ಸಾರ್ವಜನಿಕರಂತೆ ಬೆಂಗಳೂರು ರಸ್ತೆ ಮುಚ್ಚಲು ಕೋರಿದ ಸಚಿವರು ಅಸಹಾಯಕರಾದರೇ?
ಬೆಂಗಳೂರು, ಆಗಸ್ಟ್ 15: ಬೆಂಗಳೂರನ್ನು ಬ್ರ್ಯಾಂಡ್ ಬೆಂಗಳೂರಾಗಿ ಮಾಡಲು ಬೆಂಗಳೂರು ನಗರಾಭಿವೃದ್ಧಿ ಸಚಿವರೂ ಆದ ಡಿಸಿಎಂ ಡಿಕೆ ಶಿವಕುಮಾರ್ ಯೋಜಿಸಿದ್ದಾರೆ. ಅವರದ್ದೆ ಸಂಪುಟದ ಸಚಿವರೊಬ್ಬರು ಈ ರಸ್ತೆಯಲ್ಲಿನ ಗುಂಡಿಯನ್ನು ಯಾರಾದಗೂ ಮುಚ್ಚಿ, ಜನರ ಸಮಸ್ಯೆ ಬಗೆಹರಿಸುವಂತೆ ಎಂದು ಪರಿ ಪರಿಯಾಗಿ ಕೇಳಿಕೊಂಡಿದ್ದಾರೆ. ಈ ಮೂಲಕ ಸರ್ಕಾರದ ಸದಸ್ಯರೆ ನಗರದ ಸಮಸ್ಯೆಗಳನ್ನು ಎತ್ತಿತೋರಿಸುತ್ತದೆಯೇ ಎಂಬ ಅನುಮಾನ ಮೂಡುತ್ತಿದೆ. ಮತ್ತೊಂದೆಡೆ ಸಮಸ್ಯೆಗಳ ಫೋಟೋವನ್ನು ಸಾಮಾಜಿಕ ಜಾಲತಾಣದಲ್ಲಿ ಹಾಕಿ ಪರಿಹಾರ ಕೇಳುತ್ತಿರುವುದು ತೀವ್ರ ಚರ್ಚೆಗೆ ಹುಟ್ಟು ಹಾಕಿದೆ.
ಬೆಂಗಳೂರು ನಗರದ ರಸ್ತೆಗಳ ಗುಂಡಿಗಳ ಸಮಸ್ಯೆ ಕುರಿತು ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರು ಸಾಮಾಜಿಕ ಜಾಲತಾಣದಲ್ಲಿ ಹಾಳಾದ ರಸ್ತೆಯ ವಿಡಿಯೋ ಹಂಚಿಕೊಂಡು ಮನವಿ ಮಾಡಿದ್ದಾರೆ. ಬಿಬಿಎಂಪಿ ಹಾಗೂ ನಮ್ಮ ಮೆಟ್ರೋಗೆ ಟ್ಯಾಗ್ ಮಾಡಿದ್ದಾರೆ.

ನಗರದ ವೀರಣ್ಣಪಾಳ್ಯದಿಂದ ಹೆಬ್ಬಾಳ ಕಡೆಗಿನ ರಿಂಗ್ ರಸ್ತೆಯ ಸರ್ವಿಸ್ ರಸ್ತೆಯ ವಿಡಿಯೋವನ್ನು ಸಾರ್ವಜನಿಕರು ನನಗೆ ಕಳಿಸಿದ್ದಾರೆ. ಇದನ್ನು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (BBMP) ಮುಖ್ಯ ಆಯಕ್ತರು ಇಲ್ಲವೇ ಬೆಂಗಳೂರು ಮೆಟ್ರೋ ರೈಲು ನಿಗಮದ (BMRCL) ವ್ಯವಸ್ಥಾಪಕ ನಿರ್ದೇಶಕರು ಗಮನಿಸಬೇಕು.
ಸಾರ್ವಜನಿಕರ ಸಮಸ್ಯೆ ಪರಿಹರಿಸಲು ಕೋರಿಕೆ
ಸಂಬಂಧಿಸಿದ ಅಧಿಕಾರಿಗಳಾಗಲಿ, ಯಾರಾದರೂ ಆಗಲೇ, ದಯವಿಟ್ಟು ಈ ರಸ್ತೆಯನ್ನು ಗುಂಡಿಯನ್ನು ಮುಚ್ಚಿ ರಸ್ತೆ ದುರಸ್ಥಿ ಮಾಡಿ ಸಾರ್ವಜನಿಕರ ಸಮಸ್ಯೆಯನ್ನು ಪರಿಹರಿಸಬೇಕು ಎಂದು ವಿನಂತಿಸಿಕೊಂಡಿದ್ದಾರೆ.
ಸಿಎಂ ಸಿದ್ದರಾಮಯ್ಯ ನೇತೃತ್ವದ ಸಂಪುಟದಲ್ಲಿ ನಗರಾಭಿವೃದ್ಧಿ ಸಚಿವರಾದ ಡಿಕೆ ಶಿವಕುಮಾರ್ ಅವರು ಬ್ರ್ಯಾಂಡ್ ಬೆಂಗಳೂರು, ಸಮಸ್ಯೆಗಳ ಅಭಿವೃದ್ಧಿ ಬಗ್ಗೆ ಮಾತನಾಡುತ್ತಾರೆ. ಅದರ ಸಂಪುಟದ ಮತ್ತೊಬ್ಬ ಸಚಿವರು ನಗರದ ಸಮಸ್ಯೆಗಳನ್ನು ವಿಡಿಯೋ, ಫೋಟೋ ಸಾಕ್ಷಿ ಸಮೇತ ಹೇಳುತ್ತಿದ್ದಾರೆ. ಇದು ಚರ್ಚೆಗೆ ಗ್ರಾಸವಾಗಿದ್ದಲ್ಲದೇ, ಜಾಲತಾಣ ಬಳಕೆದಾರರು ಲೇವಡಿ ಸಹ ಮಾಡಿದ್ದಾರೆ.
ವೀರಣ್ಣಪಾಳ್ಯದಿಂದ ಹೆಬ್ಬಾಳ ಕಡೆಗಿನ ರಿಂಗ್ ರೋಡಿನ ಸರ್ವಿಸ್ ರಸ್ತೆಯ ವಿಡಿಯೋವನ್ನು ಸಾರ್ವಜನಿಕರು ನನಗೆ ಕಳಿಸಿದ್ದಾರೆ. @bbmpcommr ಅಥವಾ @BMRCL MD ಯಾರಾದ್ರೂ ಆಗಲಿ ದಯವಿಟ್ಟು ಗುಂಡಿಯನ್ನು ಮುಚ್ಚಿ ರಸ್ತೆ ದುರಸ್ಥಿ ಮಾಡಿ ಸಾರ್ವಜನಿಕರ ಸಮಸ್ಯೆಯನ್ನು ಪರಿಹರಿಸಿ. pic.twitter.com/qRDqy5NEzZ
— Krishna Byre Gowda (@krishnabgowda) August 14, 2024
ಸಚಿವರೇ ಅಸಹಾಯಕ ಸ್ಥಿತಿಯಲ್ಲಿದ್ದಾರೆಯೇ?
ಒಬ್ಬ ಕಂದಾಯ ಮಂತ್ರಿಗಳೇ ಅಸಹಾಯಕರಾದರೇ, ಒಂದು ಕರೆ ಮಾಡಿ ನೇರವಾಗಿ ಬಿಬಿಎಂಪಿ ಪೊಲೀಸ್ ಆಯುಕ್ತರೇ ತಿಳಿಸಬಹುದಿತ್ತು. ಅದನ್ನು ಮಾಡದೇ ಹೀಗೆ ಸಾರ್ವಜನಿಕ ಸೇವೆಯಲ್ಲಿರುವವರು ಸಾರ್ವಜನಿಕರಂತೆ ಸರ್ಕಾರವನ್ನು ಇಲ್ಲವೇ ಸಂಬಂಧಿಸಿದ ಇಲಾಖೆ ಅಧಿಕಾರಿಗಳನ್ನು ಬೇಡಿಕೊಳ್ಳುವ ಸ್ಥಿತಿ ಬಂದಿದೆ ಎಂದು ಲೇವಡಿ ಮಾಡಿದ್ದಾರೆ.
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications