ಬಸ್ ಟಿಕೆಟ್ ದರ ಏರಿಕೆಗೆ ಕಾರಣ ತಿಳಿಸಿದ ಸಚಿವ ಲಕ್ಷ್ಮಣ್ ಸವದಿ

ಬೆಂಗಳೂರು, ಫೆಬ್ರವರಿ 27: ಬಸ್ ಪ್ರಯಾಣ ದರ ಏರಿಕೆ ಮಾಡಲು ಇದ್ದ ಕಾರಣವನ್ನು ಸಚಿವ ಲಕ್ಷ್ಮಣ ಸವದಿ ತಿಳಿಸಿದ್ದಾರೆ.

Recommended Video

      ಲಕ್ಷ್ಮಣ ಸವದಿಯಿಂದ ಖಾತೆ ಕಿತ್ತುಕೊಂಡ ಯಡಿಯೂರಪ್ಪ | Lakshman Savadi | Yediyurappa

      2014ರಿಂದಲೂ ಬಸ್ ದರ ಏರಿಕೆ ಮಾಡಿರಲಿಲ್ಲ. ಹೀಗಾಗಿ ಏರಿಕೆ ಮಾಡಲಾಗಿದೆ. ಬಡವರಿಗೆ ಹೊರೆಯಾಗದ ರೀತಿ ಬಸ್​ ಪ್ರಯಾಣ ದರ ಏರಿಕೆ ಮಾಡಿದ್ದೇವೆ. ಮೊದಲು ಕುಮಾರಸ್ವಾಮಿ ಬಸ್​ ದರ ಕುರಿತಾದ ಆದೇಶ ನೋಡಲಿ, ಬಳಿಕ ಮಾತನಾಡಲಿ ಎಂದು ಗುಡುಗಿದ್ದಾರೆ.

      ಮೂರೂವರೆ ವರ್ಷಗಳ ಕಾಲ ಬಿ.ಎಸ್​.ಯಡಿಯೂರಪ್ಪ ಮುಖ್ಯಮಂತ್ರಿ ಆಗಿರುತ್ತಾರೆ. ಇದರಲ್ಲಿ ಯಾರಿಗೂ ಯಾವುದೇ ಅನುಮಾನ ಬೇಡ. ನಮ್ಮಲ್ಲಿ ಯಾವುದೇ ಭಿನ್ನಾಭಿಪ್ರಾಯಗಳು ಇಲ್ಲ. ನಾವೆಲ್ಲರೂ ಒಗ್ಗಟ್ಟಾಗಿದ್ದೇವೆ. ಸಿಎಂ ಪರ, ವಿರುದ್ಧ ಹೈಕಮಾಂಡ್​ಗೆ ಪತ್ರ ಸುಳ್ಳು ಎಂದು ಹೇಳಿದರು. ಬಸ್ ಟಿಕೆಟ್ ದರವನ್ನು ಶೇ.12ರಷ್ಟು ಹೆಚ್ಚಿಸಲಾಗಿದೆ.

      Minister Lakshman Savadi Given Clarification About Bus Ticket Price Hike

      ಎಚ್​ಡಿಕೆ ಟೀಕೆ ಮಾಡುವ ಮುನ್ನ ಬಸ್ ದರ ಕುರಿತು ಆದೇಶ ನೋಡಲಿ. 2014ರಿಂದ ಈವರೆಗೂ ಬಸ್​ ಪ್ರಯಾಣ ದರ ಏರಿಸಿರಲಿಲ್ಲ. ಈಗ ನಿಗಮಗಳ ನಷ್ಟ ಸರಿದೂಗಿಸಲು ದರ ಏರಿಕೆ ಮಾಡಿದ್ದೇವೆ. ಸಾರಿಗೆ ನಿಗಮಗಳು ತುಂಬಾ ಸಂಕಷ್ಟದಲ್ಲಿವೆ. ಈ ನಷ್ಟ ಸರಿದೂಗಿಸಲು ಬಸ್​ ದರ ಏರಿಸಿದ್ದೇವೆ ಎಂದು ಸ್ಪಷ್ಟನೆ ನೀಡಿದರು.

      ಮುಂದುವರೆದ ಅವರು, ನಿಗಮಗಳಲ್ಲಿ ಸೋರಿಕೆ ತಡೆಗಟ್ಟಲು ಅಧಿಕಾರಿಗಳಿಗೆ ಖಡಕ್ ಆಗಿ ಸೂಚನೆ ನೀಡಿದ್ದೇನೆ ಎಂದರು. ನಿಗಮಗಳು ಸಂಕಷ್ಟದಲ್ಲಿದ್ದವು ಅದನ್ನು ಸರಿಪಡಿಸಲು ಈ ನಿರ್ಧಾರ ತೆಗೆದುಕೊಂಡಿದ್ದೇವೆ ಎಂದು ತಿಳಿಸಿದರು.

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+