Breaking: ಶಾಸಕ ಭೈರತಿ ಬಸವರಾಜು ನಿರೀಕ್ಷಣಾ ಜಾಮೀನು ಅರ್ಜಿ ವಜಾ: ಶೀಘ್ರ ಶರಣಾಗತಿ ಸಾಧ್ಯತೆ
ಬೆಂಗಳೂರು: ರೌಡಿ ಶೀಟರ್ ಬಿಕ್ಲು ಶಿವ ಹತ್ಯೆ ಪ್ರಕರಣದಲ್ಲಿ ಕೈವಾಡ ಇದೆ ಎಂಬ ಆರೋಪ ಹೊತ್ತಿದ್ದ ಶಾಸಕ ಭೈರತಿ ಬಸವರಾಜ್ ಅವರು ಕೋರ್ಟ್ಗೆ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಯನ್ನು ನ್ಯಾಯಪೀಠ ವಜಾಗೊಳಿಸಿದೆ. ಶೀಘ್ರವೇ ಅವರು ಶರಣಾಗುವ ಸಾಧ್ಯತೆ ಇದೆ. ಈ ಮೂಲಕ ಕೋರ್ಟ್ ಬೈರತಿ ಬಸವರಾಜ್ ಅವರಿಗೆ ಶಾಕ್ ನೀಡಿದೆ. ಹೀಗಾಗಿ ಬಂಧನ ಭೀತಿ ಎದುರಾಗಿದೆ.
ರೌಡಿಶೀಟರ್ ಬಿಕ್ಲು ಶಿವ ಕೊಲೆ ಪ್ರಕರಣದಲ್ಲಿ ನಿರೀಕ್ಷಣಾ ಜಾಮೀನು ಅರ್ಜಿ ವಜಾ ಮಾಡಿದ್ದನ್ನು ಮಾಜಿ ಸಚಿವ ಭೈರತಿ ಬಸವರಾಜ್ ಅವರು ಸುಪ್ರೀಂಕೋರ್ಟ್ ನಲ್ಲಿ ಪ್ರಶ್ನಿಸಿದ್ದರು. ಅವರ ಅರ್ಜಿ ವಜಾಗೊಳಿಸಿದ ದೇಶದ ಉನ್ನತ ನ್ಯಾಯಾಲಯ, ಆರೋಪಿ ಬೈರತಿ ಬಸವರಾಜ್ ಕೂಡಲೇ ಪೊಲೀಸರ ಮುಂದೆ ಶರಣಾಗಬೇಕು ಎಂದು ಸೂಚಿಸಿದೆ. ಈ ಮೂಲಕ ಅವರು ಭಾರೀ ಹಿನ್ನಡೆ ಅನುಭವಿಸುವಂತಾಗಿದೆ.

ಬಿಕ್ಲು ಶಿವ ಪ್ರಕರಣದಲ್ಲಿ ಐದನೇ ಆರೋಪಿಯಾಗಿರುವ ಭೈರತಿ ಬಸವರಾಜ ಸದ್ಯ ಕರ್ನಾಟಕದಲ್ಲಿಲ್ಲ. ಅವರು ವಿದೇಶದಲ್ಲಿ ತಲೆಮರೆಸಿಕೊಂಡಿದ್ದಾರೆ ಎನ್ನಲಾಗಿದೆ. ಅವರಿಗಾಗಿ ಶೋಧ ನಡೆದಿದೆ. ಇದೀಗ ಸುಪ್ರೀಂ ಕೋರ್ಟ್ನ ಮುಖ್ಯ ನ್ಯಾಯಮೂರ್ತಿ ಪರ್ಡಿವಾಲ ಮತ್ತು ನ್ಯಾಯಮೂರ್ತಿ ಮಹದೇವನ್ ಅವರಿದ್ದ ವಿಭಾಗೀಯ ಪೀಠವು ಶಾಸಕರಿಗೆ ರಿಲೀಫ್ ನೀಡಲು ನಿರಾಕರಿಸಿದೆ. ಅರ್ಜಿ ವಜಾಗೊಳಿಸಿ ಆಘಾತ ನೀಡಿದೆ.
ಕರ್ನಾಟಕ ಹೈಕೊರ್ಟ್ ಜಾಮೀನು ಅರ್ಜಿಯನ್ನು ಇದೇ ಫೆಬ್ರವರಿ 10ರಂದು ತಿರಸ್ಕರಿಸಿತ್ತು. ಅದರ ಬೆನ್ನಲ್ಲೆ ಫೆಬ್ರವರಿ 11ರಂದು ಸುಪ್ರೀಂ ಕೋರ್ಟ್ ಮೊರೆ ಹೋಗಿದ್ದ ಭೈರತಿ ಬಸವರಾಜ್ಗೆ ಹಿನ್ನೆಡೆ ಆಗಿದೆ. ವಿಚಾರಣೆಗೆ ಹಾಜರಾಗುವಂತೆ ಸರ್ವೋಚ್ಚ ನ್ಯಾಯಾಲಯ ಕಟ್ಟುನಿಟ್ಟಿನ ನಿರ್ದೇಶನ ನೀಡಿದೆ.
ಪ್ರಕರಣದ ಹಿನ್ನೆಲೆ ಏನು?
ಬೆಂಗಳೂರಿನ ಹಲಸೂರು ಕೆರೆ ಬಳಿ 2025 ಜುಲೈ 15 ರಂದು ರೌಡಿಶೀಟರ್ ಮತ್ತು ರಿಯಲ್ ಎಸ್ಟೇಟ್ ಉದ್ಯಮಿ ಶಿವಪ್ರಕಾಶ್ ಅಲಿಯಾಸ್ ಬಿಕ್ಲು ಶಿವನನ್ನು ಮಾರಕಾಸ್ತ್ರಗಳಿಂಚ ಕೊಚ್ಚಿ ಕೊಲೆ ಮಾಡಲಾಗಿತ್ತು. ಈ ಕೊಲೆಗೆ ಭೂಮಿ ವ್ಯಾಜ್ಯ ಕಾರಣವಾಗಿದೆ ಎಂದು ತನಿಖೆಯಿಂದ ಬಹಿರಂಗವಾಗಿತ್ತು. ಸಿಐಡಿ ತನಿಖೆಯಲ್ಲಿ ಕೆ.ಆರ್.ಪುರಂನ ಬಿಜೆಪಿ ಶಾಸಕ ಬೈರತಿ ಬಸವರಾಜ್ರನ್ನು 5ನೇ ಆರೋಪಿಯಾಗಿ ಮಾಡಲಾಗಿತ್ತು. ಮಾಜಿ ಸಚಿವರು ಪ್ರಮುಖ ಆರೋಪಿ ಜಗದೀಶ್ ಅಲಿಯಾಸ್ ಜಗ್ಗನ ಜತೆ ಸಂಪರ್ಕದಲ್ಲಿದ್ದರು. ಹೀಗಾಗಿ ಅವರ ಬಂಧನಕ್ಕೆ ಸಿಐಡಿ ವಿಶೇಷ ತಂಡಗಳನ್ನು ರಚಿಸಿ ಹುಡುಕಲಾಗುತ್ತಿದೆ. ಅವರಿಗೆ ಜಾಮೀನು ನೀಡಲು ಕೋರ್ಟ್ ನಿರಾಕರಿಸಿವೆ. ವಿಚಾರಣೆಗೆ ಹಾಜರಾಗುವುದೊಂದೆ ಅವರಿಗೆ ಪರಿಹಾರ ಮಾರ್ಗವಾಗಿದೆ.
-
ಉಜ್ವಲ ಯೋಜನೆ ಬದಲು ಸೌದೆ ಒಲೆ ಯೋಜನೆ: ಡಿಸಿಎಂ ಡಿ.ಕೆ. ಶಿವಕುಮಾರ್ ಕಿಡಿ -
ಬಾಗಲಕೋಟೆ, ದಾವಣಗೆರೆ ಉಪಚುನಾವಣೆ: ಎರಡೂ ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ನಿಶ್ಚಿತ-ಬಿ.ಎಸ್.ಯಡಿಯೂರಪ್ಪ -
Thalapathy Vijay Assets: ನಾಮಪತ್ರ ಸಲ್ಲಿಸಿದ ವಿಜಯ್, ಇವರ ಒಟ್ಟು ಆಸ್ತಿ ಎಷ್ಟು? ಇಲ್ಲಿದೆ ಮಾಹಿತಿ -
Tamil Nadu Election: ತನ್ನ ಡ್ರೈವರ್ ಮಗನಿಗೆ MLA ಟಿಕೆಟ್ ಘೋಷಿಸಿದ ನಟ ದಳಪತಿ ವಿಜಯ್, ಭಾವುಕ ಕ್ಷಣದ ವಿಡಿಯೋ ವೈರಲ್ -
ತಮಿಳುನಾಡು ಚುನಾವಣೆ 2026: ಟಿವಿಎಕೆ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ; ಎರಡು ಕ್ಷೇತ್ರಗಳಿಂದ ನಟ ದಳಪತಿ ವಿಜಯ್ ಸ್ಪರ್ಧೆ -
Bagalkote: ಮನೆಗೆ ಯಾರನ್ನೂ ಸೇರಿಸದ ವೀರಣ್ಣ ಚರಂತಿಮಠ ಶಾಸಕರಾಗಲೂ ಲಾಯಕ್ಕಾ?: ಸಿದ್ದರಾಮಯ್ಯ -
Hindi Language: ಹಿಂದಿ ಭಾಷೆ ರದ್ದು, ಎಸ್ಎಸ್ಎಲ್ಸಿ ಮಕ್ಕಳ ಬದುಕಿಗೆ ಕಲ್ಲು:ಆರ್ ಅಶೋಕ್ -
ಪರಮಾತ್ಮ ಹೇಳಿದ್ರೂ ಹಿಂದೆ ಸರಿಯಲ್ಲ ಎಂದಿದ್ದ ಕಾಂಗ್ರೆಸ್ನ ಸಾದಿಕ್ ಪೈಲ್ವಾನ್ ನಾಮಪತ್ರ ಹಿಂಪಡೆಯಲು ಇದೆ ಹಲವು ಕಾರಣ -
ಕುಕ್ಕರ್ ಬಾಂಬ್ ಬ್ಲಾಸ್ಟ್ ಕೇಸ್: ಕಾಂಗ್ರೆಸ್ ಉಗ್ರರಿಗೆ 'ಗ್ಯಾರಂಟಿ ಭಾಗ್ಯ' ನೀಡಿದರೂ ಅಚ್ಚರಿಯಿಲ್ಲ; ವಿಜಯೇಂದ್ರ -
Bengaluru: ಶಾಲೆಗಳಿಗೂ BWSSB ನೀರಿನ ಬಿಲ್ ಶಾಕ್; ಡಿಸಿಎಂ ಡಿ.ಕೆ. ಶಿವಕುಮಾರ್ ಮೊರೆ ಹೋದ ಖಾಸಗಿ ಶಿಕ್ಷಣ ಸಂಸ್ಥೆಗಳು -
Khushbu Sundar: ಲವ್ ಜಿಹಾದ್ ಆರೋಪ ಹೊತ್ತಿದ್ದ ನಟಿ ಖುಷ್ಬೂ ಪತಿ ಸುಂದರ್ ರಾಜಕೀಯಕ್ಕೆ ಎಂಟ್ರಿ: ಮಧುರೈ ಸೆಂಟ್ರಲ್ನಿಂದ ಸ್ಪರ್ಧೆ -
ಕನ್ನಡತಿ ಶ್ರೇಯಾಂಕಾ ಪಾಟೀಲ್, ಮಂಧಾನ ಜೊತೆ ಆರ್ಸಿಬಿ ಪಂದ್ಯ ವೀಕ್ಷಣೆ: ಕ್ರೀಡಾ ಸ್ಪೂರ್ತಿ ಮೆರೆದ ಜೆಮಿಮಾ ರೊಡ್ರಿಗಸ್












Click it and Unblock the Notifications