ಮನೆಯಿಂದ ತಪ್ಪಿಸಿಕೊಂಡಿದ್ದ ಯುವತಿಯನ್ನು ವೇಶ್ಯಾವಾಟಿಕೆಗೆ ಮಾರಲು ಯತ್ನ: ಆರೋಪಿ ಅರೆಸ್ಟ್
ಬೆಂಗಳೂರು, ಫೆ. 11: ಮನೆಯಿಂದ ತಪ್ಪಿಸಿಕೊಂಡು ಬಂದಿದ್ದ ಯುವತಿಯನ್ನು ವೇಶ್ಯಾವಾಟಿಕೆ ಜಾಲಕ್ಕೆ ತಳ್ಳಲು ಕರೆದೊಯ್ಯುತ್ತಿದ್ದ ಯುವತಿಯನ್ನು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಠಾಣೆ ಪೊಲೀಸರು ರಕ್ಷಿಸಿದ್ದಾರೆ. ಯುವತಿಯನ್ನು ಮಾರಲು ಯತ್ನಿಸಿದ ಟ್ರಾವೆಲ್ ಏಜೆನ್ಸಿ ಏಜೆಂಟ್ ನನ್ನು ಬಂಧಿಸಿದ್ದಾರೆ.
ಕೋಲಾರ ಮೂಲದ ಯುವತಿ ಮನೆಯಲ್ಲಿ ಜಗಳ ಮಾಡಿಕೊಂಡು ಮನೆ ಬಿಟ್ಟು ಬೆಂಗಳೂರಿಗೆ ಬಂದಿದ್ದಾಳೆ. ಮೆಜೆಸ್ಟಿಕ್ ಬಳಿ ಇಳಿದು ಎಲ್ಲಿ ಹೋಗಲು ದಿಕ್ಕು ತೋಚದೇ ಅಳುತ್ತಿದ್ದಳು. ಈಕೆಯನ್ನು ಗಮನಿಸಿದ್ದ ಟ್ರಾವೆಲ್ ಏಜೆಂಟ್ ನಾಗೇಶ್ ಆಕೆಯನ್ನು ವಿಚಾರಿಸಿದ್ದಾನೆ. ಮನೆ ಬಿಟ್ಟು ಬಂದಿರುವ ಸಂಗತಿಯನ್ನು ಯುವತಿ ಹೇಳಿದ್ದಾರೆ.
ಒಳ್ಳೆಯ ಕೆಲಸ ಕೊಡಿಸುವುದಾಗಿ ನಂಬಿಸಿ ಯುವತಿಯನ್ನು ದೇವನಹಳ್ಳಿಗೆ ಕರೆದೊಯ್ದು ಮನೆಯಲ್ಲಿ ಇಟ್ಟುಕೊಂಡು ಅತ್ಯಾಚಾರ ಎಸಗಿದ್ದಾನೆ. ಆ ಬಳಿಕ ವೇಶ್ಯಾವಾಟಿಕೆ ಜಾಲವನ್ನು ಸಂಪರ್ಕಿಸಿದ್ದ ನಾಗೇಶ್ ಆಕೆಯನ್ನು ಮಾರಾಟ ಮಾಡಲೆಂದು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಕರೆದೊಯ್ದಿದ್ದಾನೆ. ಈ ವೇಳೆ ಏರ್ ಪೋರ್ಟ್ ಭದ್ರತಾ ಸಿಬ್ಬಂದಿ ಅನುಮಾನಗೊಂಡು ಯುವತಿಯನ್ನು ಮತ್ತು ನಾಗೇಶನನ್ನು ವಿಚಾರಣೆ ನಡೆಸಿದ್ದಾರೆ. ಈ ವೇಳೆ ಅಸಲಿ ಸಂಗತಿ ಬೆಳಕಿಗೆ ಬಂದಿದ್ದು ಅಂತಾರಾಷ್ಟ್ರೀಯ ವಿಮಾನ ನಲ್ದಾಣ ಪೊಲೀಸರಿಗೆ ಒಪ್ಪಿಸಿದ್ದಾರೆ.

ಮೆಜೆಸ್ಟಿಕ್ ಕಿರಾತಕರು:
ಮೆಜೆಸ್ಟಿಕ್ ಅಪರಾಧಗಳ ಮಾಯಾಲೋಕ. ಮನೆ ಬಿಟ್ಟು ಬರುವ ಹುಡುಗರಿಗೆ ಹಾಗೂ ಹುಡುಗಿಯರನ್ನು ಪತ್ತೆ ಮಾಡಿ ಮಾರಾಟ ಮಾಡುವ ಜಾಲ ಈಗಲೂ ಪೊಲೀಸರ ಕಣ್ಣಿಗೆ ಕಾಣದಂತೆ ಕಾರ್ಯ ನಿರ್ವಹಿಸುತ್ತಿದೆ. ಯಾರಾದರೂ ಮನೆ ಬಿಟ್ಟು ಬಡುವ ಅಪ್ರಾಪ್ತರನ್ನು ಪತ್ತೆ ಮಾಡಿ ಅವರಿಗೆ ಸಾಂತ್ವನ ಹೇಳಿ ಕೆಲಸ ಕೊಡಿಸುವ ಸೋಗಿನಲ್ಲಿ ಹೋಟೆಲ್ಗಳಿಗೆ ಬಿಡುತ್ತಾರೆ. ಮೂರು ತಿಂಗಳ ವೇತನ ಪಡೆದು ಎಸ್ಕೇಪ್ ಆಗುತ್ತಾರೆ. ಹೀಗಾಗಿ ಪ್ರತಿ ನಿತ್ಯ ಮೆಜೆಸ್ಟಿಕ್ ರೈಲ್ವೇ ನಿಲ್ದಾಣ, ಬಸ್ ನಿಲ್ದಾಣದಲ್ಲಿ ಹದ್ದಿನ ಕಣ್ಣಿಟ್ಟು ಹುಡುಕುವ ಏಜೆಂಟರು ಈಗಲೂ ತಳವೂರಿದ್ದಾರೆ.
ಅದೇ ರೀತಿ ಮನೆ ಬಿಟ್ಟು ಬರುವ ಹೆಣ್ಣು ಮಕ್ಕಳಿಗೆ ಕೆಲಸ ಕೊಡಿಸುವ ಸೋಗಿನಲ್ಲಿ ನಂಬಿಸಿ ಕರೆದುಕೊಂಡು ವೇಶ್ಯಾವಾಟಿಕೆ ಜಾಲಕ್ಕೆ ಮಾರಾಟ ಮಾಡುತ್ತಾರೆ. ಇದಕ್ಕೂ ಪ್ರತ್ಯೇಕ ಏಜೆಂಟರು ನಿರಂತರ ಕಾರ್ಯ ನಿರ್ವಹಿಸುತ್ತಿದ್ದಾರೆ. ಈ ಜಾಲ ಹಲವು ವರ್ಷಗಳಿಂದ ಬೇರೂರಿದೆ. ಅನೇಕ ನಾಪತ್ತೆ ಪ್ರಕರಣಗಳು ಮೆಜೆಸ್ಟಿಕ್ ನಲ್ಲಿಯೇ ಅಂತ್ಯವಾಗಿರುವ ಸಾಕಷ್ಟು ಉದಾಹರಣೆಗಳು ಕಣ್ಣೆದುರು ಇವೆ.
-
Jacob Bethell: ವಾಂಖೆಡೆಯಲ್ಲಿ ಕಿವಿಗೆ ಬಿದ್ದಿದ್ದು ಮಾತ್ರ ಆರ್ಸಿಬಿ.. ಆರ್ಸಿಬಿ ಘೋಷಣೆ: ಜೇಕಬ್ ಬೆಥೆಲ್ ವಿಡಿಯೋ ವೈರಲ್ -
IPL 2026: ಆರ್ಸಿಬಿ-ಎಸ್ಆರ್ಎಚ್ ಉದ್ಘಾಟನಾ ಪಂದ್ಯಕ್ಕೆ ಮಳೆ ಅಡ್ಡಿಯಾಗಲಿದ್ಯಾ? ಹವಾಮಾನ ಇಲಾಖೆ ಹೇಳೋದೇನು? -
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್ -
Gold Rate: ಇಂದು ನಿಮ್ಮ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ ಎಷ್ಟಿದೆ? ಇಲ್ಲಿದೆ ಸಂಪೂರ್ಣ ಮಾಹಿತಿ -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ -
KEA: ರಾಜ್ಯದ ವಸತಿ ಶಾಲೆಗಳ ಪ್ರವೇಶ ಪರೀಕ್ಷೆ, ಅಂತಿಮ ಅಂಕಪಟ್ಟಿ ಪ್ರಕಟ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
ಬೆಂಗಳೂರಿನ ಪಾನಿಪುರಿ ವ್ಯಾಪಾರಿಯ ತಿಂಗಳ ಸಂಪಾದನೆ ಫುಲ್ Viral: ದಿನಕ್ಕೆ 3 ಸಾವಿರ ರೂ. ಗಳಿಕೆ -
Viral Video: 11 ವರ್ಷದ ಬಾಲಕನಿಂದ ಯಶಸ್ವಿ ವಿಮಾನ ಲ್ಯಾಂಡಿಂಗ್; ನೆಟ್ಟಿಗರ ಮನಗೆದ್ದ ಈ ಪುಟ್ಟ ಪೋರ












Click it and Unblock the Notifications