ರಾಮಲಿಂಗಾರೆಡ್ಡಿಗೆ ತಪ್ಪಿದ ಸಚಿವ ಸ್ಥಾನ, ಸೌಮ್ಯ ರೆಡ್ಡಿ ಅಸಮಾಧಾನ
Recommended Video

ಬೆಂಗಳೂರು, ಡಿಸೆಂಬರ್ 22: ಮಾಜಿ ಸಚಿವ ರಾಮಲಿಂಗಾರೆಡ್ಡಿಗೆ ಸಚಿವ ಸ್ಥಾನ ಕೈತಪ್ಪಿರುವ ಕಾರಣ ಪುತ್ರಿ, ಶಾಸಕಿ ಸೌಮ್ಯ ರೆಡ್ಡಿ ತಮ್ಮ ಅಸಮಾಧಾನ ಹೊರಹಾಕಿದ್ದಾರೆ.
ಇಂದು ನಡೆಯಲಿರುವ ಸಂಪುಟ ವಿಸ್ತರಣೆ ಅಥವಾ ಸಂಪುಟ ಪುನರಚನೆಯಲ್ಲಿ ರಾಮಲಿಂಗಾರೆಡ್ಡಿಗೆ ಸಚಿವ ಸ್ಥಾನಸೊಗದಿರುವುದಕ್ಕೆ ಟ್ವಿಟ್ಟರ್ನಲ್ಲಿ ತಮ್ಮ ಅಸಮಾಧಾನ ಹೇಳಿಕೊಂಡಿದ್ದಾರೆ.
ಕಾಂಗ್ರೆಸ್ ಪಕ್ಷ ನನಗೆ ಜಯನಗರ ವಿಧಾನಸಭಾ ಕ್ಷೇತ್ರದಿಂದ ವಿಧಾನಸಭೆಗೆ ಟಿಕೆಟ್ ನೀಡಿ ಜಯನಗರದ ಮತದಾರರು ನನಗೆ ಆಶೀರ್ವದಿಸಿದ್ದಾರೆ. ಜಯನಗರ ವಿಧಾನಸಭಾ ಕ್ಷೇತ್ರವನ್ನು ಮಾದರಿ ಕ್ಷೇತ್ರವನ್ನಾಗಿ ಅಭಿವೃದ್ಧಿ ಮಾಡಬೇಕಿದೆ ಎಂದು ಹೇಳಿದ್ದಾರೆ.
— Sowmya Reddy (@Sowmyareddyr) December 21, 2018
ಅಷ್ಟೇ ಅಲ್ಲದೆ ನನಗೆ ಯಾವ ರೀತಿಯ ಪಾರ್ಲಿಮೆಂಟ್ ಸೆಕ್ರೆಟರಿ ಅಥವಾ ಯಾವುದೇ ರೀತಿಯ ಹುದ್ದೆ ಬೇಡ, ಸದ್ಯಕ್ಕೆ ಕಾಂಗ್ರೆಸ್ ಪಕ್ಷಕ್ಕೆ ದುಡಿದಿರುವವರಿಗೆ ಸ್ವಲ್ಪ ಹಿಂದೇಟು ಆಗುವುದು ಒಂದು ರಾಜಕೀಯ ಭಾಗ ಆದರೆ ಈ ರೀತಿ ಪಕ್ಷಕ್ಕೆ ನಿಷ್ಠೆಯಿಂದ ದುಡಿದವರಿಗೆ ಬೇಸರವಾಗುತ್ತದೆ ಎಂದು ಬರೆದುಕೊಂಡಿದ್ದಾರೆ.
ನನಗೆ ನನ್ನ ಕ್ಷೇತ್ರದ ಜನರಿಗೆ ಕೆಲಸ ಮಾಡಿ ಅವರ ಋಣವನ್ನು ತೀರಿಸಬೇಕಾಗಿದೆ. ನನ್ನ ತಂದೆ 2 ಬಾರಿ ಡಿಸಿಸಿ ಅಧ್ಯಕ್ಷರಾಗಿ ಹಾಗೂ 7 ಬಾರಿ ಶಾಸಕರಾಗಿ ಬೆಂಗಳೂರಿನಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಬಹಳ ದುಡಿದಿದ್ದಾರೆ.
ಕೇವಲ ಒಂದು ಶಾಸಕರಿಂದ ಈಗ ಬೆಂಗಳೂರಿನಲ್ಲಿ 15ಕ್ಕೂ ಹೆಚ್ಚು ಶಾಸಕರಿದ್ದಾರೆ. ನಾನು ಅವರನ್ನು ಮಂತ್ರಿಯಾಗಿ ನೋಡಲು ಇಷ್ಟಪಡುತ್ತೇನೆ. ಬೆಂಗಳೂರಿನಲ್ಲಿ ಎಲ್ಲ 28 ಕ್ಷೇತ್ರದಲ್ಲೂ ಕಾಂಗ್ರೆಸ್ ಶಾಸಕರು ಗೆಲ್ಲಲು ಶ್ರಮಿಸಬೇಕಾದ ಅಗತ್ಯ ಇದೆ ಅಂತ ಬರೆದುಕೊಂಡಿದ್ದಾರೆ. ಈ ಪತ್ರವನ್ನು ಕರ್ನಾಟಕ ಕಾಂಗ್ರೆಸ್ ಗೆ ಟ್ಯಾಗ್ ಮಾಡಿದ್ದಾರೆ.
ಸಂಸದೀಯ ಕಾರ್ಯದರ್ಶಿಯಂತಹ ಜವಬ್ದಾರಿ ನಿರ್ವಹಿಸಲಾಗಲ್ಲ. ಕಾಂಗ್ರೆಸ್ ನಲ್ಲಿ ಪಕ್ಷಕ್ಕಾಗಿ ದುಡಿದವರಿಗೆ ಹಿಂದೇಟು ಆಗುವುದು ಸಹಜ. ಅದು ರಾಜಕೀಯದ ಒಂದು ಭಾಗ ಎಂದು ಟ್ವಿಟ್ಟರ್ನಲ್ಲಿ ವ್ಯಂಗ್ಯವಾಡಿದ್ದಾರೆ.
|
ನಾಲ್ಕು ದಶಕಗಳಿಂದ ಪಕ್ಷಕ್ಕಾಗಿ ದುಡಿದವರು
ರಾಮಲಿಂಗಾರೆಡ್ಡಿಯವರು ಕಳೆದ ನಾಲ್ಕು ದಶಕಗಳಿಂದ ಕಾಂಗ್ರೆಸ್ ಪಕ್ಷಕ್ಕಾಗಿ ದುಡಿದಿದ್ದಾರೆ. ಮಧ್ಯ ಕರ್ನಾಟಕ ದಾವಣಗೆರೆ ಜಿಲ್ಲೆಯ ಹಿರಿಯ ನಾಯಕ ಶಾಮನೂರು ಶಿವಶಂಕರಪ್ಪ ಅವರಿಗೂ ಕಾಂಗ್ರೆಸ್ ಅನ್ಯಾಯಮಾಡಿದೆ ಇದು ಲೋಕಸಭೆ ಸಭೆ ಚುನಾವಣೆ ಮೇಲೆ ಖಂಡಿತವಾಗಿಯೂ ಪರಿಣಾಮ ಬೀರುತ್ತದೆ ಎಂದು ಐಎನ್ಸಿ ಜಗಳೂರು ಅಸ್ಸೆಂಬ್ಲಿ ಟ್ವೀಟ್ ಮಾಡಿದೆ.
|
ರಾಜಕೀಯ ನಿಮ್ಮ ಕುಟುಂಬದ ಆಸ್ತಿಯಲ್ಲ
ರಾಜಕೀಯ ನಿಮ್ಮ ಕುಟುಂಬದ ಆಸ್ತಿ ಅಲ್ಲ ಪ್ರಜಾಪ್ರಬುತ್ವ ರಾಷ್ಟ್ರದಲ್ಲಿ ಉತ್ತಮ ಕೆಲಸ ಮಾಡುವವರಿಗೇ ಬಿಟ್ಟು ಕೊಡಬೇಕು .ಅಧಿಕಾರ ಇದ್ದಾಗ ಒಂದು ಜನಾಂಗವನ್ನು ಕೀಳು ಮಟ್ಟದ ಹೇಳಿಕೆ ಕೊಡೋದು ನಿಲ್ಲಿಸಿದ್ದರೇ ಅವರ ಸ್ಥಾನಕ್ಕೆ ಯಾವುದೇ ಕೊರತೆ ಉಂಟಾಗುತ್ತಿರಲಿಲ್ಲ .ಅಧಿಕಾರ ಇರುವಾಗ ಎಲ್ಲರನ್ನು ಒಂದೇ ರೀತಿ ಕಾಣಬೇಕು ಎಂದು ಹಫೀಸ್ ಎನ್ನುವವರು ಟ್ವೀಟ್ ಮಾಡಿದ್ದಾರೆ.
|
ಪಕ್ಷದ ನಿರ್ಧಾರಕ್ಕೆ ಗೌರವ ಕೊಡಿ
ಪಕ್ಷದ ನಿರ್ಧಾರಕ್ಕೆ ಗೌರವ ಕೊಡಿ, ಕಾಂಗ್ರೆಸ್ ಪಕ್ಷ ರಾಮಲಿಂಗ ರೆಡ್ಡಿಯವರಿಗೆ ಹಲವಾರು ಉನ್ನತ ಹುದ್ದೆ ಕೊಟ್ಟಿದೆ ಅವನ್ನೆಲ್ಲ ಮರೆಯಬಾರದು, ನಿಮಗು ಸಹ ಕಳೆದ ಚುನಾವಣೆಯಲ್ಲಿ ಪಕ್ಷ ಟಿಕೆಟ್ ನೀಡಿ ಗೆಲ್ಲಿಸಿಕೊಂಡು ಬಂದಿದೆ, ನಿಮಗಿನ್ನೂ ಹಲವಾರು ಅವಕಾಶಗಳಿವೆ ಅವಕಾಶಕ್ಕಾಗಿ ಕಾಯಬೇಕು ಎಂದು ಸಂಸುದ್ದೀನ್ ಅವರು ತಮ್ಮ ಅಭಿಪ್ರಾಯ ಹಂಚಿಕೊಂಡಿದ್ದಾರೆ.
ಮುಂದೆ ನೀವು ಉನ್ನತ ಹುದ್ದೆಗೆ ಹೋಗುತ್ತೀರ
ನೀವು ಕಾಂಗ್ರೆಸ್ ನ ಪ್ರಭಾವಿ ರಾಜಕಾರಣಿ ಮಗಳು, ನಿಮ್ಮ ನಿರ್ಧಾಎ ಸರಿಯಾಗಿಯೇ ಇದೆ, ಇನ್ನೂ ಸಮಯವಿದೆ ನೀವು ಒಳ್ಳೆದಯ ಹುದ್ದೆಗೆ ಹೋಗುತ್ತೀರ ಎಂದು ರಘುನಂದನ್ ಎನ್ನುವವರು ಶುಭ ಹಾರೈಸಿದ್ದಾರೆ.
-
ಐಪಿಎಲ್ಗೂ ಮುನ್ನ ಆರ್ಸಿಬಿ ಹೊಸ ದಾಖಲೆ: 16,000 ಕೋಟಿಗೆ ಆದಿತ್ಯ ಬಿರ್ಲಾ ಗ್ರೂಪ್ ಪಾಲಾದ ರಾಯಲ್ ಚಾಲೆಂಜರ್ಸ್ ಬೆಂಗಳೂರು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಬೆಂಗಳೂರು ಇ-ಖಾತಾ ದಂಧೆ ಬಯಲು: ಬ್ರ್ಯಾಂಡ್ ಬೆಂಗಳೂರಿಗೆ ಆರ್ ಅಶೋಕ್ ತೀವ್ರ ಟೀಕೆ -
IPL 2026 RCB: ಹ್ಯಾಜಲ್ವುಡ್, ಯಶ್ ದಯಾಳ್ ಅಲಭ್ಯರಾದ್ರೆ ಆರ್ಸಿಬಿ ಮುಂದಿರುವ 'ಪ್ಲಾನ್ ಬಿ' ಏನು? -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ










Click it and Unblock the Notifications