ಮಗು ಅಪಹರಣ ಪ್ರಕರಣ : ಆಸ್ಪತ್ರೆಗೆ ಸಚಿವರ ಭೇಟಿ
ಬೆಂಗಳೂರು, ಅಕ್ಟೋಬರ್ 07 : ಹಸುಗೂಸನ್ನು ಅಪರಿಚಿತ ಮಹಿಳೆ ಅಪಹರಿಸಿದ ಪ್ರಕರಣ ಬೌರಿಂಗ್ ಆಸ್ಪತ್ರೆಯಲ್ಲಿ ಅಕ್ಟೋಬರ್ 4ರಂದು ನಡೆದಿತ್ತು. ಮಂಗಳವಾರ ಸಚಿವರಿಬ್ಬರು ಆಸ್ಪತ್ರೆಗೆ ಭೇಟಿ ನೀಡಿ ಆಸ್ಪತ್ರೆಯಲ್ಲಿ ಅಗತ್ಯ ಸುರಕ್ಷತಾ ಕ್ರಮಗಳನ್ನು ತೆಗೆದುಕೊಳ್ಳುವಂತೆ ಪೊಲೀಸರಿಗೆ ಸೂಚನೆ ನೀಡಿದರು.
ಮಂಗಳವಾರ ಶಿವಾಜಿನಗರ ಶಾಸಕ ಮತ್ತು ಸಚಿವ ಆರ್. ರೋಷನ್ ಬೇಗ್ ಹಾಗೂ ವೈದ್ಯಕೀಯ ಶಿಕ್ಷಣ ಸಚಿವ ಶರಣ ಪ್ರಕಾಶ್ ಪಾಟೀಲ್ ಅವರು ಬೌರಿಂಗ್ ಮತ್ತು ಲೇಡಿ ಕರ್ಜನ್ ಆಸ್ಪತ್ರೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. [ಬುರ್ಖಾ ಧರಿಸಿ ಬಂದವಳು ಗಂಡು ಮಗು ಹೊತ್ತೊಯ್ದಳು]

ಮಗುವಿನ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಆಸ್ಪತ್ರೆಯ ಅಧೀಕ್ಷಕ ಡಾ.ಎಸ್.ಐ.ಎಸ್.ಖಾದ್ರಿ ಅವರಿಂದ ವಿವರಣೆ ಪಡೆದರು. ಮಗು ಕಳೆದುಕೊಂಡ ಮಹಿಳೆ ಹಾಗೂ ಆಕೆಯ ಕುಟುಂಬ ಸದಸ್ಯರಿಗೆ ಸಾಂತ್ವನ ಹೇಳಿದರು. [ಕಿಮ್ಸ್ ಸಿಬ್ಬಂದಿ ಧರಣಿಗೆ ಮಣಿಯದ ಅಪ್ಪಾಜಿ ಗೌಡ]
ಪೊಲೀಸ್ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿದ ಸಚಿವರು ಅಪಹರಣಕ್ಕೆ ಒಳಗಾದ ಮಗುವನ್ನು ಶೀಘ್ರವೇ ಪತ್ತೆ ಹಚ್ಚಿ ತಾಯಿಗೆ ಒಪ್ಪಿಸಲು ಎಲ್ಲಾ ಪ್ರಯತ್ನಗಳನ್ನೂ ಮಾಡುವಂತೆ ಸೂಚನೆ ನೀಡಿದರು. ಆಸ್ಪತ್ರೆಯಲ್ಲಿ ಅಗತ್ಯ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳುವಂತೆ ನಿರ್ದೇಶನ ನೀಡಿದರು. [ಹೂವಿನ ತೋಟದಲ್ಲಿ ಕಳೆದುಹೋದ ಹೂವಿನಂಥ ಹುಡುಗಿ]
ಬೌರಿಂಗ್ ಆಸ್ಪತ್ರೆಯಲ್ಲಿ ಏನಾಗಿತ್ತು? : ಕಾಡುಗೋಡಿಯ ನಿವಾಸಿ ಹಬೀಬ್ ಅವರು ಪತ್ನಿ ಫರೀದಾ ಅವರನ್ನು ಹೆರಿಗೆಗಾಗಿ ಬೌರಿಂಗ್ ಆಸ್ಪತ್ರೆಗೆ ದಾಖಲಿಸಿದ್ದರು. ಅ.1ರಂದು ಗಂಡು ಮಗು ಜನಿಸಿತ್ತು, ಮಗುವಿನ ಆರೋಗ್ಯ ಸರಿ ಇಲ್ಲದ ಕಾರಣ ಎನ್ಐಸಿಯು ನಲ್ಲಿ ಇರಿಸಲಾಗಿತ್ತು.
ಅಕ್ಟೋಬರ್ 4ರ ಭಾನುವಾರ ಎನ್ಐಸಿಯುನ ನರ್ಸ್ ಹಾಲು ಕುಡಿಸಲು ವಾರ್ಡ್ನಲ್ಲಿ ಮಲಗಿದ್ದ ತಾಯಿ ಫರೀದಾಗೆ ಮಗುವನ್ನು ನೀಡಿದ್ದರು. ಆಗ ಅಲ್ಲಿಗೆ ಬಂದ ಬುರ್ಖಾಧಾರಿ ಮಹಿಳೆ, ಫರಿದಾಳನ್ನು ಮಾತನಾಡಿಸಿದ್ದಳು. ನನಗೆ ಗಂಡು ಮಗುವಿಲ್ಲ ಎತ್ತಿಕೊಳ್ಳಲೇ ಎಂದು ಕೇಳಿದ್ದಳು. ಇದಕ್ಕೆ ಫರಿದಾ ಒಪ್ಪಿಗೆ ನೀಡಿ, ಮಗುವನ್ನು ನೀಡಿದ್ದರು.

ಮಗುವನ್ನು ಎತ್ತಿಕೊಂಡು ಮುದ್ದಿಸುವ ನಾಟಕವಾಡಿದ್ದ ಮಹಿಳೆ, ನಂತರ ಮಗುವನ್ನು ಎತ್ತಿಕೊಂಡು ಪರಾರಿಯಾಗಿದ್ದಳು. ಬುರ್ಖಾಧಾರಿ ಮಹಿಳೆ ಮಗುವನ್ನು ಎತ್ತಿಕೊಂಡು ಪರಾರಿಯಾಗುವ ದೃಶ್ಯ ಸಿಸಿಟಿಯಲ್ಲಿ ಸೆರೆಯಾಗಿದೆ. ಮಗುವಿಗಾಗಿ ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ.
-
PUC ವಿದ್ಯಾರ್ಥಿಗಳಿಗೆ ಗುಡ್ನ್ಯೂಸ್: ಇದೇ ವರ್ಷದಿಂದಲೇ ಸಿಗಲಿವೆ ಉಚಿತ ಪಠ್ಯ ಪುಸ್ತಕ -
PUC Revaluation: ಸ್ಕ್ಯಾನ್ ಪ್ರತಿ ಪಡೆದವರ ಉತ್ತರ ಪತ್ರಿಕೆ ಮರುಮೌಲ್ಯಮಾಪನ; ಶುಲ್ಕ, ಪ್ರಮುಖ ದಿನಾಂಕಗಳು -
Dhurandhar 2 Pakistan: ಅರಬ್ ರಾಷ್ಟ್ರದ ಸಾಲ ತೀರಿಸಲು ದುರಂಧರ್ 2 ಬಿಡುಗಡೆಗೆ ಮುಂದಾಯ್ತಾ ಪಾಕಿಸ್ತಾನ, ಟ್ವಿಸ್ಟ್ -
Lata Mangeshkar & Asha Bhosle: ಆ ಒಂದು ಕಾರಣಕ್ಕೆ ತಂಗಿ ಆಶಾ ಬೋಸ್ಲೆ ಜೊತೆ ಮಾತು ಬಿಟ್ಟಿದ್ದ ಲತಾ ಮಂಗೇಶ್ಕರ್ -
Gas Booking New Rules: ಎಲ್ಪಿಜಿ ಗ್ಯಾಸ್ ಬುಕ್ಕಿಂಗ್ನಲ್ಲಿ ಹೊಸ ನಿಯಮ, ಎಷ್ಟು ದಿನಕ್ಕೆ ಸಿಗುತ್ತೆ ಗ್ಯಾಸ್ ಸಿಲಿಂಡರ್ -
Ram Gopal Varma: ದಾವೂದ್ ಇಬ್ರಾಹಿಂ ಇಲ್ಲದಿದ್ದರೆ ನಾನು ಬದುಕು ಕಟ್ಟಿಕೊಳ್ಳುತ್ತಿರಲಿಲ್ಲ: ನಿರ್ದೇಶಕ ರಾಮ್ ಗೋಪಾಲ್ ವರ್ಮಾ -
Asha Bhosle Kannada Songs: ಆಶಾ ಭೋಸ್ಲೆ ಹಾಡಿದ ಕನ್ನಡದ ಹಾಡುಗಳು: ಕರ್ನಾಟಕದ ಜನರ ಮನ ಗೆದ್ದ ಖ್ಯಾತ ಗಾಯಕಿ -
Banana Price: ತಮಿಳುನಾಡು ಬಿಸಿಗಾಳಿ ಎಫೆಕ್ಟ್ಗೆ ಕುಸಿದ ಬಾಳೆಹಣ್ಣು ಧಾರಣೆ: ಬೆಂಗಳೂರಿನಲ್ಲಿ ಕೆ.ಜಿಗೆ 7 ರೂಪಾಯಿ -
Summer Specail Train: ಮೈಸೂರಿನಿಂದ ಇಲ್ಲಿಗೆ ವಿಶೇಷ ಎಕ್ಸ್ಪ್ರೆಸ್ ರೈಲು, 3 ರಾಜ್ಯಗಳಿಗೆ ಅನುಕೂಲ -
April 12 Horoscope: 12 ರಾಶಿಗಳಿಗೆ ಇಂದು ಹಣ-ಪ್ರೇಮದಲ್ಲಿ ಅದೃಷ್ಟ ಯಾರಿಗೆ? ಸಂಪೂರ್ಣ ವಿವರ -
IPL 2026: ಗಿಲ್ ಮತ್ತು ಬಟ್ಲರ್ ಸ್ಫೋಟಕ ಬ್ಯಾಟಿಂಗ್, ಎಲ್ಎಸ್ಜಿ ಮಣಿಸಿದ ಗುಜರಾತ್ ಟೈಟಾನ್ಸ್ -
Asha Bhosle: ಭಾರತೀಯ ಸಿನಿಮಾ ರಂಗದ ಖ್ಯಾತ ಗಾಯಕಿ ಆಶಾ ಭೋಸ್ಲೆ ಇನ್ನಿಲ್ಲ, ಸಂಗೀತ ರಾಣಿ ಎಂದೇ ಖ್ಯಾತಿ












Click it and Unblock the Notifications