ಅಮಿತ್ ಶಾ ವಿರುದ್ಧ ಅಪಪ್ರಚಾರ, ಬಿಜೆಪಿಯಿಂದ ದೂರು ದಾಖಲು
ಬೆಂಗಳೂರು, ಸೆಪ್ಟೆಂಬರ್ 20: ನವೆಂಬರ್ 1ರಂದು ಕನ್ನಡ ಧ್ವಜದ ಬದಲು ಪಕ್ಷದ ಧ್ವಜ ಹಾರಿಸುವಂತೆ ಅಮಿತ್ ಶಾ ಕರೆ ನೀಡಿದ್ದಾರೆ ಎಂಬ ಸುಳ್ಳು ಸುದ್ದಿಯನ್ನು ಹಬ್ಬಿಸಲಾಗುತ್ತಿದೆ ಎಂದು ದೂರಿರುವ ರಾಜ್ಯ ಬಿಜೆಪಿ ಘಟಕ ಈ ಸಂಬಂಧ ಬೆಂಗಳೂರು ಪೊಲೀಸ್ ಆಯುಕ್ತರಿಗೆ ದೂರು ನೀಡಿದೆ.
'mybengalooru.com' ಹಾಗೂ 'namma nechchina mukhyamantri', 'ನಮ್ಮ ನೆಚ್ಚಿನ ಮುಖ್ಯಮಂತ್ರಿ ಸಿದ್ದರಾಮಯ್ಯ' ಪೇಜಿನ ಮೂಲಕ ಈ ರೀತಿ ಅಪಪ್ರಚಾರ ನಡೆಸಲಾಗುತ್ತಿದೆ ಎಂದು ಬಿಜೆಪಿ ತನ್ನ ದೂರಿನಲ್ಲಿ ತಿಳಿಸಿದೆ.

ಈ ರೀತಿಯ ವೆಬ್ಸೈಟ್ ಹಾಗೂ ಫೇಸ್ಬುಕ್ ಪೇಜ್ ಗಳ ಮೂಲಕ ಅಪಪ್ರಚಾರ ನಡೆಸಲಾಗುತ್ತಿದ್ದು ಇದರ ಹಿಂದೆ ಇರುವವರನ್ನು ಬಂಧಿಸಬೇಕು. ಈ ರೀತಿಯ ಸುದ್ದಿಯಿಂದ ಬಿಜೆಪಿಗೆ ಹಾಗೂ ಬಿಜೆಪಿ ಕಾರ್ಯಕರ್ತರಿಗೆ ಮುಜುಗರವಾಗಿದೆ. ಹೀಗಾಗಿ ಈ ಸುದ್ದಿಯನ್ನು ಪ್ರಚಾರ ಮಾಡಿದವರ ವಿರುದ್ಧ ಕಾನೂನಾತ್ಮಕ ಕ್ರಮ ಕೈಗೊಳ್ಳಬೇಕು. ಸೆಕ್ಷನ್ 499ರ ಪ್ರಕಾರ ಮೊಕದ್ದಮೆ ದಾಖಲಿಸಬೇಕು ಎಂದು ರಾಜ್ಯ ಬಿಜೆಪಿ ಘಟಕ ಒತ್ತಾಯಿಸಿದೆ.












Click it and Unblock the Notifications