ರಾಜ್ಯವನ್ನು ಲೂಟಿ ಮಾಡುವುದು, ಜನರಿಗೆ ಅನ್ಯಾಯ, ಕಲಾಪದ ಸಮಯ ಹಾಳುವುದೇ ಬಿಜೆಪಿ ಕೆಲಸ : ಸಚಿವ ಕೃಷ್ಣಭೈರೇಗೌಡ
ಬೆಂಗಳೂರು, ಜುಲೈ. 12: ರಾಜ್ಯವನ್ನು ಲೂಟಿ ಮಾಡುವುದು, ಜನಸಾಮಾನ್ಯರಿಗೆ ಅನ್ಯಾಯ ಮಾಡುವುದು ಮತ್ತು ಅನವಶ್ಯಕ ಕೂಗಾಟಗಳ ಮೂಲಕ ಸದನ ಕಲಾಪದ ಸಮಯ ವ್ಯರ್ಥ ಮಾಡುವುದೊಂದೆ ಬಿಜೆಪಿ ನಾಯಕರ ಕೆಲಸ ಎಂದು ಕಂದಾಯ ಸಚಿವ ಕೃಷ್ಣಭೈರೇಗೌಡ ಬುಧವಾರ ವಿಧಾನ ಪರಿಷತ್ನಲ್ಲಿ ಕಿಡಿಕಾರಿದ್ದಾರೆ.
ಕೊಲೆ ಆರೋಪಿ ಪುನೀತ್ ಕೆರೆಹಳ್ಳಿಗೆ ಉಪ್ಪಾರಪೇಟೆ ಪೊಲೀಸ್ ಠಾಣಾ ಅಧಿಕಾರಿ ಇತ್ತೀಚೆಗೆ ನೋಟೀಸ್ ಜಾರಿ ಮಾಡಿದ್ದರು. ಆ ನೊಟೀಸ್ ನಲ್ಲಿ ಮೆಜೆಸ್ಟಿಕ್ ಬಳಿ ಇರುವ ನಾಗರ ಕಟ್ಟಗೆ ಪೂಜೆ ಕಾರ್ಯಕ್ರಮ ಹಮ್ಮಿಕೊಳ್ಳಲು ಸಂಬಂಧ ಪಟ್ಟ ಅಧಿಕಾರಿಗಳಿಂದ ಅನುಮತಿ ಪಡೆಯುವಂತೆ ಸೂಚಿಸಲಾಗಿತ್ತು. ಈ ಬಗ್ಗೆ ವಿರೋಧ ಪಕ್ಷದ ನಾಯಕರು "ಪುನೀತ್ ಕೆರೆಹಳ್ಳಿ ಹಿಂದೂ ದೇವರಿಗೆ ಕೈಮುಗಿಯಲು ಪೋಲಿಸರ ಅನುಮತಿ ಪಡೆಯಬೇಕೆ?" ಎಂದು ಆಕ್ರೋಶ ಹೊರಹಾಕಿದ್ದರು.

ಇದಕ್ಕೆ ಬುಧವಾರ ವಿಧಾನ ಪರಿಷತ್ ಶೂನ್ಯ ವೇಳೆ ಕಲಾಪದಲ್ಲಿ ಸರ್ಕಾರದ ಪರವಾಗಿ ಉತ್ತರ ನೀಡಲು ಮುಂದಾದ ಸಚಿವ ಕೃಷ್ಣಭೈರೇಗೌಡ, "ಈ ಪ್ರಕರಣದ ಬಗ್ಗೆ ಮಾಹಿತಿ ಇಲ್ಲ. ಸಂಬಂಧಿಸಿ ಅಧಿಕಾರಿಯಿಂದ ಮಾಹಿತಿ ಪಡೆದು ಎರಡು ದಿನಗಳಲ್ಲಿ ಸದನಕ್ಕೆ ಉತ್ತರ ನೀಡಲಾಗುವುದು" ಎಂದು ಸ್ಪಷ್ಟೀಕರಣ ನೀಡಿದ್ದಾರೆ. ಅದರೆ, ಇಷ್ಟಕ್ಕೆ ಸುಮ್ಮನಾಗದ ವಿರೋಧ ಪಕ್ಷದ ನಾಯಕರು ಈಗಾಗಲೇ ಉತ್ತರ ಬೇಕು ಎಂದು ಪಟ್ಟುಹಿಡಿದ್ದಾರೆ.
ಈ ವೇಳೆ ಸದನದ ನೀತಿ ನಿಯಮಗಳನ್ನು ಉಲ್ಲೇಖಿಸಿದ ಕೃಷ್ಣಭೈರೇಗೌಡ " ಸದನದ ನಿಯಮ 51ಡಿ ಪ್ರಕಾರ ವಿರೋಧ ಪಕ್ಷದ ಸದಸ್ಯರ ಪ್ರಶ್ನೆಗಳಿಗೆ ಉತ್ತರ ನೀಡಲು ಎರಡು ದಿನಗಳ ಅವಕಾಶ ಇದೆ. ವಿರೋಧ ಪಕ್ಷದ ನಾಯಕರು ದಯವಿಟ್ಟು ನಿಯಮಗಳ ಅನುಸಾರ ಕಲಾಪ ನಡೆಸಲು ಅನುವು ಮಾಡಿಕೊಡಬೇಕು ಎಂದು ಮನವಿ ಮಾಡಿದ್ದಾರೆ.

ಸಭಾಪತಿ ಬಸವರಾಜ ಹೊರಟ್ಟಿ ಸಹ ಸಚಿವ ಕೃಷ್ಣಭೈರೇಗೌಡ ಅವರ ಮಾತಿಗೆ ದನಿಗೂಡಿಸಿ, ಬಿಜೆಪಿಗರು ಗದ್ದಲ ಎಬ್ಬಿಸಿ ಸದನದ ಕಲಾಪಕ್ಕೆ ಅಡ್ಡಿಪಡಿಸಬಾರದು ಎಂದು ಸೂಚಿಸಿದರು. ಆದರೂ, ಸಭಾಪತಿಗಳ ಮಾತಿಗೂ ಕಿವಿಗೊಡದ ಬಿಜೆಪಿ ಸದಸ್ಯರು ಸದನದ ಭಾವಿಗಿಳಿದು ಸಚಿವರು ಈಗಲೇ ಉತ್ತರ ನೀಡಬೇಕು ಎಂದು ಪಟ್ಟುಹಿಡಿದ ಕಾರಣ ಸದನದಲ್ಲಿ ಗದ್ದಲ ಉಂಟಾಗಿತ್ತು.
ಈ ವೇಳೆ ವಿರೋಧ ಪಕ್ಷದ ಸದಸ್ಯರ ವರ್ತನೆಯ ವಿರುದ್ಧ ಕಿಡಿಕಾರಿದ ಸಚಿವ ಕೃಷ್ಣಭೈರೇಗೌಡ, " ನಿಮಯದ ಅನುಸಾರ ಎರಡು ದಿನಗಳಲ್ಲಿ ಉತ್ತರ ನೀಡುವುದಾಗಿ ಹೇಳಿದರೂ ವಿರೋಧ ಪಕ್ಷದ ನಾಯಕರು ಉದ್ದೇಶಪೂರ್ವಕವಾಗಿ ಸದನದ ಸಮಯವನ್ನು ಹಾಳು ಮಾಡುತ್ತಿದ್ದಾರೆ. ಇವರಿಗೆ ಸದನ ನಡೆಯುವುದು ಅಗತ್ಯವಿಲ್ಲ. ರಾಜ್ಯವನ್ನು ಲೂಟಿ ಮಾಡುವುದು, ಜನರಿಗೆ ಅನ್ಯಾಯ ಮಾಡುವುದೊಂದೇ ಇವರ ಗುರಿ. ಇವರು ಏನೇ ಗದ್ದಲ ಎಬ್ಬಿಸಿದರು ಸತ್ಯವೇನು? ಎಂಬುದು ಜನರಿಗೆ ಗೊತ್ತು" ಎಂದು ವಾಗ್ದಾಳಿ ನಡೆಸಿದ್ದಾರೆ.
-
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
Karnataka Weather: ಇಂದು ರಾಜ್ಯದ ಹಲವೆಡೆ ಗುಡುಗು ಸಹಿತ ಅಕಾಲಿಕ ಮಳೆ, ಬೆಂಗಳೂರಿನಲ್ಲಿ ಹೇಗಿರಲಿದೆ ವಾತಾವರಣ? -
ಐಪಿಎಲ್ 2026 ಅಂಕಪಟ್ಟಿ: ರಾಜಸ್ಥಾನ್ ರಾಯಲ್ಸ್ ನಂಬರ್ 1, ಎರಡನೇ ಸ್ಥಾನದಲ್ಲಿ ಅಬ್ಬರಿಸುತ್ತಿರುವ ಆರ್ಸಿಬಿ! -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ -
Viral Video: ವಿದೇಶಿ ಛಾಯಾಗ್ರಾಹಕರ ಫೋಟೋಗ್ರಫಿ ಹುಚ್ಚುತನಕ್ಕೆ ಜೀವ ಕಳೆದುಕೊಂಡಿತೇ ಭಾರತದ ಮುದ್ದಾದ ಆನೆ, ಏನಿದು ಚರ್ಚೆ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
ವಂದೇ ಭಾರತ್ ರೈಲಿನ ಊಟ ಸೇವಿಸಿದ ಮಹಿಳೆಗೆ ತೀವ್ರ ಅಲರ್ಜಿ, 2 ವರ್ಷದ ಮಗನಿಗೆ ಅತಿಸಾರ: IRCTC ಹೇಳಿದ್ದೇನು? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ












Click it and Unblock the Notifications