ಚನ್ನಪಟ್ಟಣದ ಶಾಸಕ ಸಿಪಿ ಯೋಗೇಶ್ವರ್ ಗೆ ಸಚಿವ 'ಭಾಗ್ಯ'?
ಬೆಂಗಳೂರು, ಜೂನ್ 19: ಸಚಿವ ಸಂಪುಟ ಸೇರಲು ಇನ್ನಿಲ್ಲದ ಕಸರತ್ತು ನಡೆಸಿ ಸುಸ್ತಾದವರು ಬೆರಗಿನಿಂದ ನೋಡುವಂತೆ ಚನ್ನಪಟ್ಟಣದ ಶಾಸಕ ಸಿಪಿ ಯೋಗೇಶ್ವರ್ ಅವರು ಭಾನುವಾರ ಹೇಳಿಕೆ ನೀಡಿದ್ದಾರೆ.
ಶಾಸಕ ಸಿಪಿ ಯೋಗೇಶ್ವರ್ ಅವರು ಭಾನುವಾರ ಬೆಳಗ್ಗೆ ಸಿಎಂ ಸಿದ್ದರಾಮಯ್ಯ ಅವರ ನಿವಾಸದಲ್ಲಿ ಕಾಣಿಸಿಕೊಂಡಿದ್ದರು. ಕೊನೆ ಕ್ಷಣದಲ್ಲಿ ಒತ್ತಡ, ಲಾಬಿ ನಡೆಸಿ ಸಚಿವ ಸ್ಥಾನ ಗಿಟ್ಟಿಸಿಕೊಳ್ಳುವ ಪ್ರಯತ್ನಗಳನ್ನು ನಡೆಸಿ ಅಚ್ಚರಿ ಮೂಡಿಸಿದ್ದರು.[ಸಿದ್ದರಾಮಯ್ಯ ಸಂಪುಟ ಸೇರುವ ಶಾಸಕರ ಪಟ್ಟಿ]
ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿದ ನಂತರ ಮಾತನಾಡಿದ ಯೋಗೇಶ್ವರ್, 'ನನಗೆ ಮಂತ್ರಿ ಪದವಿ ತಪ್ಪಿಸಲು ಯಾರಿಂದಲೂ ಸಾಧ್ಯವಿಲ್ಲ. ಹೈಕಮಾಂಡ್ ನನಗೆ ನೀಡಿರುವ ಭರವಸೆ ಉಳಿಸಿಕೊಳ್ಳುವ ವಿಶ್ವಾಸವಿದೆ. ಆತ (ಡಿಕೆ ಶಿವಕುಮಾರ್) ಅಧ್ಯಕ್ಷ(ಕೆಪಿಸಿಸಿ) ನಾಗಲು ಯಾರ ಬೆಂಬಲ ಬೇಕಾಗಿಲ್ಲ. ಅದೇ ರೀತಿ ನನಗೆ ಸಚಿವನಾಗಲು ಯಾರ ಬೆಂಬಲ ಬೇಕಿಲ್ಲ' ಎಂದಿದ್ದಾರೆ. [ಸಂಪುಟದಿಂದ ಹೊರಹೋಗಲಿರುವ 13 ಸಚಿವರು]

ಐದು ಬಾರಿ ಶಾಸಕನಾಗಿ ನಿಷ್ಠೆಯಿಂದ ದುಡಿದಿದ್ದೇನೆ. ಈ ಹಿಂದೆ ಕೂಡಾ ಸಚಿವನಾಗಿ (ಬಿಜೆಪಿ ಸರ್ಕಾರ) ದುಡಿದ ಅನುಭವವಿದೆ. ಹೀಗಾಗಿ ನನ್ನನ್ನು ಸಚಿವ ಸ್ಥಾನಕ್ಕೆ ಆಯ್ಕೆ ಮಾಡುವ ಭರವಸೆ ಇದೆ ಎಂದಿದ್ದಾರೆ. ಯೋಗೇಶ್ವರ್ ಅವರ ಈ ಮಟ್ಟದ ಆತ್ಮವಿಶ್ವಾಸ ವ್ಯಕ್ತಪಡಿಸಿರುವುದು ಎಲ್ಲರ ಹುಬ್ಬೇರಿಸಿದೆ.[ಸಿಐಡಿಗೆ ಬೇಕಾದ ಯೋಗೇಶ್ವರ್ ಗೆ ಸಚಿವ ಸ್ಥಾನ ಏಕೆ]
ಒಕ್ಕಲಿಗ ಕೋಟಾದ ಮೂಲಕ ಪ್ರವೇಶ: ಸಚಿವ ಸಂಪುಟದಲ್ಲಿ ಒಕ್ಕಲಿಗ ಸಮುದಾಯಕ್ಕೆ ಪ್ರಾತಿನಿಧ್ಯ ನೀಡಿಲ್ಲ. ಜೊತೆಗೆ ಮಂಡ್ಯದಿಂದ ವಸತಿ ಸಚಿವ ಅಂಬರೀಶ್ ಅವರ ಬದಲಿಗೆ ಚನ್ನಪಟ್ಟಣದಿಂದ ಯೋಗೇಶ್ವರ್ ಅವರನ್ನು ಸಂಪುಟಕ್ಕೆ ಸೇರಿಸಲು ಒಂದು ಬಣ ಬೆಂಬಲ ವ್ಯಕ್ತಪಡಿಸಿದೆ. ಆದರೆ, ಒಕ್ಕಲಿಗ ಕೋಟಾದ ಮಾಜಿ ಸಂಸದೆ ರಮ್ಯಾ ಅವರನ್ನು ತಡವಾಗಿ ಸಂಪುಟಕ್ಕೆ ಸೇರಿಸಿಕೊಳ್ಳುವ ಯತ್ನಗಳು ನಡೆದಿರುವ ಹಿನ್ನಲೆಯಲ್ಲಿ ಯೋಗೇಶ್ವರ್ ಅವರ ಆತ್ಮವಿಶ್ವಾಸಕ್ಕೆ ಧಕ್ಕೆ ಉಂಟಾಗುವ ಬೆಳವಣಿಗೆಗಳು ನಡೆದರೂ ಅಚ್ಚರಿ ಪಡಬೇಕಾಗಿಲ್ಲ.[ವಿಜಯನಗರ ಮೆಟ್ರೋ ನಿಲ್ದಾಣಕ್ಕೆ ನುಗ್ಗಿದ ಕೃಷ್ಣಪ್ಪ ಬೆಂಬಲಿಗರು]
ಖಾಸಗಿ ಟೌನ್ಶಿಪ್ ನಿವೇಶನ ಹಂಚಿಕೆ ಹಗರಣದಲ್ಲಿ ಸಿಲುಕಿದ್ದ ವೇಳೆಯಲ್ಲೇ ಬಿಎಸ್ ಯಡಿಯೂರಪ್ಪ ಅವರ ಸಂಪುಟದಲ್ಲಿ ಸಚಿವರಾಗುವ ಭಾಗ್ಯ ಕಂಡಿದ್ದ ಯೋಗೇಶ್ವರ್ ಅವರು ಮಧ್ಯದಲ್ಲಿ 'ಸೈಕಲ್ ' ಸವಾರಿ ಮಾಡಿ ಸಮಾಜವಾದಿ ಎನಿಸಿಕೊಳ್ಳಲು ಯತ್ನಿಸಿದ್ದರು. ಆದರೆ, ನಂತರ ಕಾಂಗ್ರೆಸ್ ಗೆ ಮರಳಿದ್ದನ್ನು ಇಲ್ಲಿ ಸ್ಮರಿಸಬಹುದು.
-
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
Good Friday: ಗುಡ್ ಫ್ರೈಡೇ - ಈಸ್ಟರ್ ರಜೆ ಸ್ಪೆಷಲ್: ಬೆಂಗಳೂರು – ಮಡಗಾಂವ್ ನಡುವೆ ವಿಶೇಷ ರೈಲು ಸೇವೆ ಆರಂಭ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ -
Bagalkote: ಮನೆಗೆ ಯಾರನ್ನೂ ಸೇರಿಸದ ವೀರಣ್ಣ ಚರಂತಿಮಠ ಶಾಸಕರಾಗಲೂ ಲಾಯಕ್ಕಾ?: ಸಿದ್ದರಾಮಯ್ಯ -
Price Hike: ಏಪ್ರಿಲ್ 1ರಿಂದ ಜನಸಾಮಾನ್ಯರಿಗೆ ಬೆಲೆ ಏರಿಕೆ ಶಾಕ್: ವಿದ್ಯುತ್, ನೀರು, ಟೋಲ್ ದರ ಸೇರಿ ಏನೆಲ್ಲ ದುಬಾರಿ? -
ಮಾರ್ಚ್ 31ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Gold Price: ದಿಢೀರ್ ಏರಿಕೆ ಕಂಡ ಚಿನ್ನದ ದರ: ಪ್ರತಿ ಗ್ರಾಂಗೆ 14,929 ರೂಪಾಯಿ, ಕೆ.ಜಿಗೆ 2.5 ಲಕ್ಷ ರೂ. ತಲುಪಿದ ಬೆಳ್ಳಿ -
Kannada: ಕರ್ನಾಟಕದಲ್ಲಿರುವ ಬ್ಯಾಂಕ್ಗಳಲ್ಲಿ ಸ್ಪಷ್ಟ ಕನ್ನಡ; ತುಳು, ಕೊಂಕಣಿ ಭಾಷೆಯ ಕಲರವ ಈಗ ಉಳಿದಿಲ್ಲ: ಕವಿರಾಜ್












Click it and Unblock the Notifications