ನಂಜಾವಧೂತ ಸ್ವಾಮೀಜಿ ಜತೆ ತಡರಾತ್ರಿ ಎಚ್.ಡಿ. ರೇವಣ್ಣ ಮಾತುಕತೆ
Recommended Video

ಬೆಂಗಳೂರು, ಜೂನ್ 8: ನೂತನ ಸಚಿವ ಎಚ್.ಡಿ. ರೇವಣ್ಣ ಅವರು ಪಟ್ಟನಾಯಕನಹಳ್ಳಿ ಶ್ರೀ ಸ್ಫಟಿಕಪುರಿ ಮಹಾಸಂಸ್ಥಾನದ ಶಾಖಾಮಠಕ್ಕೆ ಗುರುವಾರ ತಡರಾತ್ರಿ ಭೇಟಿ ನೀಡಿದರು.
ಬೆಂಗಳೂರಿನ ಉಲ್ಲಾಳದಲ್ಲಿರುವ ಶಾಖಾಮಠಕ್ಕೆ ಬೆಂಬಲಿಗರ ಜತೆ ತೆರಳಿದ ರೇವಣ್ಣ, ಶ್ರೀ ನಂಜಾವಧೂತ ಸ್ವಾಮೀಜಿ ಅವರೊಂದಿಗೆ ಅರ್ಧಗಂಟೆಗೂ ಹೆಚ್ಚು ಸಮಯ ಗೋಪ್ಯ ಮಾತುಕತೆ ನಡೆಸಿದರು.
ಪ್ರಸ್ತುತದ ರಾಜಕೀಯ ವಿದ್ಯಮಾನಗಳ ಕುರಿತು ಸ್ವಾಮೀಜಿ ಮತ್ತು ಎಚ್.ಡಿ. ರೇವಣ್ಣ ಅವರು ಸಮಾಲೋಚನೆ ನಡೆಸಿದರು. ಸ್ವಾಮೀಜಿ ಅವರಿಂದ ಸಲಹೆ ಸೂಚನೆಗಳನ್ನು ಪಡೆದುಕೊಂಡರು ಎಂದು ಮೂಲಗಳು ತಿಳಿಸಿವೆ.

ಕಾಂಗ್ರೆಸ್ ಜತೆ ಮೈತ್ರಿ ಮಾಡಿಕೊಂಡಿರುವ ಕಾರಣ ಸರ್ಕಾರವನ್ನು ಕೊನೆವರೆಗೂ ಉಳಿಸಿಕೊಳ್ಳಲು ಪ್ರತಿ ಹಂತದಲ್ಲೂ ಎಚ್ಚರಿಕೆಯ ನಡೆ ಅನುಸರಿಸಲು ಸ್ವಾಮೀಜಿ ಸಲಹೆ ನೀಡಿದರು ಎನ್ನಲಾಗಿದೆ.
ಕೊಡುವ ಮತ್ತು ತೆಗೆದುಕೊಳ್ಳುವ ಮನೋಧರ್ಮವನ್ನು ಪಾಲಿಸಿದರೆ ಮಾತ್ರ ಸಮ್ಮಿಶ್ರ ಸರ್ಕಾರ ಗಟ್ಟಿಯಾಗಿರುತ್ತದೆ. ಆರಂಭದಲ್ಲಿ ಕೆಲವು ಸಮಸ್ಯೆಗಳು ಎದುರಾಗುವುದು ಸಹಜ. ಈ ನಿಟ್ಟಿನಲ್ಲಿ ಉಭಯ ಪಕ್ಷಗಳು ಹೊಂದಾಣಿಕೆ ಮಾಡಿಕೊಂಡು ಸಾಗುವುದು ಅನಿವಾರ್ಯ ಎಂದು ಸ್ವಾಮೀಜಿ ಹೇಳಿದರು.

ಪ್ರತಿ ಸರ್ಕಾರ ಅಸ್ತಿತ್ವಕ್ಕೆ ಬಂದಾಗಲೂ ಸಚಿವ ಸಂಪುಟ ರಚನೆ ವಿಚಾರದಲ್ಲಿ, ಖಾತೆ ಹಂಚಿಕೆ ಸಮಯದಲ್ಲಿ ಜನಪ್ರತಿನಿಧಿಗಳ ನಡುವೆ ಅಸಮಾಧಾನ, ಭಿನ್ನಮತ ಹೊಸತಲ್ಲ.
ಈ ಎಲ್ಲ ಗೊಂದಲಗಳನ್ನೂ ನಿಭಾಯಿಸಿಕೊಂಡು ಹೋಗಬೇಕು. ಅಭಿವೃದ್ಧಿಪರ, ರೈತಪರ ಆಡಳಿತ ನಡೆಸುವಂತೆ ಸ್ವಾಮೀಜಿ ಕಿವಿಮಾತು ಹೇಳಿದರು ಎಂದು ಮೂಲಗಳು ಹೇಳಿವೆ.
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಕೆಡಿ ಹಾಡಿನ ವಿವಾದ; ನಮ್ಮವರೇ ಕಾಲೆಳೆಯುವುದು ಸರಿಯಲ್ಲ: ಪ್ರೇಮ್ ಬೆಂಬಲಕ್ಕೆ ನಿಂತ ಯಶ್ ತಾಯಿ ಪುಷ್ಪ












Click it and Unblock the Notifications