Get Updates
Get notified of breaking news, exclusive insights, and must-see stories!

ಹನುಮಾನ್ ಚಾಲೀಸಾ ಹಾಕಿದವನ ಮೇಲೆ ಹಲ್ಲೆ: 3 ಬಂಧನ, ಬಿಜೆಪಿ ನಾಯಕರಿಂದ ಸ್ಥಳ ಭೇಟಿ: ನಡೆದಿದ್ದೇನು?

ಬೆಂಗಳೂರು, ಮಾರ್ಚ್ 19: ಮೊಬೈಲ್ ಬಿಡಿ ಭಾಗಗಳ ಅಂಗಡಿಯೊಂದರಲ್ಲಿ ಹನುಮಾನ್ ಚಾಲೀಸಾ (ಆಡಿಯೋ) ಹಾಕಿದ್ದಕ್ಕೆ ಮೂರು ಪುಂಡರು ಬಂದು ಹಲ್ಲೆ ಮಾಡಿ, ಅಂಗಡಿ ಮಾಲೀಕನನ್ನು ಥಳಿಸಿ ಹಲ್ಲೆ ಮಾಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಪೊಲೀಸರು ಮೂವರನ್ನು ಬಂಧಿಸಿದ್ದಾರೆ.

ಘಟನೆಯಲ್ಲಿ ಹಲ್ಲೆ ಮಾಡಿದ್ದು ಅನ್ಯಕೋಮಿನ ಯುವಕರು ಎನ್ನಲಾಗಿದೆ. ಅಂಗಡಿ ಮಾಲೀಕ ಕಬ್ಬನ್ ಪೇಟೆ ನಿವಾಸಿಯಾಗಿರುವ ಮುಖೇಶ್ (26) ನಗರ್ತಪೇಟೆಯ ಸಿದ್ಧಣ್ಣ ಗಲ್ಲಿಯ ಮಸೀದಿ ರಸ್ತೆಯಲ್ಲಿ ಅಂಗಡಿ ಇಟ್ಟಿದ್ದರು. ಇವರ ಮೇಲೆ ಕಿಡಿಗೇಡಿಗಳು ದಾಳಿ ನಡೆಸಿದ್ದರು. ಘಟನೆ ಬಳಿಕ ಬಿಜೆಪಿ ಇಬ್ಬರು ಸಂಸದರು ಅಂಗಡಿ ಮಾಲೀಕನನ್ನು ಭೇಟಿ ಮಾಡಿ ಸಾಂತ್ವನ ಹೇಳಿದ್ದಾರೆ. ಈ ಕುರಿತ ಮಾಹಿತಿಯನ್ನು ಬಿಜೆಪಿ ನಾಯಕ ಸಿಟಿ ರವಿ ಟ್ವೀಟ್‌ನಲ್ಲಿ ಹಂಚಿಕೊಂಡಿದ್ದಾರೆ.

Miscreants Attacked on Shop Owner Who Playing Hanuman Chalisa 3 Arrested BJP Leaders Met Victim

ಮೊಬೈಲ್ ಬಿಡಿಭಾಗಗಳ ಅಂಗಡಿಯ ಮುಖೇಶ್ ಮೇಲೆ ಭಾನುವಾರ ದಾಳಿ ನಡೆಸಿದ ಘಟನೆ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಘಟನೆ ಬಳಿಕ ಹಲಸೂರು ಗೇಟ್ ಪೊಲೀಸ್ ಠಾಣೆಯಲ್ಲಿ ಮುಖೇಶ್ ದೂರು ನೀಡಿದ್ದಾರೆ. ಶೋಧಕ್ಕಿಳಿದ ಪೊಲೀಸರು ಮೂವರನ್ನು ಬಂಧಿಸಿದ್ದಾರೆ.

ಘಟನೆಯ ವಿವರ

ಹಲ್ಲೆಗೊಳಗಾದ ಮುಖೇಶ್ 'ಕೃಷ್ಣ ಟೆಲಿಕಾಂ' ಹೆಸರಿನಲ್ಲಿ ಅಂಗಡಿ ನಡೆಸುತ್ತಿದ್ದ. ಘಟನೆ ದಿನ ಹನುಮಾನ್ ಚಾಲೀಸಾ ಹಾಕಿ ಕೇಳುತ್ತಿದ್ದ. ಈ ವೇಳೆ ಅಲ್ಲಿಗೆ ಬಂದ ಈ ಬಂಧಿತ ಮೂವರು ಆರೋಪಿಗಳು ನಿನ್ನ ಅಂಗಡಿಯಿಂದ ಹೆಚ್ಚು ಸೌಂಡ್ ಬಂದು ಬೇರೆಯವರಿಗೆ ತೊಂದರೆ ಆಗುತ್ತಿದೆ ಎಂದು ಕೆಣಕಿದ್ದಾರೆ. ಈ ವೇಳೆ ಮಾತಿಗೆ ಮಾತು ಬೆಳೆದು ಗಲಾಟೆ ಆಗಿದೆ.

ನೋಡ ನೋಡುತ್ತಿದ್ದಂತೆ ಅಂಗಡಿ ಒಳಗಿನಿಂದ ಮುಖೇಶ್‌ನನ್ನು ಎಳೆದಾಡಿದ್ದಾರೆ. ಮೂವರು ಸೇರಿ ರಸ್ತೆ ಎಳೆದು ತಂದು ಆತನನ್ನು ಕೆಡವಿ ಮನಬಂದಂತೆ ಥಳಿಸಿದ್ದಾರೆ. ಉಗುರುಗಳಿಂದ ಮುಖ ಪರಚಿದ್ದಾರೆ ಎನ್ನಲಾಗಿದೆ. ಕಾಲಲ್ಲಿ ಒದ್ದ ದೃಶ್ಯಗಳು ಸಿಸಿಟಿವಿಯಲ್ಲಿ ಸೆರೆಯಾಗಿವೆ. ಬಳಿಕ ಅಲ್ಲಿಂದ ಆರೋಪಿಗಳು ತೆರಳಿದ್ದಾರೆ.

ಕೆಲವರ ಮೇಲೆ ಎಫ್‌ಐಆರ್, 3 ಬಂಧನ

ಹಲ್ಲೆಗೆ ಒಳಗಾದ ಸಂತ್ರಸ್ತ ಕೂಡಲೇ ಹಲಸೂರು ಗೇಟ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಭಾರತೀಯ ದಂಡ ಸಂಹಿತೆಯ ಸೆಕ್ಷನ್ 307 (ಕೊಲೆ ಯತ್ನ), 506 (ಕ್ರಿಮಿನಲ್ ಬೆದರಿಕೆ), 504 (ಪ್ರಚೋದನೆ), ಮತ್ತು 323ಅಡಿ (ಸ್ವಯಂಪ್ರೇರಿತವಾಗಿ ನೋವುಂಟು ಮಾಡುವುದು) ಪ್ರಕರಣ ದಾಖಲಿಸಲಾಗಿದೆ. .

ಪೊಲೀಸರು ಆರೋಪಿಗಳಾದ ಸುಲೇಮಾನ್, ಶಹನವಾಜ್, ರೋಹಿತ್, ದ್ಯಾನೀಶ್ ಮತ್ತು ತರುಣಾ ಸೇರಿದಂತೆ ಇತರರ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ. ಈ ಪೈಕಿ ಹಲ್ಲೆ ಮಾಡಿದ ಸುಲೇಮಾನ್, ಶಹನವಾಜ್ ಮತ್ತು ರೋಹಿತ್ ಮೂವರನ್ನು ಬಂಧಿಸಿದ್ದಾರೆ.

Miscreants Attacked on Shop Owner Who Playing Hanuman Chalisa 3 Arrested BJP Leaders Met Victim

ಬಿಜೆಪಿ ಸಂಸದರು ಭೇಟಿ, ಸಾಂತ್ವನ

ಪುಂಡರಿಂದ ಹಲ್ಲೆಗೆ ಒಳಗಾದ ಸಂತ್ರಸ್ತ ಮುಖೇಶ್ ನನ್ನು ಸೋಮವಾರ ಬಿಜೆಪಿ ನಾಯಕರಾದ ಸಂಸದ ತೇಜಸ್ವಿ ಸೂರ್ಯ, ಪಿಸಿ ಮೋಹನ್, ಶಾಸಕ ಉದಯ ಗರುಡಾಚಾರ್, ಎಂಎಲ್‌ಸಿ ಛಲವಾದಿ ನಾರಾಯಣ ಸೇರಿದಂತೆ ಇನ್ನಿತರರು ಭೇಟಿ ಮಾಡಿದರು.

ಘಟನೆ ಕುರಿತು ಸಂತ್ರಸ್ತರನಿಂದ ಮಾಹಿತಿ ಪಡೆದ ನಾಯಕರು ಆತನಿಗೆ ಸಾಂತ್ವನ ಹೇಳಿದರು. ಧೈರ್ಯ ತುಂಬಿದರು. ಹಲ್ಲೆ ನಡೆದ ಸ್ಥಳ, ಅಂಗಡಿಗೆ ಭೇಟಿ ಕೊಟ್ಟು ಪರಿಶೀಲಿಸಿದರು. ಆರೋಪಿಗಳ ಬಂಧಿಸುವಂತೆ ಪೊಲೀಸರಿಗೆ ಒತ್ತಾಯಿಸಿದ್ದರು.

ಈ ವೇಳೆ ಮಾತನಾಡಿದ ಸಂಸದ ತೇಜಸ್ವಿ ಸೂರ್ಯ, ಮುಖೇಶ್ ಹಿಂದಿ ಭಾಷಿಕನಾಗಿದ್ದು, ಆತನಿಗೆ ಕನ್ನಡ ಅಷ್ಟಾಗಿ ಬರುವುದಿಲ್ಲ. ಸಿಸಿಟಿ ಆಧರಿಸಿ ಪೊಲೀಸರು ಪ್ರಾಮಾಣಿಕವಾಗಿ ಆರೋಪಿಗಳನ್ನು ಬಂಧಿಸುವ ಕೆಲಸ ಮಾಡಬೇಕು. ಇನ್ನೂ ದೂರುದಾರರು ನೀಡಿದ ದೂರಿನಲ್ಲಿ ಹನುಮಾನ್ ಚಾಲೀಸಾ ಬಗ್ಗೆ ಉಲ್ಲೇಖಿಸಿಲ್ಲ ಎಂದು ತಿಳಿಸಿದರು.

ಮುಖೇಶ್ ಮೇಲೆ ಹಲ್ಲೆ ಖಂಡಿಸಿ ಆ ರಸ್ತೆಯಲ್ಲಿನ ವರ್ತಕರು ಪೊಲೀಸ್ ಠಾಣೆ ಮುಂದೆ ನ್ಯಾಯಕ್ಕಾಗಿ, ಆರೋಪಿಗಳ ಬಂಧನಕ್ಕೆ ಆಗ್ರಹಿಸಿ ಪ್ರತಿಭಟಿಸಿದರು. ಕೆಲವು ವರ್ತಕರು ಮುಖೇಶ್ ಅಂಗಡಿ ಬಳಿ ಹನುಮಾನ್ ಚಾಲಿಸಾ ಪಠಿಸಿದರು.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+