ಸಚಿವರ ಶಾಲೆಗೆ ದಿಢೀರ್ ಭೇಟಿ: ಕಾಮಗಾರಿ ಪರಿಶೀಲನೆ
ಬೆಂಗಳೂರು.ಜೂ.15: ''ಭವಿಷ್ಯದ ಬುನಾದಿಯಾಗಿರುವ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡಿ ಉತ್ತಮ ವ್ಯಕ್ತಿಗಳನ್ನಾಗಿ ರೂಪಿಸುವಲ್ಲಿ ಶಿಕ್ಷಕರ ಪಾತ್ರ ಮಹತ್ವದ್ದು'' ಎಂದು ಬುಧವಾರದಂದು ಅಬಕಾರಿ ಸಚಿವ ಕೆ.ಗೋಪಾಲಯ್ಯ ಹೇಳಿದರು.
ಬೆಂಗಳೂರಿನ ಮಹಾಲಕ್ಷ್ಮಿ ಲೇಔಟ್ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿರುವ ಕೃಷ್ಣಾನಂದ ನಗರದ ಕರ್ನಾಟಕ ಪಬ್ಲಿಕ್ ಶಾಲೆಯಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳು ನಡೆಯುತ್ತಿವೆ. ಈ ಸ್ಥಳಕ್ಕೆ ಭೇಟಿ ನೀಡಿದ ಸಚಿವರು ಕಾಮಗಾರಿಗಳ ಪ್ರಗತಿ, ಗಡುವು ಕುರಿತು ಪರಿಶೀಲಿಸಿ, ತ್ವರಿತಗತಿಯಲ್ಲಿ ಕೆಲಸ ಪೂರ್ಣಗೊಳಿಸುವಂತೆ ಸೂಚಿಸಿದರು.
ಶಿಕ್ಷಣಕ್ಕೆ ಪ್ರಾಧಾನ್ಯತೆ ನೀಡಿದರೆ ದೇಶ ಅಭಿವೃದ್ಧಿಯಾಗುತ್ತದೆ. ತಂತ್ರಜ್ಞಾನ ಅಳವಡಿಸಿಕೊಂಡು ಗುಣಮಟ್ಟದ ಶಿಕ್ಷಣ ನೀಡುವುದರಿಂದ ನಾಡಿಗೆ ಮಹತ್ತರ ಕೊಡುಗೆ ನೀಡುವಂತೆ ಮಕ್ಕಳನ್ನು ರೂಪಿಸಬಹುದು ಎಂದು ಶಿಕ್ಷಕರನ್ನು ಉದ್ದೇಶಿಸಿ ಅವರು ಕರೆ ನೀಡಿದರು.

ಶೈಕ್ಷಣಿಕ ಪ್ರಗತಿ ಬಗ್ಗೆ ಮಾಹಿತಿ ಪಡೆದ ಸಚಿವ:
ಬುಧವಾರ ಮಧ್ಯಾಹ್ನ ಶಾಲೆಗೆ ದೀಢೀರ್ ಭೇಟಿ ನೀಡಿದರು. ಶಾಲೆಗಳು ಆರಂಭವಾದ ಬಳಿಕ ಮೊದಲ ಭಾರಿಗೆ ಶಾಲೆಯೊಂದಕ್ಕೆ ಭೇಟಿ ನೀಡಿರುವ ಅವರು, ತರಗತಿಗಳಲ್ಲಿ ಪಾಠ, ಕಲಿಕೆ ಕುರಿತು ಮಕ್ಕಳೊಂದಿಗೆ ಮಾತನಾಡಿದರು. ಮಕ್ಕಳ ಹಾಜರಾತಿ, ಶಿಕ್ಷಣದ ಗುಣಮಟ್ಟ, ಶೈಕ್ಷಣಿಕ ಚಟುವಟಿಕೆ ಕುರಿತು ಶಾಲಾ ಸಿಬ್ಬಂದಿ ಯನ್ನು ವಿಚಾರಿಸಿದರು. ಮಕ್ಕಳಿಗೆ ಪಠ್ಯದ ಜತೆಗೆ ಪಠ್ಯೇತರ ಚಟುವಟಿಕೆಗಳು ಮುಖ್ಯ. ಶಾಲಾ ಆವರಣದಲ್ಲಿ ನಡೆಯುತ್ತಿರುವ ಕಾಮಗಾರಿಗಳನ್ನು ನಿಗದಿತ ಸಮಯದಲ್ಲೇ ಮುಗಿಸುವಂತೆ ಸೂಚಿಸಿದ್ದೇನೆ ಎಂದು ಆಡಳಿತ ಮಂಡಳಿಗೆ ತಿಳಿಸಿದರು.

ಈ ಸಂದರ್ಭದಲ್ಲಿ ಬಿಬಿಎಂಪಿ ಮಾಜಿ ಸದಸ್ಯ ಮಹದೇವ್, ಪುಟ್ಟಣ್ಣ, ಸಹಾಯಕ ಇಂಜಿನಿಯರ್ ರಂಗನಾಥ್ ಹಾಗೂ ಸ್ಥಳೀಯ ಬಿಜೆಪಿ ಮುಖಂಡರು, ಕಾರ್ಯಕರ್ತರು ಉಪಸ್ಥಿತರಿದ್ದರು.
-
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
IPL 2026 RCB: ಹ್ಯಾಜಲ್ವುಡ್, ಯಶ್ ದಯಾಳ್ ಅಲಭ್ಯರಾದ್ರೆ ಆರ್ಸಿಬಿ ಮುಂದಿರುವ 'ಪ್ಲಾನ್ ಬಿ' ಏನು? -
CBSE ಶಾಲೆಗಳಲ್ಲಿ ಋತುಚಕ್ರ ನೈರ್ಮಲ್ಯ ಕಡ್ಡಾಯ: ಸುಪ್ರೀಂ ಕೋರ್ಟ್ ಆದೇಶದ ಬೆನ್ನಲ್ಲೇ ಹೊಸ ನಿಯಮ ಜಾರಿ -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್












Click it and Unblock the Notifications