KN Rajanna: ಕೆಪಿಸಿಸಿ ಅಧ್ಯಕ್ಷ ಸ್ಥಾನ ಸಿಕ್ಕರೆ ಸಚಿವ ಸ್ಥಾನಕ್ಕೆ ರಾಜೀನಾಮೆ; ಕೆಎನ್ ರಾಜಣ್ಣ
ಬೆಂಗಳೂರು, ಮೇ. 26: ಲೋಕಸಭಾ ಚುನಾವಣೆ ಬಳಿಕ ರಾಜ್ಯದಲ್ಲಿಯೂ ಹಲವು ಬದಲಾವಣೆಗಳಾಗಲಿವೆ. ಸಂಪುಟ ಸರ್ಕರಿಯಾಗಲಿದೆ ಎಂಬ ಮಾತುಗಳು ಕೇಳಿ ಬರುತ್ತಿವೆ. ಇದರ ಜೊತೆಗೆ ಕೆಪಿಸಿಸಿ ಅಧ್ಯಕ್ಷದ ಬದಲಾವಣೆ ವಿಚಾರವೂ ಮುನ್ನೆಲೆಗೆ ಬಂದಿದೆ. ಹೀಗಾಗಿ ಹಲವು ನಾಯಕರು ಈ ಸ್ಥಾನದ ಮೇಲೆ ಕಣ್ಣಿಟ್ಟಿದ್ದಾರೆ. ಅದರಲ್ಲಿ ಸಚಿವರು ಇದ್ದಾರೆ.
ಡಿಕೆ ಶಿವಕುಮಾರ್ ಅವರ ಕೆಪಿಸಿಸಿ ಅಧ್ಯಕ್ಷ ಸ್ಥಾನದ ಮೇಲೆ ಸಹಕಾರ ಸಚಿವ ಕೆ ಎನ್ ರಾಜಣ್ಣ ಕಣ್ಣಿಟ್ಟಿದ್ದಾರೆ. ಈ ಬಗ್ಗೆ ಬಹಿರಂಗವಾಗಿಯೇ ಹೇಳಿಕೆ ನೀಡಿದ್ದಾರೆ. ತಾನು ಕೆಪಿಸಿಸಿ ಅಧ್ಯಕ್ಷ ಸ್ಥಾನದ ಪ್ರಬಲ ಆಕಾಂಕ್ಷಿಯಾಗಿದ್ದು, ಅಧ್ಯಕ್ಷನಾದರೆ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಲು ಸಿದ್ಧ ಎಂದು ಸಹಕಾರ ಸಚಿವ ಕೆ ಎನ್ ರಾಜಣ್ಣ ಶನಿವಾರ ಹೇಳಿದ್ದಾರೆ.

ಇತ್ತೀಚೆಗೆ ನಡೆದ ಕಾಂಗ್ರೆಸ್ ಪಕ್ಷದ ಸಭೆಗಳಲ್ಲಿ ಕೆಪಿಸಿಸಿ ಜವಾಬ್ದಾರಿಯಿಂದ ಹೊರಬರುವ ಇಂಗಿತವನ್ನು ಡಿ.ಕೆ.ಶಿವಕುಮಾರ್ ಪರೋಕ್ಷವಾಗಿ ವ್ಯಕ್ತಪಡಿಸಿದ್ದರು. ಇದರ ಬೆನ್ನಲ್ಲೇ ಚರ್ಚೆ ಆರಂಭವಾಗಿದೆ. ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಕುರಿತು ಸಚಿವರಾದ ಜಿ.ಪರಮೇಶ್ವರ ಮತ್ತು ಸತೀಶ ಜಾರಕಿಹೊಳಿ ತಮ್ಮ ಅಭಿಪ್ರಾಯಗಳನ್ನ ಹಂಚಿಕೊಂಡಿದ್ದಾರೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಪಾಳಯಕ್ಕೆ ಸೇರಿದರಾದ ಸಚಿವ ಕೆಎನ್ ರಾಜಣ್ಣ ಸುದ್ದಿಗಾರರೊಂದಿಗೆ ಮಾತನಾಡಿ, "ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಪಕ್ಷದ ಹೈಕಮಾಂಡ್ಗೆ ಬಿಟ್ಟಿದ್ದು. ಪಕ್ಷವು ಡಿಕೆ ಶಿವಕುಮಾರ್ ಅವರನ್ನು ಬದಲಾಯಿಸಲು ನಿರ್ಧರಿಸಿದಾಗ, ನಾನು ಖಂಡಿತವಾಗಿಯೂ ಈ ಹುದ್ದೆಯ ಆಕಾಂಕ್ಷಿ. ಇದಕ್ಕಾಗಿ ನಾನು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಲು ಸಿದ್ಧನಿದ್ದೇನೆ" ಎಂದು ಹೇಳಿದ್ದಾರೆ.

ಮುಂದುವರಿದು ಮಾತನಾಡಿದ ಅವರು, "ಕೆಪಿಸಿಸಿ ಅಧ್ಯಕ್ಷರನ್ನಾಗಿ ನೇಮಿಸಿದ ಮೇಲೆ ಭವಿಷ್ಯದಲ್ಲಿ ವಿಧಾನಸಭೆ, ಪರಿಷತ್ತು ಅಥವಾ ಲೋಕಸಭೆ ಚುನಾವಣೆಗಳಲ್ಲಿ ಸ್ಪರ್ಧಿಸುವುದಿಲ್ಲ. ಪಕ್ಷಕ್ಕಾಗಿ ಶ್ರಮಿಸುತ್ತೇನೆ. ಯಾವ ರಾಜಕೀಯ ಅಧಿಕಾರವೂ ನನಗೆ ಬೇಡ" ಎಂದು ಕೆಎನ್ ರಾಜಣ್ಣ ತಮ್ಮ ಆಕಾಂಕ್ಷೆಯನ್ನು ಮಾಧ್ಯಮಗಳ ಮುಂದಿಟ್ಟಿದ್ದಾರೆ.
ಎಚ್ ಡಿ ಕುಮಾರಸ್ವಾಮಿ ವಿರುದ್ಧ ರಾಜಣ್ಣ ಕಿಡಿ
ಹಾಸನ ಜಿಲ್ಲಾ ಉಸ್ತುವಾರಿ ಸಚಿವರೂ ಆದ ಕೆಎನ್ ರಾಜಣ್ಣ ಮಾತನಾಡಿ, ಜೆಡಿಎಸ್ ಮುಖಂಡ ಎಚ್ ಡಿ ಕುಮಾರಸ್ವಾಮಿ ಪೆನ್ ಡ್ರೈವ್ ಪಿತಾಮಹ. ಮಾಧ್ಯಮಗಳ ಮುಂದೆ ಪೆನ್ಡ್ರೈವ್ ವಿಷಯ ಎತ್ತಿದ ಮಾಡಿದ ಮೊದಲ ವ್ಯಕ್ತಿ ಎಚ್ಡಿ ಕುಮಾರಸ್ವಾಮಿ. ಇಂತಹ ಕೆಟ್ಟ ಘಟನೆಯ ನಂತರವೂ ಅವರು ತಮ್ಮ ಪೆನ್ ಡ್ರೈವ್ನ ವಿಷಯವನ್ನು ಬಹಿರಂಗಪಡಿಸಿಲ್ಲ. ಹಾಸನದಲ್ಲಿ ವಿತರಿಸಿದ್ದು ಇದೇ ಪೆನ್ಡ್ರೈವ್ ಎಂದು ಅಂದುಕೊಳ್ಳುವುದು ನ್ಯಾಯೋಚಿತವಾಗಿದೆ ಎಂದು ಸಚಿವರು ಹೇಳಿದ್ದಾರೆ.
-
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
NWKRTC: ದಾಂಡೇಲಿ-ಬೆಂಗಳೂರು ಮಧ್ಯೆ ಪಲ್ಲಕ್ಕಿ ವೈಭವ: ಬಸ್ಗಳ ಸಂಚಾರಕ್ಕೆ ಗ್ರೀನ್ ಸಿಗ್ನಲ್, ಡಿಟೇಲ್ಸ್ -
ಪಾರದರ್ಶಕ ನೇಮಕಾತಿಗಾಗಿ ಪ್ರತಿಷ್ಠಿತ 'ಸ್ಕಾಚ್ ರಾಷ್ಟ್ರೀಯ ಪ್ರಶಸ್ತಿ' ಮುಡಿಗೇರಿಸಿಕೊಂಡ KSRTC -
Gold Rate : ಮಾರ್ಚ್ 29ರ ಚಿನ್ನ ಮತ್ತು ಬೆಳ್ಳಿ ಬೆಲೆ: ಪ್ರಮುಖ ನಗರಗಳ ಇಂದಿನ ದರ ಪಟ್ಟಿ ಹೀಗಿದೆ -
ಕುಕ್ಕರ್ ಬಾಂಬ್ ಬ್ಲಾಸ್ಟ್ ಕೇಸ್: ಕಾಂಗ್ರೆಸ್ ಉಗ್ರರಿಗೆ 'ಗ್ಯಾರಂಟಿ ಭಾಗ್ಯ' ನೀಡಿದರೂ ಅಚ್ಚರಿಯಿಲ್ಲ; ವಿಜಯೇಂದ್ರ -
IPL 2026: ಆರ್ಸಿಬಿ-ಎಸ್ಆರ್ಎಚ್ ಉದ್ಘಾಟನಾ ಪಂದ್ಯಕ್ಕೆ ಮಳೆ ಅಡ್ಡಿಯಾಗಲಿದ್ಯಾ? ಹವಾಮಾನ ಇಲಾಖೆ ಹೇಳೋದೇನು? -
RCB: ಆರ್ಸಿಬಿ ಪಂದ್ಯದ ನಡುವೆಯೆ ಮತ್ತೊಮ್ಮ ಅಭಿಮಾನಿಗಳ ಮನಗೆದ್ದ 'ಕ್ರಶ್' ಅನನ್ಯಾ ಬಿರ್ಲಾ -
ಕನ್ನಡತಿ ಶ್ರೇಯಾಂಕಾ ಪಾಟೀಲ್, ಮಂಧಾನ ಜೊತೆ ಆರ್ಸಿಬಿ ಪಂದ್ಯ ವೀಕ್ಷಣೆ: ಕ್ರೀಡಾ ಸ್ಪೂರ್ತಿ ಮೆರೆದ ಜೆಮಿಮಾ ರೊಡ್ರಿಗಸ್ -
RCB: ಆರ್ಸಿಬಿ ಜೆರ್ಸಿ ಧರಿಸಿದವರಿಗೆ ಉಚಿತ ಪ್ರಯಾಣ; ಬೆಂಗಳೂರು ಆಟೋ ಚಾಲಕನ 'ಆಫರ್' ಪೋಸ್ಟರ್ ವೈರಲ್ -
Jowar Price Today: ಕರ್ನಾಟಕದಲ್ಲಿ ಕ್ವಿಂಟಾಲ್ ಜೋಳದ ಬೆಲೆ ಎಷ್ಟಿದೆ, ಮಾರುಕಟ್ಟೆವಾರು ಪಟ್ಟಿ ಇಲ್ಲಿದೆ. -
SSLC ಗಣಿತ ಪರೀಕ್ಷೆ ವಿಶ್ಲೇಷಣೆ : ಬ್ಲೂಪ್ರಿಂಟ್ನಂತೆಯೇ ಬಂತು ಪ್ರಶ್ನೆಪತ್ರಿಕೆ, ಔಟ್ ಆಫ್ ಔಟ್ ನಿರೀಕ್ಷೆಯಲ್ಲಿ ವಿದ್ಯಾರ್ಥಿಗಳು












Click it and Unblock the Notifications