ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಎರಡು ದಿನಗಳ ಹಿಂದೆ ನಾಪತ್ತೆಯಾಗಿದ್ದ ಬಾಲಕನ ನಿಗೂಢ ಸಾವು

|
Google Oneindia Kannada News

ಬೆಂಗಳೂರು, ಮಾರ್ಚ್ 15: ಎರಡು ದಿನಗಳ ಹಿಂದೆ ಬಾಲಕ ಕಾಣೆಯಾಗಿದ್ದ ಪೋಷಕರು ಆತನ ಸ್ನೇಹಿತನ ಮನೆ, ಸಂಬಂಧಿಕರ ಮನೆ ಎಲ್ಲೆಲ್ಲೂ ಹುಡುಕಿ ಸುಸ್ತಾಗಿದ್ದರು ಆದರೆ ಮನೆಯ ಹೊರಭಾಗದಲ್ಲೇ ಆತ ಶವವಾಗಿ ಸಿಕ್ಕಿದೆ.

ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ಮಹದೇವಪುರ ಪೊಲೀಸ್ ಠಾಣಾ ವ್ಯಾಪ್ತಿಯ ಉದಯನಗರದಲ್ಲಿ ಬೆಳಕಿಗೆ ಬಂದಿದೆ.

ಹೆತ್ತ ತಾಯಿಯನ್ನೇ ಹೊಡೆದ 17ರ ಯುವಕನಿಗೆ ಊರೆಲ್ಲ ಛೀ, ಥೂ... ಹೆತ್ತ ತಾಯಿಯನ್ನೇ ಹೊಡೆದ 17ರ ಯುವಕನಿಗೆ ಊರೆಲ್ಲ ಛೀ, ಥೂ...

ಕೆ.ಜಿ.ಎಫ್ ಮೂಲದ ಸುರೇಶ್(24) ಮೃತ ಯುವಕ. ಕಲೆಕ್ಟ್ ಮಾಡುತ್ತಿದ್ದ ಫೈನಾನ್ಸ್ ಹಣದ ವ್ಯವಹಾರದಲ್ಲಿ ಹಣ ದುರ್ಬಳಕೆ ಮಾಡಿಕೊಂಡ ಆರೋಪ ಕೇಳಿ ಬಂದಿದ್ದು, ಈ ಹಿನ್ನೆಲೆಯಲ್ಲಿ ತನ್ನ ಮೊಬೈಲ್ ಸೇರಿದಂತೆ ಎಲ್ಲಾ ವಸ್ತುಗಳನ್ನು ಮನೆಯಲ್ಲಿ ಬಿಟ್ಟು ನಾಪತ್ತೆಯಾಗಿದ್ದನು.

Missing young boy found dead in next to his house

ಕಳೆದ ಒಂದೂವರೆ ವರ್ಷದಿಂದ ಉದಯನಗರ ಗಣೇಶ ದೇವಾಲಯ ಹಿಂಭಾಗದ ಬಾಡಿಗೆ ಮನೆಯಲ್ಲಿ ವಾಸಿಸುತ್ತಿದ್ದನು. ಪೊಲೀಸ್ ಠಾಣೆಗೆ ದೂರು ನೀಡಲು ನಿರ್ಧರಿಸಿದ್ದರು, ಆದರೆ ಗುರುವಾರ ಅಕ್ಕಪಕ್ಕದ ಮನೆಯವರಿಗೆ ಕೊಳೆತ ದೇಹದ ವಾಸನೆ ಬಂದ ಹಿನ್ನೆಲೆಯಲ್ಲಿ ಮನೆಗಳ ಓಣಿಯಲ್ಲಿ ನೋಡಿದಾಗ ಮೃತ ದೇಹ ಕಂಡುಬಂದಿದೆ.

ರಕ್ತದ ಮಡುವಿನಲ್ಲಿದ್ದರೂ ಹೆಂಡತಿಗೆ ಕರೆ ಮಾಡಿ ನನ್ನನ್ನು ಬದುಕಿಸು ಎಂದಿದ್ದ ಸೈಯದ್ ರಕ್ತದ ಮಡುವಿನಲ್ಲಿದ್ದರೂ ಹೆಂಡತಿಗೆ ಕರೆ ಮಾಡಿ ನನ್ನನ್ನು ಬದುಕಿಸು ಎಂದಿದ್ದ ಸೈಯದ್

ಈ ಬಗ್ಗೆ ಮಾಹಿತಿ ತಿಳಿದ ಮಹದೇವಪುರ ಪೊಲೀಸರು ಸ್ಥಳಕ್ಕಾಗಮಿಸಿ ಪರಿಶೀಲನೆ ನಡೆಸಿ, ಸ್ಥಳೀಯರ ಸಹಾಯದಿಂದ ಮೃತ ದೇಹವನ್ನು ಹೊರತೆಗೆದು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ.

English summary
A 24 year young boy from KGF was missing, But after two days his dead body found in next to his house.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X