ಮಾದಕ ದ್ರವ್ಯ ವ್ಯಸನದಿಂದ ಮಗನ ಹೊರತಂದ ಕಷ್ಟ ಹೇಳಿಕೊಂಡ ಶಾಸಕ
ಬೆಂಗಳೂರು, ಜುಲೈ 13: ನಗರದ ಜೈನ್ ಕಾಲೇಜಿನಲ್ಲಿ ಓದುತ್ತಿದ್ದ ಶಾಸಕ ಕಳಕಪ್ಪ ಬಂಡಿ ಅವರ ಮಗ ಮಾದಕ ದ್ರವ್ಯ ವ್ಯಸನಕ್ಕೆ ಸಿಕ್ಕಿದ್ದ. ಆತನನ್ನು ವ್ಯಸನದಿಂದ ಹೊರತರಲು ತಾವು ತಮ್ಮ ಕುಟುಂಬ ಪಟ್ಟ ಕಷ್ಟಗಳನ್ನು ಅವರು ಸದನದ ಮುಂದೆ ಹೇಳಿಕೊಂಡರು.
ಸದನದಲ್ಲಿ ಇಂದು ಮಾದಕ ದ್ರವ್ಯ ಜಾಲದ ಬಗ್ಗೆ ಗಹನವಾದ ಚರ್ಚೆ ನಡೆಯಿತು. ಬಿಜೆಪಿಯ ಆರ್.ಅಶೋಕ್ ಎತ್ತಿದ ಚರ್ಚೆಗೆ ಪಕ್ಷಾತೀತರಾಗಿ ಶಾಸಕರು ಬೆಂಬಲ ಸೂಚಿಸಿದರು. ಇದೇ ಸಮಯದಲ್ಲಿ ಶಾಸಕ ಕಳಕಪ್ಪ ಸಹ ತಮ್ಮ ಕುಟುಂಬದ್ದೇ ಉದಾಹರಣೆಯನ್ನು ಹಂಚಿಕೊಂಡರು.
ಬಿಜೆಪಿಯ ಸುರೇಶ್ ಕುಮಾರ್, ಅರವಿಂದ ಲಿಂಬಾವಳಿ, ಕಾಂಗ್ರೆಸ್ನ ಎನ್.ಎ.ಹ್ಯಾರಿಸ್, ಇನ್ನೂ ಹಲವರು ಮಾದಕ ದ್ರವ್ಯ ಜಾಲ ಹರಡುತ್ತಿರುವ ಬಗ್ಗೆ ಹಾಗೂ ಅದರಿಂದಾಗುವ ವ್ಯಾಪಕ ಹಾನಿಯ ಬಗ್ಗೆ ಸದನದ ಗಮನ ಸೆಳೆದರು.
ಇವುಗಳಲ್ಲಿ ಅತಿ ಗಮನ ಸೆಳೆದದ್ದು ರೋಣದ ಬಿಜೆಪಿ ಶಾಸಕ ಕಳಕಪ್ಪ ಬಂಡಿ ಹೇಳಿದ ಸ್ವಂತ ಅನುಭವ. ಇವರ ಮಗನೇ ಮಾದಕ ದ್ರವ್ಯ ವ್ಯಸನಕ್ಕೆ ಸಿಕ್ಕಿಬಿಟ್ಟಿದ್ದನಂತೆ.

ಮಾದಕ ದ್ರವ್ಯ ವ್ಯಕ್ತಿಗೆ ಮಾತ್ರವಲ್ಲ ಆತನ ಕುಟುಂಬಕ್ಕೂ ಅತೀವ ಹಿಂಸೆ ನೀಡುತ್ತದೆ ಎಂದು ಅವರು, ಮಾದಕ ದ್ರವ್ಯ ಯುವಕರಿಗೆ ಶಾಪ ಅದನ್ನು ಬೇರು ಸಹಿತ ಕಿತ್ತು ಹಾಕಬೇಕು ಎಂದು ಆಕ್ರೋಶಭರಿತರಾಗಿ ನುಡಿದರು.
-
Viral Video: ತರಗತಿಯಲ್ಲೇ ವಿದ್ಯಾರ್ಥಿನಿಗೆ ಚಾಕೊಲೇಟ್ ಕೊಟ್ಟು ಪ್ರಪೋಸ್; ಚಪ್ಪಲಿ ಏಟು ತಿಂದ ಪ್ರೊಫೆಸರ್ -
Jobs: ರಾಜ್ಯದ ಕಾರಾಗೃಹ ಆಸ್ಪತ್ರೆಗಳಲ್ಲಿ ಖಾಲಿ ಇರುವ ವೈದ್ಯಕೀಯ ಸಿಬ್ಬಂದಿ ಹುದ್ದೆಗಳ ಭರ್ತಿಗೆ ಸರ್ಕಾರದ ಮಹತ್ವದ ಆದೇಶ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
Bengaluru: 50 ವಾರ್ಡ್ಗಳಲ್ಲಿ ಕಸ ವಿಲೇವಾರಿ ಸ್ಥಗಿತ; ವೇತನ ವಿಳಂಬಕ್ಕೆ ಮುನಿದು ಸಾಮೂಹಿಕ ರಜೆ ಹಾಕಿದ ಕಾರ್ಮಿಕರು -
'ಗ್ಯಾರಂಟಿ ಸಮಿತಿ' ಸಿಬ್ಬಂದಿ ಮಾಸಿಕ ವೇತನ ಸರ್ಕಾರದ ಮುಖ್ಯ ಕಾರ್ಯದರ್ಶಿಗಿಂತಲೂ ಹೆಚ್ಚು! ವರ್ಷಕ್ಕೆ ಕೋಟಿ ಕೋಟಿ.. -
ಮಾರ್ಚ್ 25ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಸದನದಲ್ಲಿ ಬಜೆಟ್ ಚರ್ಚೆ: ಸಿಎಂ ಸಿದ್ದರಾಮಯ್ಯ ವಿರುದ್ಧ ಆರೋಪ -
ಮಾರ್ಚ್ 24ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಬೆಂಗಳೂರು ಬಂಗಲೆ ವಿವಾದ: ರಾಜೀವ್ ಚಂದ್ರಶೇಖರ್ ನಾಮಪತ್ರ ಅಂಗೀಕರಿಸಿದ ಚುನಾವಣಾ ಆಯೋಗ -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
Yami Gautam: ಕನ್ನಡದಲ್ಲೇ ಧುರಂಧರ್ ನಿರ್ದೇಶಕನ ಪತ್ನಿ ಯಾಮಿ ಗೌತಮ್ ಮೊದಲ ಸಿನಿಮಾ, ಸ್ಟಾರ್ ಹೀರೋ ಜೊತೆ ಚೊಚ್ಚಲ ನಟನೆ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ?











Click it and Unblock the Notifications