ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಶಾಂತಿನಗರ ಶಾಸಕ ಹ್ಯಾರೀಸ್ ಪುತ್ರನ ಮೇಲೆ ಹಲ್ಲೆ ಪ್ರಕರಣ

By Mahesh
|
Google Oneindia Kannada News

ಬೆಂಗಳೂರು, ಫೆಬ್ರವರಿ 18 : ಶಾಂತಿನಗರ ಕ್ಷೇತ್ರದ ಶಾಸಕ ಎನ್.ಎ ಹ್ಯಾರೀಸ್ ಅವರ ಪುತ್ರ ಮೊಹಮ್ಮದ್ ನಲಪಾಡ್ ವಿರುದ್ಧ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಮಾಡಿದ ಪ್ರಕರಣ ದಾಖಲಾಗಿದೆ.

ಮಹಮ್ಮದ್ ನಲಪಾಡ್​ ಮತ್ತು ಆತನ ಸ್ನೇಹಿತರು​ ಕ್ಷುಲ್ಲಕ ಕಾರಣಕ್ಕೆ ವಿದ್ವತ್ ಎಂಬಾತನ ಮೇಲೆ ಮಾರಣಾಂತಿಕವಾಗಿ ಹಲ್ಲೆ ನಡೆಸಿದ್ದಾರೆ.

ಶನಿವಾರ ರಾತ್ರಿ 11 ಗಂಟೆಯ ವೇಳೆಗೆ ಯುಬಿಸಿಟಿಯ ಫರ್ಜ್ ಕೆಫೆಯಲ್ಲಿ ವಿದ್ವತ್ ಅವರು ಕಾಲು ಚಾಚಿಕೊಂಡು ಕುಳಿತ್ತಿದ್ದರು. ಕಾಲು ಹಿಂದಕ್ಕೆ ತೆಗೆದುಕೊಳ್ಳುವಂತೆ ಮೊಹಮ್ಮದ್ ನಲಪಾಡ್ ಸಂಗಡಿಗರು ಧಮಕಿ ಹಾಕಿದ್ದಾರೆ.

MLA NA Harris son accused of thrashing man in UB City pub brawl

ಈ ಸಂದರ್ಭದಲ್ಲಿ ವಿದ್ವತ್ ಸಹಾಯಕ್ಕೆ ಸಹೋದರ ಸಾತ್ವಿಕ್​ ಬಂದಿದ್ದಾರೆ. ಮಾತಿಗೆ ಮಾತು ಬೆಳೆದಿದೆ. ವಿದ್ವತ್ ಮೇಲೆ ಏಕಾಏಕಿ ಹಲ್ಲೆ ನಡೆಸಲಾಗಿದೆ. ಪ್ರಜ್ಞೆ ತಪ್ಪಿದ ವಿದ್ವತ್ ನನ್ನು ಮಲ್ಯ ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ, ಆಸ್ಪತ್ರೆಗೂ ಬಂದ ನಲಪಾಡ್ ಸಂಗಡಿಗರು ಮತ್ತೊಮ್ಮೆ ವಿದ್ವತ್​ ಮೇಲೆ ಹಲ್ಲೆ ನಡೆಸಿದ್ದಾರೆ. ತೀವ್ರವಾಗಿ ಅಸ್ವಸ್ಥಗೊಂಡ ವಿದ್ವತ್ ಗೆ, ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಘಟನೆ ಬಳಿಕ ಮಹಮ್ಮದ್​ ನಲಪಾಡ್ ನಾಪತ್ತೆಯಾಗಿದ್ದಾನೆ. ಹಲ್ಲೆ ಪ್ರಕರಣ ದಾಖಲಿಸಿಕೊಂಡಿರುವ ಕಬ್ಬನ್ ಪಾರ್ಕ್ ಠಾಣೆ ಪೊಲೀಸರು ತನಿಖೆ ಮುಂದುವರೆಸಿದ್ದಾರೆ. ಈ ಪ್ರಕರಣದಲ್ಲಿ ನಂ. 1 ಆರೋಪಿಯಾಗಿರುವ ಮಹಮ್ಮದ್​ ನಲಪಾಡ್ ನಾಪತ್ತೆಯಾಗಿದ್ದಾರೆ.

ಡಾಲರ್ಸ್ ಕಾಲೋನಿ ನಿವಾಸಿ, ಉದ್ಯಮಿ ಲೋಕನಾಥ್ ಅವರ ಪುತ್ರ ವಿದ್ವತ್ ಅವರು ಇತ್ತೀಚೆಗೆ ಸಿಂಗಪುರದಲ್ಲಿ ಪದವಿ ಪಡೆದು, ಬೆಂಗಳೂರಿಗೆ ವಾಪಸ್ ಆಗಿದ್ದರು.

English summary
Bengaluru: Shanthinagar Congress MLA NA Harris's Son Mohammad Nalapad and his friends attacked a youth at UB city, Bengaluru. Nalapad and gang then again assualted youth named Vidwath at Mallya Hospital; FIR Registered at Cubbon Park Station.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X