ರಾಜ್ಯದಲ್ಲಿ ಮತ್ತೆ ಲಾಕ್​ಡೌನ್: ಸಚಿವ ಆರ್.ಅಶೋಕ್ ಏನಂದ್ರು?

ಬೆಂಗಳೂರು, ಏಪ್ರಿಲ್ 18: ಕರ್ನಾಟಕದಲ್ಲಿ ಮತ್ತೆ ಲಾಕ್​ಡೌನ್ ಜಾರಿ ತರುವ ಅವಶ್ಯಕತೆ ಇಲ್ಲ. ಆದರೆ ಬೆಂಗಳೂರಿನಲ್ಲಿ ಸೋಮವಾರದಿಂದ ಕಠಿಣ ನಿಯಮಗಳು ಜಾರಿಯಾಗುವುದು ಖಚಿತ. ಅದನ್ನು ಕಡ್ಡಾಯವಾಗಿ ಪಾಲನೆ ಮಾಡಲೇಬೇಕು ಎಂದು ಕಂದಾಯ ಸಚಿವ ಆರ್.ಅಶೋಕ್ ಹೇಳಿದ್ದಾರೆ.

ಬೆಂಗಳೂರಿನ ಕುಮಾರಕೃಪಾ ಅತಿಥಿ ಗೃಹದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈಗಾಗಲೇ ಮೊದಲ ಲಾಕ್​ಡೌನ್​ನಿಂದ ಈಗಾಗಲೇ ತುಂಬಾ ಸಮಸ್ಯೆ ಆಗಿದೆ. ಹಾಗಾಗಿ ಲಾಕ್​ಡೌನ್ ಹೊರತುಪಡಿಸಿ ಬಿಗಿ ಕ್ರಮ ಜಾರಿಗೊಳಿಸಲಾಗುತ್ತದೆ ಎಂದು ತಿಳಿಸಿದರು.

ಸೋಮವಾರ ಬೆಂಗಳೂರಿಗೆ ಪ್ರತ್ಯೇಕ ಕಠಿಣ ನಿಯಮಗಳನ್ನು ಜಾರಿ ಮಾಡುತ್ತೇವೆ. ಕೋವಿಡ್ ತಜ್ಞರು ಟಫ್ ರೂಲ್ಸ್ ಜಾರಿ ಮಾಡಿ ಎಂದಿದ್ದಾರೆ. ಆದರೆ ಜನಸಾಮಾನ್ಯರ ಬದುಕು ನೋಡಬೇಕು. ಈ ಬಗ್ಗೆ ಸೋಮವಾರದ ಮತ್ತೊಂದು ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗುತ್ತದೆ ಎಂದು ಹೇಳಿದರು.

 Minister R.Ashok Reaction About Lockdown Enforcement In Karnataka

Recommended Video

      ಹೆಚ್ಚುತ್ತಿರುವ ಕೋವಿಡ್‌ ಮೃತರ ಸಂಖ್ಯೆ, ನಗರದ ಬಹುತೇಕ ಚಿತಾಗಾರಗಳು ಫುಲ್‌! |Oneindia Kannada

      ಲಾಕ್​ಡೌನ್ ಬೇಡ ಎಂದು ಸಿಎಂ ಯಡಿಯೂರಪ್ಪ ಸ್ಪಷ್ಟವಾಗಿ ಹೇಳಿದ್ದಾರೆ. ನಾಳೆ ಏನೇ ತೀರ್ಮಾನ ಆದರೂ ಸಿಎಂ ಗಮನಕ್ಕೆ ತರುತ್ತೇನೆ. ಜನರು ಆದಷ್ಟು ಮದುವೆ, ಬೀಗರಕೂಟ, ಬಾಡೂಟಗಳಿಂದ ದೂರ ಇರಬೇಕು ಮನವಿ ಮಾಡಿದರು.

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+