Assembly Election 2023: ಕಾರ್ಯಕರ್ತರಿಗೆ 3ಲಕ್ಷ ರೂ.ಆರೋಗ್ಯ ವಿಮೆ ಮಾಡಿಸಿದ ಕೆಜೆ ಜಾರ್ಜ್
ಮತದಾರರ ಓಲೈಕೆಗಾಗಿ ಹಣ, ಬಟ್ಟೆ, ಗೃಹೋಪಯೋಗಿ ಉಪಕರಣ ನೀಡುವುದು ಸರ್ವೇ ಸಾಮಾನ್ಯ. ಆದರೆ ಕಾಂಗ್ರೆಸ್ನ ಹಿರಿಯ ನಾಯಕ ಹಾಗೂ ಬೆಂಗಳೂರು ಸರ್ವಜ್ಞನಗರ ವಿಧಾನಸಭಾ ಕ್ಷೇತ್ರದ ಶಾಸಕ ಕೆ.ಜೆ.ಜಾರ್ಜ್ ಅವರು ಮತದಾರರನ್ನು ಸೆಳೆಯುವ ಸಲುವಾಗಿ ಪಕ್ಷದ ಕಾರ್ಯಕರ್ತರಿಗೆ 3 ಲಕ್ಷ ರೂ.ನ ಆರೋಗ್ಯ ವಿಮೆ ಮಾಡಿಸಿದ್ದು ವಿಶೇಷವಾಗಿದೆ.
ಕಾಂಗ್ರೆಸ್ ನಾಯಕರು ಸೇರಿದಂತೆ ಇನ್ನಿತರ ಪಕ್ಷದ ನಾರಯಕರು ಚುಣಾವಣೆಯ ಐದಾರು ತಿಂಗಳು ಮೊದಲೇ ತೆರೆಮರೆ ಕಸರತ್ತು ನಡೆಸಿದ್ದಾರೆ. ಈ ಮೂಲಕ ಟಿಕೆಟ್ ಆಕಾಂಕ್ಷಿಗಳು, ಕಾರ್ಯಕರ್ತರು, ನಾಯಕರು ಸಕ್ರಿಯರಾಗುತ್ತಿದ್ದಾರೆ. ಈ ನಿಟ್ಟಿನಲ್ಲಿ ಶಾಸಕ ಕೆ.ಜೆ. ಜಾರ್ಜ್ ಸರ್ವಜ್ಞನಗರ ವಿಧಾನಸಭಾ ಕ್ಷೇತ್ರದಲ್ಲಿ ಮೊದಲ ಹಂತದಲ್ಲಿ 3ಲಕ್ಷ ರೂ.ನ ಆರೋಗ್ಯ ವಿಮೆಯ ಕಾರ್ಡ್ಗಳನ್ನು ಮಾಡಿದ್ದಾರೆ.
ಸದ್ಯ 300ಕ್ಕೂ ಅಧಿಕ ಬೂತ್ ಅಧ್ಯಕ್ಷರು, ಪಕ್ಷದ ಮುಂಚೂಣಿ ಘಟಕ ಸದಸ್ಯರು, ಬೂತ್ ಮಟ್ಟದ ಏಜೆಂಟರ್ 600 ಮಂದಿ ಹಾಗೂ ಇತರ ಸಮಿತಿಗಳ 350 ಕ್ಕೂ ಅಧಿಕ ಜನರು ಸೇರಿದಂತೆ ಒಟ್ಟು 1060 ಕಾರ್ಡ್ಗಳನ್ನು ವಿತರಿಸಲು ನಿರ್ಧರಿಸಲಾಗಿದೆ. ಅದರಲ್ಲಿ 400 ಕಾರ್ಯಕರ್ತರಿಗೆ ಈಗಾಗಲೇ ಆರೋಗ್ಯ ವಿಮೆ ಕಾರ್ಡ್ ಹಂಚಿಕೆಯಾಗಿದೆ ಎಂದು ಶಾಸಕರ ಆಪ್ತ ವಲಯಗಳು ತಿಳಿಸಿವೆ.

ಶಾಸಕರು ರಿಲಯನ್ಸ ಇನ್ಶುರೆನ್ಸ ಕಂಪನಿಯ ಗ್ರೂಪ್ ಹೆಲ್ತ್ ಇನ್ಶುರೆನ್ಸ ಯೋಜನೆಯಡಿ ಆರೋಗ್ಯ ವಿಮೆ ಪ್ರೀಮಿಯಂ ಹಣ ಸ್ವತಃ ಅವರೇ ಭರಿಸಲಿದ್ದಾರೆ. ಹೆಸರು, ಜನ್ಮದಿನಾಂಕ, ಮೊಬೈಲ್ ಸಂಖ್ಯೆ ಇನ್ನಿತರ ಅಗತ್ಯ ದಾಖಲೆ ಪಡೆದು ಕಂಪನಿಯು ಕಾಂಗ್ರೆಸ್ ಕಾರ್ಯಕರ್ತರಿಗೆ ಆರೋಗ್ಯ ವಿಮೆ ಮಾಡುತ್ತಿದೆ. ಕೆ.ಜೆ.ಜಾರ್ಜ್ ಅವರು 2008ರಲ್ಲಿ ಅಸ್ತಿತ್ವಕ್ಕೆ ಬಂದ ಸರ್ವಜ್ಞನಗರ ವಿಧಾನಸಭಾ ಕ್ಷೇತ್ರದಿಂದ ಇದುವರೆಗೆ ಮೂರು ಶಾಸಕರಾಗಿ ಆಯ್ಕೆಯಾಗಿದ್ದಾರೆ. ಮುಂಬರಲಿರುವ 2023ರ ಚುನಾವಣೆಯಲ್ಲಿ ಸ್ವಕ್ಷೇತ್ರದಿಂದಲೇ ಪುನಃ ಸ್ಪರ್ಧಿಸುವ ಸಾಧ್ಯತೆ ಇದೆ ಎನ್ನಲಾಗಿದೆ.
-
ಸದನದಲ್ಲಿ ಬಜೆಟ್ ಚರ್ಚೆ: ಸಿಎಂ ಸಿದ್ದರಾಮಯ್ಯ ವಿರುದ್ಧ ಆರೋಪ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು?












Click it and Unblock the Notifications