ಡಿವೈಎಸ್ಪಿ ಗಣಪತಿ ಕೇಸ್: ತನಿಖೆ ತೀವ್ರಗೊಳಿಸಿದ ಸಿಬಿಐ
ಬೆಂಗಳೂರು, ನವೆಂಬರ್ 15: ಸುಪ್ರೀಂಕೋರ್ಟಿನ ನಿರ್ದೇಶನದಂತೆ ಡಿವೈಎಸ್ಪಿ ಎಂ.ಕೆ.ಗಣಪತಿ ಆತ್ಮಹತ್ಯೆ ಪ್ರಕರಣದ ತನಿಖೆಯನ್ನು ಸಿಬಿಐ ತಂಡವು ಚುರುಕುಗೊಳಿಸಿದೆ.
ಮಂಗಳವಾರದಂದು ಮಡಿಕೇರಿಯಲ್ಲಿದ್ದ ಸಿಬಿಐ ಅಧಿಕಾರಿಗಳು ಇಂದು ಬೆಂಗಳೂರಿಗೆ ಆಗಮಿಸಲಿದ್ದಾರೆ. ಗಣಪತಿ ಅವರ ಕುಟುಂಬದ ಸದಸ್ಯರನ್ನು ವಿಚಾರಣೆಗೊಳಪಡಿಸಲಿದ್ದಾರೆ. ತನಿಖೆಯ ಬೆಳವಣಿಗೆಗಳ ಮುಖ್ಯಾಂಶ ಇಲ್ಲಿದೆ:
* ಚೆನ್ನೈ ಸಿಬಿಐ ಕಚೇರಿಯ ತನಿಖಾಧಿಕಾರಿ ತಲೈಮಣಿ ನೇತೃತ್ವದ ತಂಡದ ಅಧಿಕಾರಿಗಳು ಬೆಂಗಳೂರಿನತ್ತ ಮುಖ ಮಾಡಿದ್ದಾರೆ.
* ಬಳ್ಳಾರಿ ರಸ್ತೆಯಲ್ಲಿರುವ ಸಿಬಿಐ ಕಚೇರಿಯಲ್ಲಿ ಗಣಪತಿಯವರ ಅಕ್ಕ ಸಬಿತಾ ಅವರನ್ನು ವಿಚಾರಣೆಗೊಳಪಡಿಸಲಿದ್ದಾರೆ. ಈ ಕುರಿತಂತೆ ನಿನ್ನೆ ನೋಟಿಸ್ ನೀಡಲಾಗಿತ್ತು.
* ಗಣಪತಿ ಸಹೋದರ ಎಂ.ಕೆ.ಮಾಚಯ್ಯ ಹಾಗೂ ಪ್ರಮುಖ ಸಾಕ್ಷಿಗಳಾದ ಬೆಳ್ಯಪ್ಪ, ಜಗನ್ ಅವರಿಂದ ಹೇಳಿಕೆ ಪಡೆಯಲಾಗಿದೆ.
ಡಿವೈಎಸ್ಪಿ ಗಣಪತಿ ಯಾರು? ಏನು? ಎತ್ತ?
* ಮಂಗಳವಾರದಂದು ಬೆಳಗ್ಗೆ 10ಕ್ಕೆ ವಿನಾಯಕ ವಸತಿ ಗೃಹಕ್ಕೆ ಭೇಟಿ ನೀಡಿ ಆತ್ಮಹತ್ಯೆ ಮಾಡಿಕೊಂಡಿದ್ದ ಕೊಠಡಿ ಪರಿಶೀಲಿಸಿ, ಲಾಡ್ಜ್ ಸಿಬ್ಬಂದಿ ಹೇಳಿಕೆ ಪಡೆದಿದ್ದಾರೆ.

*ಇನ್ಸ್ಪೆಕ್ಟರ್ ಮೇದಪ್ಪ, ಎಸ್ಐ ಭರತ್, ಮರಣೋತ್ತರ ಪರೀಕ್ಷೆ ನಡೆಸಿದ್ದ ಜಿಲ್ಲಾ ಆಸ್ಪತ್ರೆಯ ಡಾ.ಶೈಲಜಾ ಅವರನ್ನು ತೀವ್ರ ವಿಚಾರಣೆಗೆ ಒಳಪಡಿಸಲಾಗಿದೆ.
ವಿನಾಯಕ್ ಲಾಡ್ಜಿನ ರೂಮ್ ನಂಬರ್ 315ರಲ್ಲಿ ಜುಲೈ 7, 2016ರಂದು ಆತ್ಮಹತ್ಯೆಗೂ ಮುನ್ನ ವಿಡಿಯೋ ಮಾಡಿದ್ದ ಗಣಪತಿ ಅವರು ಅಂದಿನ ಗೃಹ ಸಚಿವ ಕೆಜೆ ಜಾರ್ಜ್, ಹಿರಿಯ ಅಧಿಕಾರಿಗಳಾದ ಪ್ರಣವ್ ಮೋಹಂತಿ ಹಾಗೂ ಎಎಂ ಪ್ರಸಾದ್ ಅವರ ಮೇಲೆ ಆರೋಪ ಹೊರೆಸಿದ್ದರು. ಈ ಕುರಿತಂತೆ ಸಿಐಡಿ ತನಿಖೆ ನಡೆದು, ಮೂವರು ಆರೋಪಿಗಳ ವಿರುದ್ಧ ಬಿ ರಿಪೋರ್ಟ್ ಸಲ್ಲಿಸಲಾಗಿತ್ತು. ಇದನ್ನು ಪ್ರಶ್ನಿಸಿ ಗಣಪತಿ ಅವರ ಪುತ್ರ ನೇಹಾಲ್ ಅವರು ಸುಪ್ರೀಂಕೋರ್ಟ್ ಮೊರೆ ಹೋಗಿದ್ದರು. ಈಗ ಸುಪ್ರೀಂಕೋರ್ಟಿನ ಆದೇಶದಂತೆ ಸಿಬಿಐ ತಂಡ ತನಿಖೆ ನಡೆಸುತ್ತಿದೆ.
-
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications