ಕೊರೊನಾ ವಾರಿಯರ್ಸ್‌ಗೆ ಧೈರ್ಯ ತುಂಬಿದ ಸುರೇಶ್ ಕುಮಾರ್

ಬೆಂಗಳೂರು, ಜುಲೈ 8: ಕೊರೊನಾ ವೈರಸ್‌ ವಿರುದ್ಧ ಹೋರಾಟ ಮಾಡುತ್ತಿರುವ ಕೊರೊನಾ ವಾರಿಯರ್ಸ್‌ಗೆ ಧೈರ್ಯ ತುಂಬುವ ಕೆಲಸವನ್ನು ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್ ಮಾಡಲು ಹೊರಟಿದ್ದಾರೆ.

Recommended Video

      UN ಸಭೆಯಲ್ಲಿ Pakistan ವಿರುದ್ಧ ಭಾರತ ವಾಗ್ದಾಳಿ | Oneindia Kannada

      'ನಿಮ್ಮ ಜೊತೆಯಲ್ಲಿ ನಾವುಗಳಿದ್ದೇವೆ' ಎಂದು ಕೊರೊನಾ ವಾರಿಯರ್ಸ್‌ಗೆ ಆತ್ಮಸ್ಥೈರ್ಯ ತುಂಬುವ ಕೆಲಸ ಮಾಡಬೇಕು ಎಂದು ಸುರೇಶ್ ಕುಮಾರ್ ಜನರಿಗೆ ಮನವಿ ಮಾಡಿದ್ದಾರೆ.

      ಕೊರೊನಾ ವಿರುದ್ಧ ಕಳೆದ ಮೂರು ತಿಂಗಳಿನಿಂದ ಕೊರೊನಾ ವಾರಿಯರ್ಸ್‌ ನಿರಂತರ ಹೋರಾಟ ಮಾಡುತ್ತಿದ್ದಾರೆ. ಪೊಲೀಸ್‌ ಸಿಬ್ಬಂದಿ, ಡಾಕ್ಟರ್ಸ್‌, ನರ್ಸ್‌, ಆಶಾ ಕಾರ್ಯಕರ್ತೆಯರು, ಬಿಬಿಎಂಪಿ ಸಿಬ್ಬಂದಿ ವರ್ಗ ಕೆಲಸಗಳಿಂದ ಬಳಲಿದ್ದು, ತಮ್ಮ ಚೈತನ್ಯ ಕಳೆದುಕೊಂಡಿದ್ದಾರೆ ಎಂದಿದ್ದಾರೆ.

      Suresh Kumar Has Appealed People To Support Corona Warriors

      ಇಂತಹ ಪರಿಸ್ಥಿತಿಯಲ್ಲಿ ಜನಪ್ರತಿನಿಧಿಗಳು ಕೊರೊನಾ ವಾರಿಯರ್ಸ್‌ಗೆ ಧೈರ್ಯ ತುಂಬಬೇಕು. ಇದಕ್ಕೆ ಜನರು ಸಹಕಾರ ನೀಡಬೇಕು. ಜನರು ಚುನಾವಣೆಯಲ್ಲಿ ಮತ ಹಾಕಿ ಜನಪ್ರತಿನಿಧಿಗಳನ್ನು ಆಯ್ಕೆ ಮಾಡಿದ್ದಾರೆ ಅವರ ಋಣ ನಮ್ಮ ಮೇಲೆ ಇದೆ. ಆ ಋಣ ತೀರಿಸಲು ಒಂದು ಸಣ್ಣ ಅವಕಾಶ ಸಿಕ್ಕಿದೆ ಎಂದು ಸುರೇಶ್ ಕುಮಾರ್ ತಿಳಿಸಿದ್ದಾರೆ.

      ಕೊರೊನಾ ವಾರಿಯರ್ಸ್‌ಗೆ ನಾವೆಲ್ಲಾ "ನಿಮ್ಮೊಡನಿದ್ದೇವೆ" ಎಂಬ ಸ್ಥೈರ್ಯ ತುಂಬಬೇಕಿದ್ದು, ಈ ಕುರಿತು ನಮ್ಮ ರಾಜಾಜಿನಗರ ಕ್ಷೇತ್ರದ ಎಲ್ಲಾ ಬಿಬಿಎಂಪಿ ಸದಸ್ಯರಿಗೆ ಮನವಿ ಪತ್ರ ಬರೆದಿದ್ದೇನೆ ಎಂದು ಸುರೇಶ್ ಕುಮಾರ್ ಮಾಹಿತಿ ನೀಡಿದ್ದಾರೆ.

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+