'ನಾವು ಪಂಚ ಪಾಂಡವರು, ಅವರಿಬ್ಬರು ಯಾರು ಅಂತಾ ಗೊತ್ತಿದೆ'- ಆರ್ ಅಶೋಕ್
ಬೆಂಗಳೂರು, ಜುಲೈ 24: ವೈದ್ಯಕೀಯ ಸಾಮಾಗ್ರಿಗಳ ಖರೀದಿಯಲ್ಲಿ ಭ್ರಷ್ಟಾಚಾರ ಕುರಿತು ನ್ಯಾಯಾಂಗ ತನಿಖೆ ಮಾಡಲಿ ಎಂಬ ಸಿದ್ದರಾಮಯ್ಯ ಆರೋಪಕ್ಕೆ ಕಂದಾಯ ಸಚಿವ ಆರ್ ಅಶೋಕ್ ಪ್ರತಿಕ್ರಿಯಿಸಿದ್ದು 'ಇವರು ಹೇಳಿದ್ದಕ್ಕೆಲ್ಲಾ ತನಿಖೆ ಮಾಡಿಸಲು ಆಗಲ್ಲ. ತನಿಖೆಗೆ ಆಗ್ರಹ ಮಾಡುವುದೇ ಇವರಿಗೊಂದು ಚಟ ಆಗಿದೆ' ಎಂದಿದ್ದಾರೆ.
Recommended Video
'ಸರ್ಕಾರದ ಭ್ರಷ್ಟಾಚಾರದ ಕುರಿತು ಹೈಕೋರ್ಟ್ ಹಾಲಿ ನ್ಯಾಯಮೂರ್ತಿಗಳಿಂದ ತನಿಖೆಯಾಗಲಿ. ತನಿಖೆಗೆ ಸರ್ಕಾರ ಒಪ್ಪುವುದಿಲ್ಲ ಎಂದಾದರೆ ಅವರು ಕಳ್ಳತನ ಮಾಡಿದ್ದಾರೆ ಎಂದು ಅರ್ಥ' ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಇಂದು ಸಹ ಆಗ್ರಹಿಸಿದ್ದರು.
ಈ ಬಗ್ಗೆ ಬೆಂಗಳೂರಿನಲ್ಲಿ ಮಾತನಾಡಿದ ಆರ್ ಅಶೋಕ್ ''ಸಿದ್ದರಾಮಯ್ಯ ಅವರು ವಿರೋಧ ಪಕ್ಷದ ನಾಯಕರು ಅನ್ನೋದು ನೆನಪಿರಲಿ. ಅವರು ಹೀಗೇ ಮಾಡಬೇಕು ಎಂದು ಆರ್ಡರ್ ಮಾಡುವಂತಿಲ್ಲ' ಎಂದು ತಿರುಗೇಟು ನೀಡಿದ್ದಾರೆ. ಮುಂದೆ ಓದಿ...

ಆರ್ಡರ್ ಮಾಡುವಂತಿಲ್ಲ, ಸಲಹೆ ಕೊಡಬೇಕು ಅಷ್ಟೇ
'ಸಿದ್ದರಾಮಯ್ಯ ಅವರು ವಿರೋಧ ಪಕ್ಷದ ನಾಯಕರು ಅನ್ನೋದು ನೆನಪಿರಲಿ. ಅವರು ಹೀಗೇ ಮಾಡಬೇಕು ಎಂದು ಆರ್ಡರ್ ಮಾಡುವಂತಿಲ್ಲ, ಸಲಹೆ ಕೊಡಬೇಕು ಅಷ್ಟೇ. ನಾವು ಈಗಾಗಲೇ ಅವರಿಗೆ ಸುದ್ದಿಗೋಷ್ಠಿ ಮಾಡಿ ಉತ್ತರ ಕೊಟ್ಟಿದ್ದೇವೆ. ನಮ್ಮ ಉತ್ತರಕ್ಕೆ ಅವರ ಪ್ರತಿ ಉತ್ತರವೇ ಇಲ್ಲ' ಎಂದು ತಿರುಗೇಟು ನೀಡಿದ್ದಾರೆ. ಕಾಂಗ್ರೆಸ್ನವರು ಹೆಚ್ಚು ಬೆಲೆಗೆ ವೆಂಟಿಲೇಟರ್ ಖರೀದಿ ಮಾಡಿದಾಗ ನೀವ್ಯಾಕೆ ಪ್ರಶ್ನಿಸಲಿಲ್ಲ ಎಂಬ ಆರೋಪಕ್ಕೆ ಪ್ರತಿಕ್ರಿಯಿಸಿದ ಅಶೋಕ್ 'ನಾವು ಯಾವಾಗ ಕೇಳಬೇಕು ಎಂದು ಗೊತ್ತಿದೆ. ಅವರು ಹೇಳಿದಾಗ ಕೇಳಬೇಕು ಅಂತೇನೂ ಇಲ್ಲ' ಎಂದಿದ್ದಾರೆ.

ಕಾಂಗ್ರೆಸ್ ಈಗಾಗಲೇ ಮೂಲೆಗುಂಪು ಆಗಿದೆ
'ಕಾಂಗ್ರೆಸ್ ಈಗಾಗಲೇ ಮೂಲೆಗುಂಪು ಆಗಿದೆ. ಈ ಸಂಧರ್ಭದಲ್ಲಿ ಹೇಗಾದರೂ ಬೆಳಕಿಗೆ ಬರೋಣ ಅಂತಾ ಪ್ರಯತ್ನಪಡುತ್ತಿದ್ದಾರೆ. ಇವರಿಗೆ ಕೊರೊನಾ ವಾರಿಯರ್ಸ್ ಬಗ್ಗೆ ಗೌರವ ಇಲ್ಲ. ಕೊರೊನಾ ವಿರುದ್ದ ಹೋರಾಟ ಮಾಡುತ್ತಿರುವ ಅಧಿಕಾರಿಗಳ ಸ್ಥೈರ್ಯ ಕುಂದಿಸುವ ಕೆಲಸ ಮಾಡ್ತಿದಾರೆ. ಒಬ್ಬ ಕೊರೊನಾ ರೋಗಿ ಮನೆಗೆ ಇವರು ಹೋಗಿಲ್ಲ. ಇವರು ಹೇಳಿದ್ದಕ್ಕೆಲ್ಲಾ ತನಿಖೆ ಮಾಡಿಸಲು ಆಗಲ್ಲ. ತನಿಖೆಗೆ ಆಗ್ರಹ ಮಾಡುವುದೇ ಇವರಿಗೊಂದು ಚಟ ಆಗಿದೆ. ಯಾವುದನ್ನು ತನಿಖೆ ಮಾಡಿಸಬೇಕು, ಯಾವುದು ಮಾಡಿಸಬಾರದು ಎಂಬುದು ನಮಗೂ ಗೊತ್ತಿದೆ' ಎಂದು ಹೇಳಿದ್ದಾರೆ.

ನಾವು ಪಂಚ ಪಾಂಡವರು
ಪಂಚ ಪಾಂಡವರು ಎಂಬ ವಿಚಾರದ ಮಾತನಾಡಿದ್ದ ಸಿದ್ದರಾಮಯ್ಯ 'ಅವರು ಕೌರವರಾಗಲು ಕೂಡಾ ಯೋಗ್ಯರಲ್ಲ ಎಂದು ಹೇಳಿದ್ದರು. ಈ ಬಗ್ಗೆ ಪ್ರತಿಕ್ರಿಯಿಸಿರುವ ಆರ್ ಅಶೋಕ್ 'ನಾವು ಪಂಚ ಪಾಂಡವರು ಐವರು ಬಂದಿದ್ದೇವೆ. ಅವರು ಸುದ್ದಿಗೋಷ್ಠಿಗೆ ಇಬ್ಬರೇ ಇಬ್ಬರು ಬಂದಿದ್ದಾರೆ. ಕೌರವರು ಅಷ್ಟು ಜನ ಇದ್ದರೂ ಯಾವಗಲೂ ಇಬ್ಬರೇ ಬರುತ್ತಾರೆ. ಅವರು ಇಬ್ಬರು ಯಾರು ಅಂತಾ ಎಲ್ಲರಿಗೂ ಗೊತ್ತಿದೆ' ಎಂದು ಟೀಕಿಸಿದ್ದಾರೆ.

ದಕ್ಷಿಣ ವಲಯದಲ್ಲಿ ಹೆಚ್ಚು ಕೇಸ್
'ದಕ್ಷಿಣ ವಲಯದ ದಲ್ಲಿ ಅತಿ ಹೆಚ್ಚು ಸಾವುಗಳು ಆಗುತ್ತಿರುವುದನ್ನು ಸಿಎಂ ಗಮನಕ್ಕೆ ತಂದಿದ್ದೇವೆ. ಕಲಾಸಿಪಾಳ್ಯ ಮತ್ತು ಕೆ ಆರ್ ಮಾರ್ಕೆಟ್ ಪ್ರದೇಶಗಳಲ್ಲೆ ಹೆಚ್ಚು ಸಾವುಗಳು ಸಂಭವಿಸಿವೆ. ಈ ಎರಡೂ ಮಾರ್ಕೆಟ್ ಏರಿಯಾಗಳನ್ನು ಯಾವುದೇ ಕಾರಣಕ್ಕೂ ತೆರೆಯಬಾರದು ಎಂದು ಮನವಿ ಮಾಡಿದ್ದೇವೆ. ಬೆಂ ದಕ್ಷಿಣ ವಲಯಕ್ಕೆ ಹೆಚ್ಚು ಬೆಡ್ ಗಳ ವ್ಯವಸ್ಥೆ ಆಗಬೇಕು. ಕೊರೊನಾ ಟೆಸ್ಟ್ ಗಳ ಸಂಖ್ಯೆ ಹೆಚ್ಚು ಮಾಡಬೇಕು ಹಾಗೂ ಹೋಂ ಕ್ವಾರಂಟೈನ್ ನಲ್ಲಿ ಇರುವ ರೋಗಿಗಳಿಗೆ ಯಾವುದೇ ಕೊರತೆ ಆಗದಂತೆ ನೋಡಿಕೊಳ್ಳಲು ಸೂಚನೆ ಎಂದೂ ಸಿಎಂ ಹೇಳಿದ್ದಾರೆ' ಎಂದು ಅಶೋಕ್ ಮಾಹಿತಿ ನೀಡಿದ್ದಾರೆ.
-
ಆರ್ಸಿಬಿ ಮತ್ತೆ ಚಾಂಪಿಯನ್ ಆಗೋದು ಫಿಕ್ಸ್, ಹ್ಯಾಜಲ್ವುಡ್ ಅಲಭ್ಯತೆ ತಂಡಕ್ಕೆ ವರದಾನ ಎಂದ ಆರ್.ಅಶ್ವಿನ್ -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
Vande Bharat Express: ಬೆಂಗಳೂರು-ಕಲಬುರಗಿ ಸೇರಿದಂತೆ 4 ರೈಲುಗಳ ವೇಳಾಪಟ್ಟಿ ಪರಿಷ್ಕರಣೆ -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
ಯುವತಿಯರ ಜೊತೆ ಸೆಕ್ಯೂರಿಟಿ ಗಾರ್ಡ್ ಭರ್ಜರಿ ಸ್ಟೆಪ್ಸ್: 'ಬೇಬಿ ಡಾಲ್' ಡ್ಯಾನ್ಸ್ ವಿಡಿಯೋ ಸಖತ್ Viral -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
India Rain Forecast: ಮುಂದಿನ 5 ದಿನ ಈ ಭಾಗಗಳಲ್ಲಿ ವ್ಯಾಪಕ ಮಳೆ, ಉಷ್ಣ ಅಲೆ ಎಚ್ಚರಿಕೆ -
ಶೃಂಗೇರಿ ಮಠದಿಂದ ಶಾಲಾ ಮಕ್ಕಳಿಗೆ ಸುವರ್ಣಾವಕಾಶ: 'ರಾಮಾಯಣ ಪರೀಕ್ಷೆ' ಬರೆದು 50 ಸಾವಿರ ರೂ. ನಗದು ಗೆಲ್ಲಿ -
Gold Price Today: ಇಂದು ಚಿನ್ನ-ಬೆಳ್ಳಿ ದರದಲ್ಲಿ ದಾಖಲೆಯ ಇಳಿಕೆ, 30000 ರೂ ಕುಸಿದ ಬಿಳಿ ಲೋಹ












Click it and Unblock the Notifications