ಬಿಇಎಂಎಲ್ ಖಾಸಗೀಕರಣ ವಿರೋಧಿಸಿ ಸದನದಲ್ಲಿ ಹೋರಾಟ: ಶಾಸಕ ಎನ್ ಎ ಹ್ಯಾರಿಸ್
ಬೆಂಗಳೂರು ಫೆಬ್ರವರಿ 22: ಬೆಂಗಳೂರಿಗೆ ಖ್ಯಾತಿ ತಂದಿರುವ ಹಾಗೂ ಲಾಭದಾಯಕ ಸಾರ್ವಜನಿಕ ಉದ್ಯಮವಾಗಿರುವ ಬಿಇಎಂಎಲ್ ಖಾಸಗೀಕರಣವನ್ನು ವಿರೋಧಿಸಿ ಮುಂದಿನ ಅಧಿವೇಶನದಲ್ಲಿ ಕೆಪಿಸಿಸಿ ಅಧ್ಯಕ್ಷರ ನೇತೃತ್ವದಲ್ಲಿ ಧ್ವನಿ ಎತ್ತುವುದಾಗಿ ಶಾಂತಿನಗರ ಶಾಸಕ ಎನ್ ಎ ಹ್ಯಾರಿಸ್ ಹೇಳಿದ್ದಾರೆ.
ಬೆಂಗಳೂರಿನ ಬಿಇಎಂಎಲ್ ಎದುರು ನಡೆದ ದ್ವಾರ ಸಭೆ ಪ್ರತಿಭಟನೆಯಲ್ಲಿ ಭಾಗಿಯಾಗಿ ಬೆಂಬಲ ಸೂಚಿಸಿ ಮಾತನಾಡಿದ ಶಾಸಕ ಎನ್ ಎ ಹ್ಯಾರಿಸ್, ದೇಶದಲ್ಲಿ ಉದ್ಯೋಗಾವಕಾಶಗಳು ಕಡಿಮೆ ಆಗುತ್ತಿವೆ. ಇರುವ ಉದ್ಯೋಗಗಳನ್ನು ಉಳಿಸಿಕೊಂಡು ಜೀವನ ನಿರ್ವಹಿಸಲು ಪರದಾಡಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ. ದಿನೇ ದಿನೇ ಹೆಚ್ಚುತ್ತಿರುವ ಬೆಲೆಗಳು ಜನರ ಜೀವನವನ್ನು ದುಸ್ತರಗೊಳಿಸುತ್ತಿವೆ. ರಾಜ್ಯದ ಸುಮಾರು 10 ಸಾವಿರ ಜನರಿಗೆ ಉದ್ಯೋಗ ನೀಡಿರುವ ಹಾಗೂ ದೇಶದ ಪ್ರಮುಖ ಸಾರ್ವಜನಿಕ ಉದ್ಯಮವಾಗಿರುವ ಬಿಇಎಂಎಲ್ ನ್ನು ಖಾಸಗೀಕರಣಗೊಳಿಸುವ ಹಿಂದೆ ಖಾಸಗಿ ಕಂಪನಿಗಳ ಲಾಬಿ ಎದ್ದು ಕಾಣುತ್ತಿದೆ. ಲಾಭದಲ್ಲಿರುವ ಕಾರ್ಖಾನೆಯನ್ನು ಖಾಸಗೀಕರಣಗೊಳಿಸುವುದರ ಮೂಲಕ ದೇಶವನ್ನು ಖಾಸಗಿ ಕಂಪನಿಗಳ ಪಾಲು ಮಾಡಲು ಕೇಂಧ್ರ ಸರಕಾರ ಹೊರಟಿದೆ ಎಂದು ಆರೋಪಿಸಿದರು.
ಕಳೆದ ಹಲವಾರು ವರ್ಷಗಳಿಂದ ಈ ಖಾಸಗೀಕರಣದ ವಿರುದ್ದ ನೌಕರರು ಪ್ರತಿಭಟನೆ ನಡೆಸುತ್ತಾ ಬಂದಿದ್ದೀರಿ. ಈ ಹೋರಾಟಕ್ಕೆ ಕಾಂಗ್ರೆಸ್ ಪಕ್ಷ ಸಂಪೂರ್ಣ ಬೆಂಬಲ ನೀಡಲಿದೆ. ಮುಂಬರುವ ಅಧಿವೇಶನದಲ್ಲಿ ಕೆಪಿಸಿಸಿ ಅಧ್ಯಕ್ಷರಾದ ಡಿ ಕೆ ಶಿವಕುಮಾರ್ ಅವರ ನೇತೃತ್ವದಲ್ಲಿ ಇದರ ವಿರುದ್ದ ಧ್ವನಿ ಎತ್ತುವ ಮೂಲಕ ರಾಜ್ಯ ಹಾಗೂ ಕೇಂದ್ರ ಸರಕಾರದ ಗಮನ ಸೆಳೆಯುವ ಭರವಸೆಯನ್ನು ನೀಡಿದರು.

Recommended Video
ಪ್ರತಿಭಟನೆಯಲ್ಲಿ ಬಿ.ಇ.ಎಂ.ಎಲ್ ಕಾರ್ಮಿಕ ಸಂಘದ ಅಧ್ಯಕ್ಷ ದೊಮ್ಮಲೂರು ಶ್ರೀನಿವಾಸ ರೆಡ್ಡಿ, ಪ್ರಧಾನ ಕಾರ್ಯದರ್ಶಿ ಆರ್ ನಾರಾಯಣ ಸೇರಿದಂತೆ ಸಾವಿರಾರು ಕಾರ್ಮಿಕರು ಪಾಲ್ಗೊಂಡಿದ್ದರು.
-
Abhishek Sharma: 'ಅಭಿಷೇಕ್ ಶರ್ಮಾ ಒಬ್ಬ ಬ್ಲೈಂಡ್ ಸ್ಲಾಗರ್': ರೊಚ್ಚಿಗೆದ್ದ ಅಭಿಮಾನಿಗಳು -
Horoscope March 5: ಇಂದಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ, ಯಾರಿಗೆ ಶುಭ-ಯಾರಿಗೆ ಅಶುಭ -
Jacob Bethell: ಟೀಂ ಇಂಡಿಯಾ ವಿರುದ್ಧ ಸೋತರೂ ಕನ್ನಡಿಗರ ಮನಗೆದ್ದ 22 ವರ್ಷದ ಜೇಕಬ್ ಬೆಥೆಲ್ -
ಬೆಂಗಳೂರಿನಲ್ಲಿ 2ನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ: ಬಜೆಟ್ನಲ್ಲಿ ಹೊಸ ಸುದ್ದಿ ಕೊಟ್ಟ ಸಿಎಂ ಸಿದ್ದರಾಮಯ್ಯ -
ಕರ್ನಾಟಕ ಬಜೆಟ್ 2026: ನಮ್ಮ ಮೆಟ್ರೋ 41 ಕಿ.ಮೀ ಹೆಚ್ಚುವರಿ ಮಾರ್ಗ ಶೀಘ್ರವಾಗಿ ಪೂರ್ಣ -
Bengaluru Viral Tweet: ಹೋಳಿ ಹಬ್ಬ: ಬೆಂಗಳೂರು ಬೋರಿಂಗ್ ಎಂದ ನಾರ್ಥಿ ಯುವತಿ ಟ್ವೀಟ್ ವೈರಲ್: ಕನ್ನಡಿಗರು ಹೇಳಿದ್ದೇನು -
Gold Rate Today: ಕರ್ನಾಟಕದ ಬೆಂಗಳೂರಿನಲ್ಲಿ ಬಂಗಾರ ದರ ಇಳಿಕೆ: ಇಲ್ಲಿದೆ ಮಾರ್ಚ್ 6ರ ದರಪಟ್ಟಿ -
Karnataka Budget 2026 PDF: ಕರ್ನಾಟಕ ಬಜೆಟ್ 2026-27 ಪಿಡಿಎಫ್ ಡಾಕ್ಯುಮೆಂಟ್ ಇಲ್ಲಿ ಡೌನ್ಲೋಡ್ ಮಾಡಿ -
ಸಂಜು ನಿಜವಾದ ಮ್ಯಾಚ್ ವಿನ್ನರ್, ವಿಶ್ವದ ನಂ.1 ಟಿ20 ಬ್ಯಾಟರ್ ಅಭಿಷೇಕ್ ಮೇಲೆ ನಂಬಿಕೆಯಿಡಿ: ರವಿಶಾಸ್ತ್ರಿ ಮಹತ್ವದ ಸಲಹೆ -
KEA: ಯುಜಿಸಿಇಟಿ-ಪಿಜಿನೀಟ್ ಅಭ್ಯರ್ಥಿಗಳ ಗಮನಕ್ಕೆ, ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ -
ಬೆಂಗಳೂರು ಏರ್ಪೋರ್ಟ್ಗೆ ಸತತ 4ನೇ ಬಾರಿಯೂ ವಿಶ್ವದ 'ಅತ್ಯುತ್ತಮ ಏರ್ಪೋರ್ಟ್'ಪ್ರಶಸ್ತಿ -
Karnataka Weather: ಬೆಂಗಳೂರು ಸೇರಿದಂತೆ ಕರ್ನಾಟಕದಾದ್ಯಂತ ಶುಷ್ಕ ಹವೆ, ಮುಂದುವರಿದ ಚಂಡಮಾರುತ ಪ್ರಸರಣ ಮಳೆ ನಿರೀಕ್ಷೆ












Click it and Unblock the Notifications