ಬಿಜೆಪಿ ಕಚೇರಿಯಲ್ಲಿ ಅಂಬೇಡ್ಕರ್ ಭಾವಚಿತ್ರಕ್ಕೆ ಅವಮಾನ
ಬೆಂಗಳೂರು, ನವೆಂಬರ್ 27 : ನಗರದಲ್ಲಿರುವ ರಾಜ್ಯ ಬಿಜೆಪಿ ಕಚೇರಿಯಲ್ಲಿ ಅಂಬೇಡ್ಕರ್ ಭಾವಚಿತ್ರಕ್ಕೆ ಅವಮಾನ ಮಾಡಲಾಗಿದೆ ಎಂದು ಆರೋಪಿಸಿ ಸಾವಿರಾರು ಹೋರಾಟಗಾರರು ಬಿಜೆಪಿ ಕಚೇರಿ ಮುಂದೆ ಪ್ರತಿಭಟನೆ ನಡೆಸುತ್ತಿದ್ದಾರೆ.
ಇಂದು (ನವೆಂಬರ್ 27)ರಂದು ಬಿಜೆಪಿ ಕಚೇರಿಯಲ್ಲಿ ಅಂಬೇಡ್ಕರ್ ಭಾವಚಿತ್ರವನ್ನು ಪಾತ್ರೆ ತೊಳೆಯುವ ಸಿಂಕ್ ಬಳಿ, ಹಳೆ ಫೈಲ್ ಗಳ ಜೊತೆ ನೆಲದಲ್ಲಿ ಇಟ್ಟಿರುವ ವಿಡಿಯೊ ಒಂದು ಸಾಮಾಜಿಕ ಜಾಲತಾಣ ಅಪ್ಲೋಡ್ ಆಗಿತ್ತು. ವಿಡಿಯೋ ವೈರಲ್ ಆಗುತ್ತಿದ್ದಂತೆಯೇ ದಲಿತ ಹೋರಾಟಗಾರರು ಬಿಜೆಪಿ ಕಚೇರಿ ಮುಂದೆ ಜಮಾಯಿಸಿ, ಪ್ರತಿಭಟನೆ ಪ್ರಾರಂಭಿಸಿ ಬಿಜೆಪಿ ನಾಯಕರ ಕ್ಷಮಾಪಣೆಗೆ ಆಗ್ರಹಿಸಿದರು.

ಇಂದು (ನವೆಂಬರ್ 27) ವಿಜಯಪುರದಲ್ಲಿ ಭಾಷಣ ಮಾಡುತ್ತಾ ಬಿ.ಎಸ್.ಯಡಿಯೂರಪ್ಪ ಅವರು 'ಸಂವಿಧಾನ ದಿನದ ಜಾಹಿರಾತಿನ ವಿಷಯ ಇಟ್ಟುಕೊಂಡು ಸಿದ್ದರಾಮಯ್ಯ ಅವರು ಅಂಬೇಡ್ಕರ್ ಅವರಿಗೆ ಅವಮಾನ ಮಾಡಿದ್ದಾರೆ' ಎಂದು ಮಾತನಾಡಿದ್ದರು, ಶೋಭಾ ಕರಂದ್ಲಾಜೆ ಅವರು ಕೂಡ ಹೀಗೆಯೇ ಹೇಳಿದ್ದರು. ಆದರೆ ಅವರ ಕಚೇರಿಯಲ್ಲೇ ಅಂಬೇಡ್ಕರ್ ಅವರಿಗೆ ಅವಮಾನ ಮಾಡಿರುವ ವಿಡಿಯೊ ಲೀಕ್ ಆಗಿರುವುದು ಬಿಜೆಪಿಗೆ ಭಾರಿ ಮುಖಭಂಗ ಆದಂತಾಗಿದೆ.
ಇದೀಗ ದಲಿತ ಹೋರಾಟಗಾರರು ಬಿಜೆಪಿ ಕಚೇರಿಗೆ ಬೀಗ ಹಾಕಿಸಿ ಪ್ರತಿಭಟನೆ ನಡೆಸುತ್ತಿದ್ದಾರೆ. ಘಟನೆ ಕುರಿತು ಬಿ.ಎಸ್.ಯಡಿಯೂರಪ್ಪ ಅವರು ಕ್ಷಮೆ ಕೇಳಬೇಕು ಎಂದು ಅವರು ಒತ್ತಾಯಿಸಿದ್ದಾರೆ.

ಬಿಜೆಪಿ ಸಂವಿಧಾನ ವಿರೋಧಿ, ಅಂಬೇಡ್ಕರ್ ವಿರೋಧಿ ಎಂಬ ಭಾವನೆ ದಲಿತ ಹೋರಾಟಗಾರರಲ್ಲಿದೆ. ಮೊನ್ನೆ ತಾನೆ ಬಿಜೆಪಿ ಮುಖಂಡ ಗೋ.ಮಧುಸೂದನ್ ಅವರು ಸಂವಿಧಾನವನ್ನು ಒಪ್ಪುವುದಿಲ್ಲ ಎಂದು ಮಾಧ್ಯಮದಲ್ಲಿ ಹೇಳಿದ್ದು ವಿವಾದವಾಗಿತ್ತು. ಮಧುಸೂದನ್ ಅವರಿಗೆ ಮಸಿ ಬಳಿಯಲು ಹೋದ ಹೋರಾಟಗಾರರಿಗೆ ಪೊಲೀಸರ ಸಹಾಯದಿಂದ ಚಳ್ಳೆಹಣ್ಣು ತಿನ್ನಿಸಿ ಅವರು ಪರಾರಿಯಾಗಿದ್ದರು.
ಈ ಮುಂಚೆಯೂ ಒಮ್ಮೆ ಬಿಜೆಪಿ ಕಚೇರಿಯಲ್ಲಿ ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಅವಮಾನ ಮಾಡಲಾಗಿದೆ ಎಂದು ದಲಿತ ಹೋರಾಟಗಾರರು ಪ್ರೆತಿಭಟನೆ ನಡೆಸಿದ್ದರು.
-
ಉನ್ನತ ಶಿಕ್ಷಣಕ್ಕೆ ಭಾರತದ ಯಾವ ನಗರ ಬೆಸ್ಟ್? QS ರ್ಯಾಂಕಿಂಗ್ ಪಟ್ಟಿಯಲ್ಲಿದೆ ಬೆಂಗಳೂರು ಸೇರಿದಂತೆ 4 ನಗರಗಳ ಹೆಸರು -
ಯುದ್ಧದ ಬಿಸಿ: ಬೆಂಗಳೂರಿಗೆ ಅರಬ್ ರಾಷ್ಟ್ರಗಳ ವಿಮಾನ ಸಂಚಾರ ಕಡಿತ; ರಾಜ್ಯ ಟ್ರಾವೆಲ್ಸ್ ಮಾಲೀಕರಲ್ಲಿ ಆತಂಕ -
Gold Price: ಯುಗಾದಿಗೆ ಚಿನ್ನಪ್ರಿಯರಿಗೆ ಶುಭ ಸುದ್ದಿ: ಚಿನ್ನದ ಬೆಲೆಯಲ್ಲಿ ಭರ್ಜರಿ ಇಳಿಕೆ, ಬೆಳ್ಳಿ ದರ 15,000 ರೂ.ಕುಸಿತ -
ಕರ್ನಾಟಕ ಉಪಚುನಾವಣೆ: ದಾವಣಗೆರೆ ದಕ್ಷಿಣ, ಬಾಗಲಕೋಟೆ ಕ್ಷೇತ್ರಗಳಿಗೆ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದ ಬಿಜೆಪಿ -
Gold Price Today: ಯುಗಾದಿಗೂ ಮೊದಲೇ ಚಿನ್ನದ ದರದಲ್ಲಿ ಭಾರೀ ಇಳಿಕೆ; ಆಭರಣ ಪ್ರಿಯರಿಗೆ ಇಂದೇ ಹಬ್ಬ -
Karnataka: ಧಾರ್ಮಿಕ ಮೆರವಣಿಗೆ, ಜಯಂತಿಗಳಲ್ಲಿ DJ ಸದ್ದಿಗೆ ಬ್ರೇಕ್? 'ಐಟಂ ಸಾಂಗ್' ಬ್ಯಾನ್ ಮಾಡಲು ರಾಜ್ಯ ಸರ್ಕಾರ ಒಲವು -
Karnataka Weather: ಧಾರವಾಡದಲ್ಲಿ 101 ಮಿಮೀ ಮಳೆ ದಾಖಲು, ಒಳನಾಡಿಗೆ ಅಲಿಕಲ್ಲು ಸಹಿತ ಮಳೆ ಮುನ್ಸೂಚನೆ -
RCB: ಆರ್ಸಿಬಿಯಲ್ಲಿ ಜೋಶ್ ಹ್ಯಾಜಲ್ವುಡ್ ಸ್ಥಾನ ತುಂಬುವ ಆಟಗಾರ ಇವರೇ ನೋಡಿ -
ಶೆಲ್ ಬಂಕ್ನಲ್ಲಿ ಪೆಟ್ರೋಲ್ ದರ ಏರಿಕೆ: ಬೆಂಗಳೂರಿನಲ್ಲಿ 10 ದಿನಗಳಲ್ಲಿ 4.50 ರೂಪಾಯಿ ಹೆಚ್ಚಳ; ಇಲ್ಲಿದೆ ದರಪಟ್ಟಿ -
SSLC ಪರೀಕ್ಷೆ-1 ಆರಂಭ: ಮಲ್ಲೇಶ್ವರಂನ ಕೆಪಿಎಸ್ ಶಾಲೆಗೆ ಸಚಿವ ಮಧು ಬಂಗಾರಪ್ಪ ಭೇಟಿ, ವಿದ್ಯಾರ್ಥಿಗಳಿಗೆ ಶುಭಹಾರೈಕೆ -
Rain Alert: ಕರ್ನಾಟಕದ ಈ 9 ಜಿಲ್ಲೆಗಳಿಗೆ ಮುಂದಿನ 2 ದಿನ ವ್ಯಾಪಕ ಆಲಿಕಲ್ಲು ಮಳೆ ಎಚ್ಚರಿಕೆ -
"ಕರ್ನಾಟಕದ ಇತಿಹಾಸದಲ್ಲೇ ಕಪ್ಪು ಚುಕ್ಕೆ, ಕಾಂಗ್ರೆಸ್ನಿಂದ ಪ್ರಜಾಪ್ರಭುತ್ವದ ಹತ್ಯೆ": ಆರ್ ಅಶೋಕ್












Click it and Unblock the Notifications