ಶಾಸಕ ಹ್ಯಾರಿಸ್ ಪುತ್ರ ನಲಪಾಡ್ ಕೊನೆಗೂ ಪೊಲೀಸರಿಗೆ ಶರಣು
Recommended Video
ಬೆಂಗಳೂರು, ಫೆಬ್ರವರಿ 19 : ಶಾಂತಿನಗರ ಶಾಸಕ ಎನ್.ಎ. ಹ್ಯಾರಿಸ್ ಮಗ ಮೊಹಮ್ಮದ್ ನಲಪಾಡ್ ಗೂಂಡಾಗಿರಿ ಪ್ರಕರಣಕ್ಕೆ ಸಂಬಂಧಿಸಿದಂತೆ ನಲಪಾಡ್ ಕಬ್ಬನ್ ಪಾರ್ಕ್ ಪೊಲೀಸರಿಗೆ ಶರಣಾಗಿದ್ದಾನೆ. ಸತತ 37 ಗಂಟೆ ನಲಪಾಡ್ ಗಾಗಿ ಪೊಲೀಸರು ಹುಡುಕಾಟ ನಡೆಸಿದ್ದರು.
ನನ್ನ ಮಗ ಪೊಲೀಸರಿಗೆ ಶರಣಾಗುತ್ತಾನೆ ಎಂದ ಶಾಸಕ ಹ್ಯಾರಿಸ್
ಫೆ.17 ರಂದು ಹಲ್ಲೆ ನಡೆಸಿ ನಾಪತ್ತೆಯಾಗಿದ್ದ ನಲಪಾಡ್ ಇಂದು ಖುದ್ದು ಪೊಲೀಸರಿಗೆ ಶರಣಾಗಿದ್ದಾನೆ. ಕಾನೂನಿಗಿಂತ ದೊಡ್ಡವರು ಯಾರೂ ಇಲ್ಲ. ಈ ರೀತಿ ಮಾಡಲು ಅವನಿಗೆ ಅವಕಾಶ ನೀಡಿರಲಿಲ್ಲ. ನನ್ನ ಮಗನ ಕೃತ್ಯದಿಂದಾಗಿ ನನಗೂ ನೋವಿದೆ. ಇದರಲ್ಲಿ ನನ್ನ ಪಾತ್ರವಿಲ್ಲ. ಇದಕ್ಕೂ ನನಗೂ ಸಂಬಂಧವಿಲ್ಲ. ನಾನು ತಪ್ಪು ಮಾಡಿಲ್ಲ, ತಪ್ಪು ಮಾಡಲು ಅವಕಾಶವನ್ನು ನೀಡಿಲ್ಲ ಎಂದಿದ್ದರು.
ನಿನ್ನೆ ರಾತ್ರಿ ಮೊಹಮ್ಮದ್ ನಲಪಾಡ್ ಅವರ ತಾಯಿಯೊಂದಿಗೆ ಮಾತನಾಡಿದ್ದಾರೆ, ಇಂದು ಪೊಲೀಸರಿಗೆ ಶರಣಾಗಲು ಸೂಚಿಸಿದ್ದೇನೆ. ಪೊಲೀಸರು ಕಾನೂನಿನ ಪ್ರಕಾರ ಕರಮ ಕೈಗೊಳ್ಳಬಹುದು. ಯಾರೇ ತಪ್ಪು ಮಾಡಿದರೂ ಕೂಡ ಅದು ತಪ್ಪು. ಜವಾಬ್ದಾರಿ ಸ್ಥಾನದಲ್ಲಿದ್ದು ಕಾನೂನು ಪಾಲಿಸುತ್ತಿದ್ದೇನೆ ಆದರೆ ನಾನೇ ತಪ್ಪು ಮಾಡಿರುವ ರೀತಿಯಲ್ಲಿ ಬಿಂಬಿಸಲಾಗುತ್ತಿದೆ ಎಂದಿದ್ದರು. ಮೊಹಮ್ಮದ್ ನಲಪಾಡ್ ಮೇಲೆ ಐಪಿಸಿ 506 ದೂರು ದಾಖಲಿಸಲಾಗಿದೆ ಹಾಕಲಾದ ಗೂಂಡಾಗಿರಿ ಪ್ರಕರಣವು ಬೇಲೇಬಲ್ ಪ್ರಕರಣವಾಗಿದೆ.