ಹಸ್ತಕ್ಷೇಪ ವಿಷಯವಾಗಿ ಸಿಎಂ ವಿರುದ್ಧ ರಾಜ್ಯಪಾಲರಿಗೆ ದೂರು: ಸಚಿವ ಈಶ್ವರಪ್ಪ ಹೇಳಿದ್ದೇನು?
ಬೆಂಗಳೂರು, ಏಪ್ರಿಲ್ 1: ನನ್ನ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ವಿಷಯಗಳನ್ನು ರಾಜ್ಯಪಾಲರ ಬಳಿ ಮಾತನಾಡಿಕೊಂಡು ಬಂದಿದ್ದೇನೆ ಅಷ್ಟೇ, ಅದರಲ್ಲೇನೂ ವಿಶೇಷತೆ ಇಲ್ಲ ಎಂದು ಸಚಿವ ಕೆ.ಎಸ್ ಈಶ್ವರಪ್ಪ ತಿಳಿಸಿದರು.
ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಸಿಎಂ ಯಡಿಯೂರಪ್ಪ ಅವರು ಹಸ್ತಕ್ಷೇಪ ಮಾಡುತ್ತಿದ್ದಾರೆ ಎಂದು ರಾಜ್ಯಪಾಲರಿಗೆ ಲಿಖಿತ ದೂರು ನೀಡಿರುವ ವಿಷಯವಾಗಿ ಪ್ರತಿಕ್ರಿಯಿಸಿದ ಅವರು, ಇಲಾಖೆ ವಿಷಯಗಳನ್ನು ಚರ್ಚೆ ಮಾಡುವುದಕ್ಕೆ ಅವಕಾಶವಿತ್ತು, ಭೇಟಿ ಮಾಡಿಕೊಂಡು ಬಂದಿದ್ದೇನೆ. ಅಸಮಾಧಾನ ಎಂಬ ಪ್ರಶ್ನೆಯೇ ಇಲ್ಲ ಎಂದು ಸ್ಪಷ್ಟಪಡಿಸಿದರು.
ನನ್ನ ಇಲಾಖೆಗೆ ಸಂಬಂಧಿಸಿದ ವಿಷಯಗಳನ್ನು ಮಾತನಾಡಲು ರಾಜ್ಯಪಾಲರಷ್ಟೇ ಅಲ್ಲ, ದೆಹಲಿಗೂ ಹೋಗುತ್ತೇನೆ. ದೆಹಲಿಯಲ್ಲಿ ನಮ್ಮ ಪಕ್ಷದ ನಾಯಕರ ಬಳಿ, ಕೇಂದ್ರ ಮಂತ್ರಿಗಳ ಜೊತೆ, ಇಲಾಖೆ ಅಧಿಕಾರಿಗಳ ಜೊತೆ, ಇಲಾಖಾ ಅಭಿವೃದ್ಧಿ ಕುರಿತಂತೆ ಅನೇಕ ಚರ್ಚೆಗಳನ್ನು ಮಾಡಬೇಕಾಗುತ್ತದೆ ಎಂದರು.

ಇದರಲ್ಲಿ ವಿಶೇಷವೇನೂ ಇಲ್ಲ, ಇಲಾಖೆ ಅನುದಾನ ವರ್ಗಾವಣೆ ಆಂತರಿಕ ವಿಷಯ. ಅದನ್ನು ಮಾಧ್ಯಮಗಳ ಎದುರು ಮಾತನಾಡಲು ಬರುವುದಿಲ್ಲ ಎಂದು ಹೇಳಿದರು.

ಸಚಿವ ಕೆ.ಎಸ್ ಈಶ್ವರಪ್ಪ ಅವರು ರಾಜ್ಯಪಾಲರಿಗೆ ಬರೆದಿರುವ ಪತ್ರದಲ್ಲಿ, ಕಳೆದ ಒಂದು ವರ್ಷದಿಂದ ನನ್ನ ಇಲಾಖೆಯಲ್ಲಿ ಮುಖ್ಯಮಂತ್ರಿಗಳು ಅನಗತ್ಯವಾಗಿ ಹಸ್ತಕ್ಷೇಪ ಮಾಡುತ್ತಿದ್ದಾರೆ. ನನ್ನ ಗಮನಕ್ಕೆ ಬರದೇ ಅನೇಕ ತೀರ್ಮಾನಗಳನ್ನು ಕೈಗೊಳ್ಳುತ್ತಿದ್ದಾರೆ. ಹಿರಿಯ ಸಚಿವನಾದ ನನಗೆ ಮುಜುಗರ ತರುತ್ತಿದೆ ಎಂದು ದೂರಿನ ಪತ್ರದಲ್ಲಿ ವಿವರಿಸಿದ್ದಾರೆ.
ಕ್ಷಣ ಕ್ಷಣದ ಸುದ್ದಿಗಳಿಗಾಗಿ ಒನ್ ಇಂಡಿಯಾ ಕನ್ನಡ ಟೆಲಿಗ್ರಾಂ ಚಾನಲ್ ಸೇರಿ
Recommended Video
-
March 20 Horoscope: ಆರೋಗ್ಯ ಮತ್ತು ಹಣಕಾಸು ವಿಷಯದಲ್ಲಿ ಈ ರಾಶಿಗೆ ಲಾಭ -
Karnataka Rain: ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ -
40,000 ಹೋಟೆಲ್ ಮಾಲೀಕರಿಗೆ ಭರ್ಜರಿ ಸುದ್ದಿ, ಎಲ್ಪಿಜಿ ಸಿಲಿಂಡರ್ ನಿಯಮ ಬದಲಾವಣೆ... LPG Cylinder Supply -
ಕೇವಲ 2 ನಿಮಿಷದಲ್ಲಿ ಉದ್ಯೋಗ ಅರ್ಜಿ ರಿಜೆಕ್ಟ್: 'ಎಐ' ನೇಮಕಾತಿ ಬಗ್ಗೆ ಭಾರತೀಯ ಮೂಲದ ವಿದ್ಯಾರ್ಥಿನಿ ಬೇಸರ -
Gold Rate Today: ಬೆಂಗಳೂರಿನಲ್ಲಿ ಚಿನ್ನದ ದರ ಮತ್ತೆ ಏರಿಕೆ: 15,000 ರೂಪಾಯಿ ಗಡಿ ದಾಟಿದ 24 ಕ್ಯಾರೆಟ್ ಚಿನ್ನ -
Summer Camp: ಶೃಂಗೇರಿ ಶಾರದಾ ಪೀಠದಿಂದ ವಟುಗಳಿಗಾಗಿ 15 ದಿನಗಳ ಉಚಿತ 'ಸಂಸ್ಕಾರ' ಬೇಸಿಗೆ ಶಿಬಿರ -
Rishab Shetty: ಅಧ್ಯಾಯ ಎರಡು ಇಲ್ಲಿಂದ ಶುರು; ಸ್ಯಾಂಡಲ್ವುಡ್ನಲ್ಲಿ ಸಂಚಲನ ಮೂಡಿಸಿದ ರಿಷಬ್ ಶೆಟ್ಟಿ ಪೋಸ್ಟ್ -
ಹೊಸತೊಡಕು: ಮಧ್ಯರಾತ್ರಿಯಿಂದಲೇ ಮಾಂಸ ಖರೀದಿ ಭರಾಟೆ, ಎಷ್ಟಿದೆ ಇಂದಿನ ಚಿಕನ್-ಮಟನ್ ದರ? -
World Happiness Report 2026: ಫಿನ್ಲೆಂಡ್ ಜಗತ್ತಿನ ಅತ್ಯಂತ ಸಂತೋಷದಾಯಕ ದೇಶ: ನಮ್ಮ ಭಾರತಕ್ಕೆ ಸಿಕ್ಕ ಸ್ಥಾನವೆಷ್ಟು? -
ಈ ಸಂವತ್ಸರಕ್ಕೇಕೆ ಈ ಹೆಸರು? ‘ಪರಾಭವ’ ಅಂದ್ರೆ ‘ಸೋಲು’ ಎಂಬ ಅರ್ಥವಲ್ಲವೇ? -
Rashmika Mandanna: ಮನೆಮಗಳಾಗಿ ಇಲ್ಲಿಗೆ ಬಂದೆ, ಈಗ ಸೊಸೆಯಾಗಿ ನಿಂತಿದ್ದೇನೆ: ರಶ್ಮಿಕಾ ಮಂದಣ್ಣ ಭಾವುಕ -
ಕೇಂದ್ರೀಯ ವಿದ್ಯಾಲಯ 1ನೇ ತರಗತಿ ಪ್ರವೇಶಾತಿ 2026: ಇಂದಿನಿಂದಲೇ ಅರ್ಜಿ ಸಲ್ಲಿಕೆ ಶುರು, ಪೋಷಕರೇ ಈಗಲೇ ಗಮನಿಸಿ












Click it and Unblock the Notifications