ರಾಜ್ಯವನ್ನು ಲೂಟಿ ಮಾಡುವುದು, ಜನರಿಗೆ ಅನ್ಯಾಯ, ಕಲಾಪದ ಸಮಯ ಹಾಳುವುದೇ ಬಿಜೆಪಿ ಕೆಲಸ : ಸಚಿವ ಕೃಷ್ಣಭೈರೇಗೌಡ
ಬೆಂಗಳೂರು, ಜುಲೈ. 12: ರಾಜ್ಯವನ್ನು ಲೂಟಿ ಮಾಡುವುದು, ಜನಸಾಮಾನ್ಯರಿಗೆ ಅನ್ಯಾಯ ಮಾಡುವುದು ಮತ್ತು ಅನವಶ್ಯಕ ಕೂಗಾಟಗಳ ಮೂಲಕ ಸದನ ಕಲಾಪದ ಸಮಯ ವ್ಯರ್ಥ ಮಾಡುವುದೊಂದೆ ಬಿಜೆಪಿ ನಾಯಕರ ಕೆಲಸ ಎಂದು ಕಂದಾಯ ಸಚಿವ ಕೃಷ್ಣಭೈರೇಗೌಡ ಬುಧವಾರ ವಿಧಾನ ಪರಿಷತ್ನಲ್ಲಿ ಕಿಡಿಕಾರಿದ್ದಾರೆ.
ಕೊಲೆ ಆರೋಪಿ ಪುನೀತ್ ಕೆರೆಹಳ್ಳಿಗೆ ಉಪ್ಪಾರಪೇಟೆ ಪೊಲೀಸ್ ಠಾಣಾ ಅಧಿಕಾರಿ ಇತ್ತೀಚೆಗೆ ನೋಟೀಸ್ ಜಾರಿ ಮಾಡಿದ್ದರು. ಆ ನೊಟೀಸ್ ನಲ್ಲಿ ಮೆಜೆಸ್ಟಿಕ್ ಬಳಿ ಇರುವ ನಾಗರ ಕಟ್ಟಗೆ ಪೂಜೆ ಕಾರ್ಯಕ್ರಮ ಹಮ್ಮಿಕೊಳ್ಳಲು ಸಂಬಂಧ ಪಟ್ಟ ಅಧಿಕಾರಿಗಳಿಂದ ಅನುಮತಿ ಪಡೆಯುವಂತೆ ಸೂಚಿಸಲಾಗಿತ್ತು. ಈ ಬಗ್ಗೆ ವಿರೋಧ ಪಕ್ಷದ ನಾಯಕರು "ಪುನೀತ್ ಕೆರೆಹಳ್ಳಿ ಹಿಂದೂ ದೇವರಿಗೆ ಕೈಮುಗಿಯಲು ಪೋಲಿಸರ ಅನುಮತಿ ಪಡೆಯಬೇಕೆ?" ಎಂದು ಆಕ್ರೋಶ ಹೊರಹಾಕಿದ್ದರು.

ಇದಕ್ಕೆ ಬುಧವಾರ ವಿಧಾನ ಪರಿಷತ್ ಶೂನ್ಯ ವೇಳೆ ಕಲಾಪದಲ್ಲಿ ಸರ್ಕಾರದ ಪರವಾಗಿ ಉತ್ತರ ನೀಡಲು ಮುಂದಾದ ಸಚಿವ ಕೃಷ್ಣಭೈರೇಗೌಡ, "ಈ ಪ್ರಕರಣದ ಬಗ್ಗೆ ಮಾಹಿತಿ ಇಲ್ಲ. ಸಂಬಂಧಿಸಿ ಅಧಿಕಾರಿಯಿಂದ ಮಾಹಿತಿ ಪಡೆದು ಎರಡು ದಿನಗಳಲ್ಲಿ ಸದನಕ್ಕೆ ಉತ್ತರ ನೀಡಲಾಗುವುದು" ಎಂದು ಸ್ಪಷ್ಟೀಕರಣ ನೀಡಿದ್ದಾರೆ. ಅದರೆ, ಇಷ್ಟಕ್ಕೆ ಸುಮ್ಮನಾಗದ ವಿರೋಧ ಪಕ್ಷದ ನಾಯಕರು ಈಗಾಗಲೇ ಉತ್ತರ ಬೇಕು ಎಂದು ಪಟ್ಟುಹಿಡಿದ್ದಾರೆ.
ಈ ವೇಳೆ ಸದನದ ನೀತಿ ನಿಯಮಗಳನ್ನು ಉಲ್ಲೇಖಿಸಿದ ಕೃಷ್ಣಭೈರೇಗೌಡ " ಸದನದ ನಿಯಮ 51ಡಿ ಪ್ರಕಾರ ವಿರೋಧ ಪಕ್ಷದ ಸದಸ್ಯರ ಪ್ರಶ್ನೆಗಳಿಗೆ ಉತ್ತರ ನೀಡಲು ಎರಡು ದಿನಗಳ ಅವಕಾಶ ಇದೆ. ವಿರೋಧ ಪಕ್ಷದ ನಾಯಕರು ದಯವಿಟ್ಟು ನಿಯಮಗಳ ಅನುಸಾರ ಕಲಾಪ ನಡೆಸಲು ಅನುವು ಮಾಡಿಕೊಡಬೇಕು ಎಂದು ಮನವಿ ಮಾಡಿದ್ದಾರೆ.

ಸಭಾಪತಿ ಬಸವರಾಜ ಹೊರಟ್ಟಿ ಸಹ ಸಚಿವ ಕೃಷ್ಣಭೈರೇಗೌಡ ಅವರ ಮಾತಿಗೆ ದನಿಗೂಡಿಸಿ, ಬಿಜೆಪಿಗರು ಗದ್ದಲ ಎಬ್ಬಿಸಿ ಸದನದ ಕಲಾಪಕ್ಕೆ ಅಡ್ಡಿಪಡಿಸಬಾರದು ಎಂದು ಸೂಚಿಸಿದರು. ಆದರೂ, ಸಭಾಪತಿಗಳ ಮಾತಿಗೂ ಕಿವಿಗೊಡದ ಬಿಜೆಪಿ ಸದಸ್ಯರು ಸದನದ ಭಾವಿಗಿಳಿದು ಸಚಿವರು ಈಗಲೇ ಉತ್ತರ ನೀಡಬೇಕು ಎಂದು ಪಟ್ಟುಹಿಡಿದ ಕಾರಣ ಸದನದಲ್ಲಿ ಗದ್ದಲ ಉಂಟಾಗಿತ್ತು.
ಈ ವೇಳೆ ವಿರೋಧ ಪಕ್ಷದ ಸದಸ್ಯರ ವರ್ತನೆಯ ವಿರುದ್ಧ ಕಿಡಿಕಾರಿದ ಸಚಿವ ಕೃಷ್ಣಭೈರೇಗೌಡ, " ನಿಮಯದ ಅನುಸಾರ ಎರಡು ದಿನಗಳಲ್ಲಿ ಉತ್ತರ ನೀಡುವುದಾಗಿ ಹೇಳಿದರೂ ವಿರೋಧ ಪಕ್ಷದ ನಾಯಕರು ಉದ್ದೇಶಪೂರ್ವಕವಾಗಿ ಸದನದ ಸಮಯವನ್ನು ಹಾಳು ಮಾಡುತ್ತಿದ್ದಾರೆ. ಇವರಿಗೆ ಸದನ ನಡೆಯುವುದು ಅಗತ್ಯವಿಲ್ಲ. ರಾಜ್ಯವನ್ನು ಲೂಟಿ ಮಾಡುವುದು, ಜನರಿಗೆ ಅನ್ಯಾಯ ಮಾಡುವುದೊಂದೇ ಇವರ ಗುರಿ. ಇವರು ಏನೇ ಗದ್ದಲ ಎಬ್ಬಿಸಿದರು ಸತ್ಯವೇನು? ಎಂಬುದು ಜನರಿಗೆ ಗೊತ್ತು" ಎಂದು ವಾಗ್ದಾಳಿ ನಡೆಸಿದ್ದಾರೆ.
-
Gold: ಲಕ್ಕುಂಡಿಯಲ್ಲಿ ಸಿಕ್ಕ ಬಂಗಾರದ ನಿಧಿ ಮೌಲ್ಯ 8 ಕೋಟಿ ರೂ.; ನಿಧಿ ಕೊಟ್ಟ ಕುಟುಂಬದಿಂದ ಹೊಸ ಡಿಮ್ಯಾಂಡ್, ಉತ್ಖನನ ಅಂತ್ಯ -
Karnataka Weather Mar 12: ಬಿಸಿಲು ಹೆಚ್ಚಳದ ನಡುವೆ ಮಾರ್ಚ್ 15ರಿಂದ ಕರ್ನಾಟಕದಲ್ಲಿ ಮಳೆ, ಹೇಗಿದೆ ಇಂದಿನ ವೆದರ್ -
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
ಪಿಎಂ ಇ-ಬಸ್ ಯೋಜನೆ: ಕರ್ನಾಟಕದಲ್ಲಿ ರಸ್ತೆಗಿಳಿಯಲಿವೆ 750 ಇ-ಬಸ್ಗಳು; ಮಹಾರಾಷ್ಟ್ರಕ್ಕೆ ಸಿಂಹಪಾಲು -
Bengaluru Drone Survey: ಬೆಂಗಳೂರಿನಲ್ಲಿ ಆಸ್ತಿಗಳ ಡ್ರೋನ್ ಸರ್ವೇ: ಇದರ ಉದ್ದೇಶವೇನು, ವಿರೋಧವೇಕೆ ಇಲ್ಲಿದೆ ಮಾಹಿತಿ -
ಇರಾನ್ ಸಂಘರ್ಷ: ಭಾರತದ ಪ್ರಯತ್ನಕ್ಕೆ ಫಲ, ಕೊಲ್ಲಿ ಮಾರ್ಗವಾಗಿ ಭಾರತಕ್ಕೆ ಬಂದ ಮೊದಲ ತೈಲ ಟ್ಯಾಂಕರ್ -
ಒಣ ಮೆಣಸಿನಕಾಯಿ ಬಳಸುವ ಮುನ್ನ ಈ ಕೆಲಸ ಮಾಡಿದ್ದೀರಾ? ಆರೋಗ್ಯ ಕಾಪಾಡಲು ಇಲ್ಲಿದೆ ಸೂಪರ್ ಐಡಿಯಾ -
ಭಾರತದ ಹಡಗುಗಳಿಗೆ ಭರ್ಜರಿ ಸುದ್ದಿ ನೀಡಿದ ಇರಾನ್, ಗ್ಯಾಸ್ ಸಮಸ್ಯೆ ಇತ್ಯರ್ಥ ಸಾಧ್ಯತೆ | Operation Roaring Lion -
Swamijis: ಬಹುತೇಕ ಕಾವಿಧಾರಿ ಸ್ವಾಮೀಜಿಗಳು ಅವಿವಾಹಿತರು, ಆದರೆ ಅವರೆಲ್ಲರೂ ಬ್ರಹ್ಮಚಾರಿಗಳಲ್ಲ: ರವಿಕೃಷ್ಣ ರೆಡ್ಡಿ












Click it and Unblock the Notifications