ಸಿಗಂದೂರು ಸೇತುವೆಗಾಗಿ ಹಠಾತ್ ಹರತಾಳ ನಡೆಸಿದ ಶಾಸಕ ಹರತಾಳು ಹಾಲಪ್ಪ
ಬೆಂಗಳೂರು, ನವೆಂಬರ್ 15: ಸಿಗಂದೂರು ಸೇತುವೆ ನಿರ್ಮಾಣದ ಕುರಿತು ಕರ್ನಾಟಕ ವಿದ್ಯುತ್ ನಿರಪೇಕ್ಷಣಾ ಪತ್ರ ನೀಡುವಲ್ಲಿ ಅನುಸರಿಸುತ್ತಿರುವ ವಿಳಂಬದ ವಿರುದ್ಧ ಸಾಗರ ಶಾಸಕ ಹರತಾಳು ಹಾಲಪ್ಪ ಬೆಂಗಳೂರಿನ ಶಕ್ತಿಸೌಧದ ಮುಂಭಾಗ ಗುರುವಾರ ಪ್ರತಿಭಟನೆ ನಡೆಸಿದರು.
ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸೇತುವೆ ನಿರ್ಮಾಣ ಸಂಬಂಧ ಕರ್ನಾಟಕ ವಿದ್ಯುತ್ ನಿಗಮ ತಕ್ಷಣ ನಿರಪೇಕ್ಷಣಾ ಪತ್ರ ನೀಡದಿದ್ದರೆ ಲಿಂಗನಮಕ್ಕಿ, ಜೋಗ, ಸಾಗರ ಕೆಪಿಸಿಯನ್ನು ಬಂದ್ ಮಾಡುವ ಮೂಲಕ ಬೃಹತ್ ಪ್ರತಿಭಟನೆ ನಡೆಸಲಾಗುವುದು ಎಂದು ಎಚ್ಚರಿಕೆ ನೀಡಿದರು.
ಕೆಪಿಸಿಯ ಬಳಿ ಈ ಕುರಿತು ಹಲವು ಬಾರಿ ಮನವಿ ಮಾಡಿದ್ದರೂ ಯಾವುದೇ ಪ್ರಯೋಜನವಾಗಿಲ್ಲ, ಇದುವರೆಗೂ ನಿರಪೇಕ್ಷಣ ಪತ್ರ ನೀಡಿಲ್ಲ, ಅಧಿಕಾರಿಗಳು ನಿರ್ಲಕ್ಷ್ಯ ಧೋರಣೆ ಅನಸುರಿಸುತ್ತಿದ್ದಾರೆ ಎಂದು ದೂರಿದರು.

ಪ್ರಸಿದ್ಧ ಧಾರ್ಮಿಕ ಕ್ಷೇತ್ರ ಸಿಗಂದೂರಿಗೆ ಸಂಪರ್ಕ ಕಲ್ಪಿಸುವ ಸೇತುವೆ ಕಾಮಗಾರಿಗೆ ಕೇಂದ್ರ ಭೂ ಸಾರಿಗೆ ಸಚಿವ ನಿತೀನ್ ಗಡ್ಕರಿ ಚಾಲನೆ ನೀಡಿದ್ದರು. ಈ ಸೇತುವೆ ನಿರ್ಮಾಣಕ್ಕೆ 7 ಸಾವಿರ ಕೋಟಿ ವೆಚ್ಚವಾಗುತ್ತದೆ.ಸೇತುವೆ ಹೇಗಿರುತ್ತದೆ, ಪ್ಲಾನಿಂಗ್ ಏನು: ಅಂಬಾರಗೋಡ್ಲು-ಕಳಸವಳ್ಳಿ ಮಧ್ಯೆ 2.16 ಕಿ,ಮೀ ಉದ್ದದ ಸೇತುವೆ ನಿರ್ಮಾಣವಾಗಲಿದೆ.
ಇನ್ನು, ಸೇತುವೆ ನಿರ್ಮಾಣಕ್ಕೆ2 ಮೀಟರ್ ಸುತ್ತಳತೆಯ , 40 ಮೀಟರ್ ಎತ್ತರದ 21 ಪಿಲ್ಲರ್ ಹಾಕಲಾಗುತ್ತಿದೆ. ಇದರ ಮೇಲೆ16 ಮೀಟರ್ ಅಗಲದ ಸೇತುವೆ ನಿರ್ಮಿಸಲಾಗುತ್ತದೆ. ವಿಶೇಷ ಎಂದರೆ ಸೇತುವೆ ಎರಡೂ ಬದಿಯಲ್ಲಿ 1.50 ಮೀಟರ್ ಅಗಲದ ಫುಟ್ ಪಾತ್ ಗಳಿರಲಿವೆ.
ಇದಿಷ್ಟೇ ಅಲ್ಲ, ತೂಗು ಸೇತುವೆ ಮಾದರಿಯಲ್ಲಿ ಪ್ರತಿ ಪಿಲ್ಲರ್ ಗೂ ಕಬ್ಬಿಣದ ರೋಪ್ ಗಳನ್ನು ಕಟ್ಟಲಾಗುತ್ತದೆ. ಇದು ಸಿಗಂದೂರು ಸೇತುವೆಯ ಲುಕ್ ಹೆಚ್ಚಿಸಲಿದೆ. ಅಲ್ಲದೆ, ಸೇತುವೆ ಸಮತೋಲನದಿಂದ ಇರುವಂತೆ ನೋಡಿಕೊಳ್ಳುತ್ತದೆ.
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Gold Rate Today: ಸತತ ನಾಲ್ಕನೇ ದಿನವು ಚಿನ್ನ-ಬೆಳ್ಳಿ ದರ ಭರ್ಜರಿ ಇಳಿಕೆ, ಇಂದಿನ ದರವೆಷ್ಟು? -
ಆರ್ಸಿಬಿಗೆ ಚಾರ್ಟರ್ಡ್ ಫ್ಲೈಟ್ ಸೌಲಭ್ಯದ ಬೇಡಿಕೆ ಆರೋಪ: ಒಂದೇ ಎಮೋಜಿ ಹಾಕಿ ಕಿಂಗ್ ಕೊಹ್ಲಿ ಸಷ್ಟನೆ -
Devanahalli accident: ದೇವನಹಳ್ಳಿ ಬಳಿ ಭೀಕರ ಅಪಘಾತ: ಕಾಶಿಯಾತ್ರೆಗೆ ಹೊರಟಿದ್ದ ತಿಪಟೂರಿನ ಮೂವರು ಮಹಿಳೆಯರು ಸಾವು -
March 22 Horoscope: ಇಂದು ನಿಮ್ಮ ಧನ, ಆರೋಗ್ಯ, ಉದ್ಯೋಗದ ಭವಿಷ್ಯ ಹೇಗಿದೆ?












Click it and Unblock the Notifications