ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಹೊಸ ವರ್ಷಾಚರಣೆ: ಗರ್ಭಿಣಿ ಪತ್ನಿ ಎದುರು ಪತಿಗೆ ಚಾಕುವಿನಿಂದ ಇರಿದ ದುಷ್ಕರ್ಮಿಗಳು

|
Google Oneindia Kannada News

ಬೆಂಗಳೂರು, ಜನವರಿ 1: ಹೊಸ ವರ್ಷಕ್ಕೆ ವಿಶ್ ಮಾಡಿಲ್ಲ ಎಂದು ಪತ್ನಿ ಎದುರೇ ಪತಿಯನ್ನು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಬೆಂಗಳೂರಿನ ಕುರುಬರಹಳ್ಳಿ ಸಮೀಪ ನಡೆದಿದೆ.

ಕರ್ಕಶ ಹಾರ್ನ್ ಪ್ರಶ್ನಿಸಿದ್ದಕ್ಕೆ ಮೂವರು ಯುವಕರಿಗೆ ಚಾಕು ಇರಿತ ಕರ್ಕಶ ಹಾರ್ನ್ ಪ್ರಶ್ನಿಸಿದ್ದಕ್ಕೆ ಮೂವರು ಯುವಕರಿಗೆ ಚಾಕು ಇರಿತ

ಗರ್ಭಿಣಿ ಪತ್ನಿಯೊಂದಿಗೆ ಪತಿ ಪ್ರವೀಣ್ ಹೊಸ ವರ್ಷವೆಂದು ಹೊರಗಡೆ ಹೋಗಿದ್ದ ವಾಪಸ್ ಬರುವಾಗ ಬೈಕ್‌ಗೆ ಅಡ್ಡ ಹಾಕಿದ ದುಷ್ಕರ್ಮಿಗಳು ಹೊಸ ವರ್ಷಕ್ಕೆ ಶುಭಾಶಯ ಕೋರಿದ್ದಾರೆ, ಇವರಿಗೂ ವಾಪಸ್ ಶುಭಾಶಯ ತಿಳಿಸುವಂತೆ ಹೇಳಿದ್ದಾರೆ, ಬಳಿಕ ವಿಶ್ ಮಾಡಿಲ್ಲ ಎಂದು ಚಾಕುವಿನಿಂದ ಇರಿದು ಹತ್ಯೆಗೆ ಯತ್ನಿಸಿದ್ದಾರೆ.

ಶಿವಮೊಗ್ಗ: ಸಪ್ತಪದಿ ವೇಳೆ ವಧುವಿನ ಕುತ್ತಿಗೆ ಸೀಳಿದ ಭಗ್ನಪ್ರೇಮಿ ಶಿವಮೊಗ್ಗ: ಸಪ್ತಪದಿ ವೇಳೆ ವಧುವಿನ ಕುತ್ತಿಗೆ ಸೀಳಿದ ಭಗ್ನಪ್ರೇಮಿ

ಚಾಕು ಕಂಡು ಗಾಬರಿಯಾದ ಪ್ರವೀಣ್ ಸ್ಥಳದಿಂದ ಪರಾರಿಯಾಗಲು ಯತ್ನಿಸಿದ್ದಾರೆ. ಈ ವೇಳೆ ದುಷ್ಕರ್ಮಿಗಳು ನಮಗೆ ವಿಶ್ ಮಾಡುವುದಿಲ್ಲವಾ ನೀನು ಎಂದು ಅಡ್ಡಹಾಕಿ ಕೈ ಭಾಗಕ್ಕೆ ಚಾಕುವಿನಿಂದ ಇರಿದಿದ್ದಾರೆ. ಪ್ರವೀಣ್‍ಗೆ ಚಾಕುವಿನಿಂದ ಇರಿಯುತ್ತಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.

Miscreants stabs youth for not wishing new year in Bengaluru

ಗಾಯಗೊಂಡ ಪ್ರವೀಣ್ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ. ಈ ಬಗ್ಗೆ ಬಸವೇಶ್ವರನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

English summary
Two miscreants attackd copuples near kurubarahalli and stabs youth for not wishing new year infront of pregnant wife.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X