ಬೆಂಗಳೂರು: ಚುನಾವಣಾ ತರಬೇತಿಯಲ್ಲಿ ಅಸಭ್ಯ ವರ್ತನೆ; ಮಹಿಳಾ ಪೊಲೀಸ್ ಇನ್ಸ್ಪೆಕ್ಟರ್ ಅಮಾನತು
2023ರ ಕರ್ನಾಟಕ ವಿಧಾನಸಭಾ ಚುನಾವಣೆಯ ಮತದಾನ ಆರಂಭಕ್ಕೆ ಕೆಲವೇ ಗಂಟೆಗಳು ಉಳಿದಿದ್ದು, ರಾಜ್ಯದ 224 ಕ್ಷೇತ್ರಗಳಲ್ಲಿ ಏಕಕಾಲದಲ್ಲಿ ನಾಳೆ (ಮೇ 10) ಬೆಳಿಗ್ಗೆ 7 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ನಡೆಯಲಿದೆ.
ಇನ್ನು ಇದೇ ವೇಳೆ ಬುಧವಾರದ ಮತದಾನ ಹಿನ್ನೆಲೆಯಲ್ಲಿ ಮತಗಟ್ಟೆ ತರಬೇತಿಯಲ್ಲಿ ಉದ್ಧಟತನ ತೋರಿದ ಮಹಿಳಾ ಪೊಲೀಸ್ ಇನ್ಸ್ಪೆಕ್ಟರ್ವೊಬ್ಬರನ್ನು ಅಮಾನತು ಮಾಡಲಾಗಿದೆ.

ಮಹಿಳಾ ಪೊಲೀಸ್ ಇನ್ಸ್ಪೆಕ್ಟರ್ ಭವ್ಯ ಎಂಬುವರನ್ನು ಅಮಾನತುಗೊಳಿಸಿ ಆದೇಶ ಹೊರಡಿಸಲಾಗಿದೆ. ಇವರನ್ನು ಬೆಂಗಳೂರಿನ ಜ್ಞಾನಭಾರತಿಯ ಅಂಬೇಡ್ಕರ್ ವಿಶ್ವವಿದ್ಯಾಲಯದಲ್ಲಿ ಮತಗಟ್ಟೆ ತರಬೇತಿಗೆ ನಿಯೋಜನೆ ಮಾಡಲಾಗಿತ್ತು. ತರಬೇತಿ ಪಡೆಯುವ ಸಂದರ್ಭದಲ್ಲಿ ಉದ್ಧಟತನ ತೋರಿದ್ದಕ್ಕೆ ಅಮಾನತುಗೊಳಿಸಲಾಗಿದೆ.
ಮತಗಟ್ಟೆಗಳಲ್ಲಿ ಕಾರ್ಯನಿರ್ವಹಿಸುವ ಬಗ್ಗೆ ಅಂಬೇಡ್ಕರ್ ವಿಶ್ವವಿದ್ಯಾಲಯದಲ್ಲಿ ತರಬೇತಿ ಆಯೋಜನೆ ಮಾಡಲಾಗಿತ್ತು. ಈ ವೇಳೆ ಮಹಿಳಾ ಇನ್ಸ್ಪೆಕ್ಟರ್ ಭವ್ಯ ತರಬೇತಿಗೆ ಹಾಜರಾಗದೇ ಪತ್ರಿಕೆ ಓದುತ್ತಾ ಕುಳಿತಿದ್ದರು. ನೋಡಲ್ ಅಧಿಕಾರಿ ಹಾಗೂ ಸೆಕ್ಟರ್ ಅಧಿಕಾರಿ ಪ್ರಶ್ನಿಸಿದಾಗ ಉದ್ಧಟತನ ತೋರಿದ್ದಾರೆ.
"ನಾನು ಮಾಡುತ್ತಿರುವುದು ಸರಿ. ತರಬೇತಿ ಕೊಡುವುದು ನಿಮ್ಮ ಕೆಲಸ. ತರಬೇತಿ ಪಡೆಯುವುದು ಬಿಡುವುದು ನಮ್ಮಿಷ್ಟ. ನೀವು ಹೇಳಿದಂತೆ ಕೇಳುವುದಕ್ಕೆ ನಾನು ನಿಮ್ಮ ಇಲಾಖೆ ಅಲ್ಲ. ಈ ತರಬೇತಿ ಉಪಯೋಗಕ್ಕಿಲ್ಲ," ಎಂದೆಲ್ಲಾ ಇನ್ಸ್ಪೆಕ್ಟರ್ ಭವ್ಯ ಅಹಂಕಾರದ ಮಾತುಗಳನ್ನಾಡಿದ್ದಾರೆ.
ಯಾರಿಗಾದರೂ ಹೇಳಿಕೊಳ್ಳಿ ಹೋಗಿ ಎಂದಿದ್ದ ಮಹಿಳಾ ಪೊಲೀಸ್ ಇನ್ಸ್ಪೆಕ್ಟರ್ ಭವ್ಯ ವರ್ತನೆಯ ಬಗ್ಗೆ ಬಿಬಿಎಂಪಿ ಆಯುಕ್ತರಿಗೆ ಸೆಕ್ಟರ್ ಅಧಿಕಾರಿಗಳು ದೂರು ನೀಡಿದ್ದಾರೆ. ಈ ಹಿನ್ನಲೆಯಲ್ಲಿ ಪ್ರಜಾಪ್ರತಿನಿಧಿ ಕಾಯ್ದೆಯಡಿ ಬಿಬಿಎಂಪಿ ಆಯುಕ್ತರು ಮತ್ತು ಬೆಂಗಳೂರು ಚುನಾವಣಾಧಿಕಾರಿಗಳು ಅಮಾನತುಗೊಳಿಸಿದ್ದಾರೆ..
-
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Bengaluru: ಶ್ರೀರಾಮ ನವಮಿ ಹಬ್ಬದ ಪ್ರಯುಕ್ತ ಮಾ.27ರಂದು ನಗರದಲ್ಲಿ ಮಾಂಸ ಮಾರಾಟ ಬಂದ್ಗೆ GBA ಆದೇಶ -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
ಬೆಂಗಳೂರು ಇ-ಖಾತಾ ದಂಧೆ ಬಯಲು: ಬ್ರ್ಯಾಂಡ್ ಬೆಂಗಳೂರಿಗೆ ಆರ್ ಅಶೋಕ್ ತೀವ್ರ ಟೀಕೆ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಐಪಿಎಲ್ಗೂ ಮುನ್ನ ಆರ್ಸಿಬಿ ಹೊಸ ದಾಖಲೆ: 16,000 ಕೋಟಿಗೆ ಆದಿತ್ಯ ಬಿರ್ಲಾ ಗ್ರೂಪ್ ಪಾಲಾದ ರಾಯಲ್ ಚಾಲೆಂಜರ್ಸ್ ಬೆಂಗಳೂರು -
IPL 2026 RCB: ಹ್ಯಾಜಲ್ವುಡ್, ಯಶ್ ದಯಾಳ್ ಅಲಭ್ಯರಾದ್ರೆ ಆರ್ಸಿಬಿ ಮುಂದಿರುವ 'ಪ್ಲಾನ್ ಬಿ' ಏನು? -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ?












Click it and Unblock the Notifications