ಮಗನ ಅಟ್ಟಹಾಸಕ್ಕೆ ಅಪ್ಪನ ಕ್ಷಮಾಪಣೆ ಪತ್ರ
Recommended Video

ಬೆಂಗಳೂರು, ಫೆಬ್ರವರಿ 20: ನಗರದ ಶಾಂತಿನಗರ ಕ್ಷೇತ್ರದ ಕಾಂಗ್ರೆಸ್ ಶಾಸಕ ಎನ್.ಎ.ಹ್ಯಾರಿಸ್ ಅವರ ಪುತ್ರ ಮೊಹಮ್ಮದ್ ಹ್ಯಾರಿಸ್ ನಲಪಾಡ್ ಅವರ ಕುಕೃತ್ಯಕ್ಕೆ ಶಾಸಕ ಹ್ಯಾರಿಸ್ ಬಹಿರಂಗ ಕ್ಷಮಾಪಣಾ ಪತ್ರ ಬರೆದಿದ್ದಾರೆ.
ತಮ್ಮ ಮಗ ಮೊಹಮ್ಮದ್, ಯುಬಿ ಸಿಟಿ ಬಳಿ ವಿದ್ವತ್ ಎಂಬ ಯುವಕನ ಮೇಲೆ ಹಲ್ಲೆ ಮಾಡಿದ ಘಟನೆಯನ್ನು ದುರಾದೃಷ್ಟಕರ ಎಂದು ಪತ್ರದಲ್ಲಿ ಬಣ್ಣಿಸಿರುವ ಅವರು 'ವಿದ್ವತ್ ಹಾಗೂ ಅವರ ಪೋಷಕರಲ್ಲಿ ನಾನು ಮತ್ತೊಮ್ಮೆ ಕ್ಷಮೆ ಕೇಳುತ್ತೇನೆ' ಎಂದಿದ್ದಾರೆ.
''9.9 ವರ್ಷದಿಂದ ನಾನು ನನ್ನ ಕ್ಷೇತ್ರಕ್ಕೆ ಸೇವೆ ಮಾಡುತ್ತಾ ಬಂದಿದ್ದೇನೆ, ಕಾನೂನು ಎಲ್ಲರಿಗೂ ಒಂದೇ, ನನ್ನ ಮಗನಿಗೆ ಯಾವುದೇ ವಿನಾಯಿತಿ ಇಲ್ಲ' ಎನ್ನುವ ಮೂಲಕ ತಮ್ಮ ಮಗನನ್ನು ವಹಿಸಿಕೊಳ್ಳುವುದರಿಂದ ಹಿಂದೆ ಸರಿದಿದ್ದಾರೆ.

'ಶನಿವಾರ ರಾತ್ರಿ ನಡೆದ ಘಟನೆ ಸಂಪೂರ್ಣ ದುರಾದೃಷ್ಟಕರ ಆ ರೀತಿಯ ಘಟನೆ ನಡೆಯಬಾರದಿತ್ತು, ನಾನು ನನ್ನ ಮಗನನ್ನು ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ಶರಣಾಗುವಂತೆ ಮಾಡಿದ್ದೇನೆ, ಆದರೂ ಕೆಲವು ಮಾಧ್ಯಮಗಳು ಈ ಘಟನೆಯನ್ನು ಇಟ್ಟುಕೊಂಡು ನನ್ನ ಸಾರ್ವಜನಿಕ ಜೀವನವನ್ನು ಮುಕ್ತಾಯ ಮಾಡಲು ಪ್ರಯತ್ನಿಸುತ್ತಿವೆ' ಎಂದು ಮಾಧ್ಯಮಗಳ ಮೇಲೆ ಬೇಸರ ವ್ಯಕ್ತಪಡಿಸಿದ್ದಾರೆ.
'ಕಾನೂನು ಎಲ್ಲರಿಗೂ ಒಂದೇ ಮತ್ತು ನನ್ನ ಪುತ್ರನ ಪ್ರಕರಣದಲ್ಲಿ ನಾನೂ ಸೇರಿದಂತೆ ನನ್ನ ಕುಟುಂಬ ಪ್ರಕರಣದ ತನಿಖೆಗೆ 100% ಸಹಕಾರ ನೀಡುತ್ತೇವೆ' ಎಂದು ಅವರು ಪತ್ರದಲ್ಲಿ ಭರವಸೆ ನೀಡಿದ್ದಾರೆ.
'ಈ ಕೆಟ್ಟ ಸಮಯದಲ್ಲಿ ನನ್ನ ಬೆನ್ನಿಗೆ ನಿಂತವರು ಹಾಗೂ ಈಗಲೂ ನನಗೆ ಬೆಂಬಲಿಸುತ್ತಿರುವ ಜನರಿಗೆ ಅಗಣಿತ ಧನ್ಯವಾದಗಳನ್ನು ಅರ್ಪಿಸುತ್ತೇನೆ' ಎಂದು ಹ್ಯಾರಿಸ್ ಅವರು ಪತ್ರದಲ್ಲಿ ಬರೆದಿದ್ದಾರೆ.
ಮೊಹಮ್ಮದ್ ಹ್ಯಾರಿಸ್ ನಲಪ್ಪಾಡ್ ಹಾಗೂ ಅವರ ಗೆಳೆಯರನ್ನು ಇಂದು ಸ್ಥಳಕ್ಕೆ ಕರೆದುಕೊಂಡು ಹೋಗಿ ಮಹಜರ್ ಮಾಡುತ್ತಲಿದ್ದು, ಇಂದಿನಿಂದ ವಿಚಾರಣೆ ಪ್ರಾರಂಭವಾಗಲಿದೆ.
-
National Highway: ಕರ್ನಾಟಕದ ನಾಲ್ಕು ಪ್ರಮುಖ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಬಗ್ಗೆ ಮಹತ್ವದ ಮಾಹಿತಿ ಹಂಚಿಕೊಂಡ ನಿತಿನ್ ಗಡ್ಕರಿ -
Karnataka Weather: ಸಿಲಿಕಾನ್ ಸಿಟಿಯಲ್ಲಿ ಹೆಚ್ಚಿದ ತಾಪಮಾನ; ಕರಾವಳಿ, ಮಲೆನಾಡಿನಲ್ಲಿ ಇಂದು ಮಳೆಯಾಗುವ ಸಾಧ್ಯತೆ -
LPG Crisis: ಎಲ್ಪಿಜಿ ಬಿಕ್ಕಟ್ಟಿನ ಸುಳಿಯಲ್ಲಿ ಭಾರತದ ಪ್ರಮುಖ ನಗರಗಳು: ದರ್ಶಿನಿಗಳು ಬಂದ್, ಪಿಜಿಗಳಲ್ಲಿ ಮೆನು ಚೇಂಜ್ -
Karnataka Weather: ರಾಜ್ಯವನ್ನು ಸುಡುತ್ತಿದೆ ರಣಬಿಸಿಲು; ಕರಾವಳಿ, ಮಲೆನಾಡಿಗೆ ಇಂದು ಮಳೆ ಮುನ್ಸೂಚನೆ -
ಇರಾನ್ ಪರಮಾಣು ವಿಜ್ಞಾನಿ ಕಥೆ ಮುಗಿಸಿದ ಇಸ್ರೇಲ್, ಮತ್ತಷ್ಟು ತಿಕ್ಕಾಟ ಶುರು | Operation Roaring Lion -
ಹೊಸೂರು ವಿಮಾನ ನಿಲ್ದಾಣ: ಬೆಂಗಳೂರು ಸಮೀಪ 2,979 ಎಕರೆ ಭೂಮಿ ಸ್ವಾಧೀನ; ಕನ್ನಡದಲ್ಲೇ ಮಾತನಾಡಿದ ತಮಿಳುನಾಡು ಶಾಸಕ -
ಭಾರತೀಯ ಸೇನೆಯನ್ನ ಅಪಹಾಸ್ಯ ಮಾಡಿದ್ದ ಪಾಕ್ ಆಟಗಾರನಿಗೆ 2.34 ಕೋಟಿ ಆಫರ್; ಕಾವ್ಯಾ ಮಾರನ್ ವಿರುದ್ಧ ಭುಗಿಲೆದ್ದ ಆಕ್ರೋಶ -
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
B Khata: ಬಿ ಖಾತಾದಿಂದ ಎ ಖಾತಾ ಪರಿವರ್ತನೆ ಸವಾಲುಗಳು: ವೆಚ್ಚ, ಪ್ರಕ್ರಿಯೆ ಸ್ವಂತ ವಿವರ ಹಂಚಿಕೊಂಡ ಆಸ್ತಿದಾರ ಶ್ರೀನಿವಾಸ ಮಠ -
Rain in Karnataka: ಬಿರು ಬಿಸಿಲಿನ ನಡುವೆ ಬೆಂಗಳೂರು ಸೇರಿ ಕರ್ನಾಟಕದ ಈ ಜಿಲ್ಲೆಗಳಲ್ಲಿ ನಾಲ್ಕು ದಿನ ಮಳೆ: ಐಎಂಡಿ ರಿಪೋರ್ಟ್ -
ವಿಶ್ವಕಪ್ ಕಿರೀಟದ ಹಿಂದೆ ದೈವಬಲ: ಕರಾವಳಿಯ ಅಳಿಯ ಸೂರ್ಯಕುಮಾರ್ ಯಾದವ್ ನಡೆಗೆ ಮೆಚ್ಚುಗೆಗಳ ಸುರಿಮಳೆ











Click it and Unblock the Notifications