿಕೆಶಿ ಮುಖ್ಯಮಂತ್ರಿ ಆದರೂ ಪರವಾಗಿಲ್ಲ ಎಂದ ದೇವೇಗೌಡರು
ಬೆಂಗಳೂರು, ಸೆಪ್ಟೆಂಬರ್ 2: ಡಿ.ಕೆ.ಶಿವಕುಮಾರೋ ಅಶೋಕೋ ಅಥವಾ ಕುಮಾರಸ್ವಾಮಿಯೋ ಯಾರಾದರೂ ಮುಖ್ಯಮಂತ್ರಿ ಆಗಲಿ. ಅಷ್ಟು ಸುಲಭಕ್ಕೆ ಮುಖ್ಯಮಂತ್ರಿ ಅಗಲು ಬಿಡ್ತಾರೆ ಅಂದುಕೊಂಡಿದ್ದೀರಾ? ಎಂದು ಹೇಳುವ ಮೂಲಕ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಅಚ್ಚರಿ ಮೂಡಿಸಿದ್ದಾರೆ.
ಇಲ್ಲಿನ ಕುವೆಂಪು ಕಲಾಕ್ಷೇತ್ರದಲ್ಲಿ ಶನಿವಾರ ಕೃಷಿಕ್ ಸರ್ವೋದಯ ಫೌಂಡೇಷನ್ ನ ಬೆಳ್ಳಿಹಬ್ಬ ಸಮಾರಂಭದಲ್ಲಿ ಮಾತನಾಡಿದ ಅವರು, ನಾವು (ಒಕ್ಕಲಿಗರು) ಎರಡನೇ ದರ್ಜೆಯಲ್ಲಿದ್ದೇವೆ, ಪ್ರಥಮ ದರ್ಜೆಯವರಾಗಬೇಕು. ರಾಜಕೀಯ ಜೀವನದ ಆರಂಭದಿಂದಲೂ ನನ್ನನ್ನು ಒಕ್ಕಲಿಗರ ಪರ ಹಾಗೂ ಉಳಿದ ಸಮುದಾಯದ ವಿರೋಧಿ ಎಂದು ಬಿಂಬಿಸಲಾಗುತ್ತಿದೆ ಎಂದರು.

ಕಾವೇರಿ ನದಿ ಪ್ರದೇಶದ ಎರಡೂವರೆ ಕೋಟಿ ಮಂದಿಯ ಸಲುವಾಗಿ ನದಿ ಸಮಸ್ಯೆಯನ್ನು ನಾವು ಬಗೆಹರಿಸಬೇಕಾಗಿದೆ. ನಮ್ಮಿಂದ ಆಗುತ್ತದೋ ಇಲ್ಲವೋ ಪ್ರಯತ್ನವಂತೂ ಮಾಡಲೇ ಬೇಕಾಗಿದೆ ಎಂದು ದೇವೇಗೌಡರು ಹೇಳಿದರು.
ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಸಚಿವ ಡಿ.ಕೆ.ಶಿವಕುಮಾರ್ ಮಾತನಾಡಿ, ದೇವೇಗೌಡರು ಬಹಳ ಕಷ್ಟಪಟ್ಟು ಉನ್ನತ ಸ್ಥಾನಕ್ಕೆ ಏರಿದ್ದಾರೆ. ಅವರಿಗೂ ಎಷೋ ಮಂದಿ ಅಡೆತಡೆ ಮಾಡಿದ್ದಾರೆ. ನನಗೂ ಸುಮಾರು ಏಟು ಕೊಟ್ಟಿದ್ದಾರೆ. ಅದರಿಂದ ಸುಧಾರಿಸಲು ತಿಂಗಳುಗಳೇ ಬೇಕಾಗಬಹುದು. ಅವೆಲ್ಲದರಿಂದ ಹೊರಬಂದು ಇಲ್ಲಿ ನಿಂತು ಮಾತನಾಡುತ್ತಿದ್ದೇನೆ ಎಂದು ಹೇಳಿದರು.
ಯಾರ್ಯಾರು ಏನು ಏಟು ಕೊಟ್ಟಿದ್ದಾರೆ ಎಂಬುದು ಗೊತ್ತಿದೆ. ಆದರೆ ನನ್ನ ಕಷ್ಟಕ್ಕೆ ಮಠವೂ ಭಾಗಿಯಾಗಿದೆ. ನಮ್ಮ ಮೇಲೆ ನಿರ್ಮಲಾನಂದ ನಾಥ ಸ್ವಾಮೀಜಿ ಆಶೀರ್ವಾದ ಇರಲಿ, ದೇವೇಗೌಡರ ಆಶೀರ್ವಾದವೂ ಇರಲಿ ಎಂದು ಶಿವಕುಮಾರ್ ಹೇಳಿದರು.
ಇನ್ನು ಶಿವಕುಮಾರ್ ಅವರು ದೇವೇಗೌಡರಿಗೆ ಶಾಲು ಹೊದಿಸಿ, ಹಾರ ಹಾಕಿ, ನಮಸ್ಕರಿಸಿದರು. ಆದಿಚುಂಚನಗಿರಿ ಮಠದ ನಿರ್ಮಲಾನಂದನಾಥ ಸ್ವಾಮೀಜಿ ಉಪಸ್ಥಿತರಿದ್ದರು.
-
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
Karnataka Weather: ಇಂದು ರಾಜ್ಯದ ಹಲವೆಡೆ ಗುಡುಗು ಸಹಿತ ಅಕಾಲಿಕ ಮಳೆ, ಬೆಂಗಳೂರಿನಲ್ಲಿ ಹೇಗಿರಲಿದೆ ವಾತಾವರಣ? -
AI ಎಫೆಕ್ಟ್: 2026ರಲ್ಲೂ ಮುಂದುವರಿದ ಉದ್ಯೋಗ ಕಡಿತ; ಯಾವ್ಯಾವ ಕಂಪನಿಗಳಿಂದ ಎಷ್ಟು ವಜಾ? ಪಟ್ಟಿ ಇಲ್ಲಿದೆ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
Jobs: ಹೈಕೋರ್ಟ್ನಲ್ಲಿ ಕೆಲಸ ಬೇಕೆ? 70 ಅಸಿಸ್ಟೆಂಟ್ ಕೋರ್ಟ್ ಸೆಕ್ರೆಟರಿ ಹುದ್ದೆಗಳಿಗೆ ಅರ್ಜಿ ಆಹ್ವಾನ, ಇಂದೇ ಅರ್ಜಿ ಸಲ್ಲಿಸಿ -
Bengaluru Rent: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಬಾಡಿಗೆ ಮನೆಗಳು ಸಿಗುವ 6 ಪ್ರಮುಖ ಪ್ರದೇಶಗಳು -
ನೌಕರಿ ಬಿಟ್ಟು ಸ್ವಂತ ಉದ್ಯಮ: ಹುಣಸೆ ಸಿಹಿತಿಂಡಿಗೆ ಪೇಟೆಂಟ್ ಪಡೆದ ಬೈಲಹೊಂಗಲದ ಟೆಕ್ಕಿ; 17 ದೇಶಗಳಿಗೆ ರಫ್ತು -
Karnataka Rain: ಕರ್ನಾಟಕದಲ್ಲಿ ಮಳೆ ಕೊರತೆ ಈ ಬಾರಿ ಈ ಭಾಗಗಳಲ್ಲಿ ಸಂಕಷ್ಟ, ಕುಡಿಯುವ ನೀರಿಗೂ ಹಾಹಾಕಾರ -
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್












Click it and Unblock the Notifications