ಮುಂಬೈನಿಂದ ಬೆಂಗಳೂರಿಗೆ ಸೋಮಶೇಖರ್, ಕಾಂಗ್ರೆಸ್ಸಿಗೆ ಬೆಂಬಲ ಘೋಷಣೆ
ಬೆಂಗಳೂರು, ಜುಲೈ 11: ಕರ್ನಾಟಕದಲ್ಲಿ ಆಡಳಿತಾರೂಢ ಕೈ ತೆನೆ ಸರ್ಕಾರ ಸಚಿವರು, ಶಾಸಕರು ಸರಣಿ ರಾಜೀನಾಮೆಯಿಂದಾಗಿ ಉಂಟಾಗಿರುವ ಅಸ್ಥಿರ ಪರಿಸ್ಥಿತಿ, ಗೊಂದಲ, ಕಿತ್ತಾಟ, ಸಂಧಾನದ ನಡುವೆ ಮುಂಬೈಗೆ ತೆರಳಿದ್ದ ಅತೃಪ್ತ ಶಾಸಕರೊಬ್ಬರು ತಡರಾತ್ರಿ ಬೆಂಗಳೂರಿಗೆ ಆಗಮಿಸಿದ್ದಾರೆ. ಜುಲೈ 6ರಂದು ಸೋಮಶೇಖರ್ ಸೇರಿದಂತೆ 10 ಮಂದಿ ಕಾಂಗ್ರೆಸ್ ಶಾಸಕರು ರಾಜೀನಾಮೆ ನೀಡಿದ ಬಳಿಕ ಮುಂಬೈಗೆ ತೆರಳಿದ್ದರು.
ಶಾಸಕ ಎಸ್ ಟಿ ಸೋಮಶೇಖರ್ ಅವರು ನಾನಿನ್ನು ಕಾಂಗ್ರೆಸ್ ಪಕ್ಷದಲ್ಲೇ ಇದ್ದೇನೆ ಎಂದು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಹೇಳಿದರು. ನಾನು ಶಾಸಕ ಸ್ಥಾನಕ್ಕೆ ಮಾತ್ರ ರಾಜೀನಾಮೆ ಸಲ್ಲಿಸಿದ್ದೇನೆ, ನಾನಿನ್ನು ಪಕ್ಷದಲ್ಲಿದ್ದೇನೆ, ಕಾಂಗ್ರೆಸ್ ಪಕ್ಷಕ್ಕೆ ನನ್ನ ಬೆಂಬಲ ಎಂದರು. ತಮ್ಮ ಮಾತಿಗೆ ಸೂಚ್ಯವಾಗಿ, ಮಾಧ್ಯಮ ಪ್ರತಿನಿಧಿಗಳಿಗೆ ತಮ್ಮ ಬಲಗೈ ಹಸ್ತವನ್ನು ತೋರಿಸಿದರು.

ಬಿಡಿಎ ನಿಗಮ ಮಂಡಳಿ ಅಧ್ಯಕ್ಷರಾಗಿರುವ ಎಸ್ ಟಿ ಸೋಮಶೇಖರ್ ಅವರು ಬಸವನಗುಡಿಯ ಹೌಸಿಂಗ್ ಸೊಸೈಟಿಗೆ ಸಂಬಂಧಿಸಿದ ಚುನಾವಣೆಯಲ್ಲಿ ಭಾಗವಹಿಸಲು ಆಗಮಿಸಿದ್ದಾರೆ. ಕೆಲವು ಸಭೆಗಳನ್ನು ಮುಗಿಸಿಕೊಂಡು ಮತ್ತೊಮ್ಮೆ ಮುಂಬೈಗೆ ತೆರಳುವ ಸಾಧ್ಯತೆಯೂ ಇದೆ.
ಮುಂಬೈಗೆ ತೆರಳಿ ಅತೃಪ್ತ ಕಾಂಗ್ರೆಸ್ ಶಾಸಕರ ಮನ ಓಲೈಕೆಗೆ ಯತ್ನಿಸಿದ ಸಚಿವ ಡಿಕೆ ಶಿವಕುಮಾರ್ ಅವರ ಯತ್ನ ವಿಫಲವಾಗಿದ್ದನ್ನು ಇಲ್ಲಿ ಸ್ಮರಿಸಬಹುದು. ಈ ಸಂದರ್ಭದಲ್ಲಿ ರಿನೈಸಾನ್ಸ್ ಹೋಟೆಲ್ ನಲ್ಲಿದ್ದ ಎಸ್ ಟಿ ಸೋಮಶೇಖರ್ ಅವರು, ಡಿಕೆ ಶಿವಕುಮಾರ್ ಅವರನ್ನು ಭೇಟಿ ಮಾಡಲು ನಿರಾಕರಿಸಿದ್ದರು. ಡಿಕೆ ಶಿವಕುಮಾರ್, ಜಿಟಿ ದೇವೇಗೌಡ, ಶಿವಲಿಂಗೇಗೌಡ ಹಾಗೂ ಬಾಲಕೃಷ್ಣ ಯಾರೊಬ್ಬರ ಫೋನ್ ಕಾಲ್ ಕೂಡಾ ಸ್ವೀಕರಿಸಲಿಲ್ಲ.
-
ಬೆಂಗಳೂರು ನಾಯಂಡಳ್ಳಿಯಲ್ಲಿ ಮನೆಯ ಮೊದಲ ಮಹಡಿಯಿಂದ ಬಿದ್ದ ಒಂದೂವರೆ ವರ್ಷದ ಕಂದಮ್ಮ -
SSLC Hindi: ಅಂಕ ಬದಲು ಗ್ರೇಡಿಂಗ್ ವಿರೋಧಿಸಿ ಅರ್ಜಿ ಸಲ್ಲಿಸಿದ ಅರ್ಜಿದಾರರಿಗೆ 1 ಲಕ್ಷ ರೂ. ದಂಡ: ಕರವೇ ಹೇಳಿದ್ದೇನು -
Bengaluru: ಬೆಂಗಳೂರು ನಗರದಲ್ಲಿ ಸ್ವಿಗ್ಗಿ, ಜೊಮ್ಯಾಟೋ ಡೆಲಿವರಿ ಬಾಯ್ಸ್ಗೆ ಸಂಕಷ್ಟ, ಅಮಾನವೀಯ ಲಿಫ್ಟ್ ಸಂಸ್ಕೃತಿ -
ಚಿಕ್ಕಮಗಳೂರಲ್ಲಿ ನಾಪತ್ತೆಯಾಗಿದ್ದ ಕೇರಳದ ಬಾಲಕಿ ಶ್ರಿನಂದಾ ಸಾವು: 2 ಸಾವಿರ ಅಡಿ ಪ್ರಪಾತದಲ್ಲಿ ಶವ ಪತ್ತೆ -
Copra: ತಿಪಟೂರು ಎಪಿಎಂಸಿ ಮಾರುಕಟ್ಟೆಯಲ್ಲಿ ಮತ್ತೆ ದಾಖಲೆ ಬೆಲೆಗೆ ಮಾರಾಟವಾದ ಕೊಬ್ಬರಿ: ನಿರ್ಮಾಣವಾಯ್ತು ಹೊಸ ಇತಿಹಾಸ -
Mona Lisa: ಮಹಾಕುಂಭ ಮೇಳದ ಫೇಮಸ್ ಮೊನಾಲಿಸಾ ಪತಿಗೆ ಕಾನೂನು ಸಂಕಷ್ಟ: ಫರ್ಮಾನ್ ಖಾನ್ ಮೇಲೆ ಪೋಕ್ಸೋ ಪ್ರಕರಣ -
2nd PUC: ಬೆಂಗಳೂರು - ಪಿಯುಸಿಯಲ್ಲಿ ಅತ್ಯುನ್ನತ ಶ್ರೇಣಿಯಲ್ಲಿ ಉತ್ತೀರ್ಣರಾದ 260 ವಿದ್ಯಾರ್ಥಿಗಳಿಗೆ 35,000 ರೂ. -
RBI New Rule: ಇನ್ಮುಂದೆ ಆನ್ಲೈನ್ ವಹಿವಾಟಿನಲ್ಲಿ ದೊಡ್ಡ ಬದಲಾವಣೆ: 10,000 ರೂ. ಹಣ ವರ್ಗಾವಣೆಗೂ ಹೊಸ ನಿಯಮ -
Gold Rate April 10: ಚಿನ್ನ - ಬೆಳ್ಳಿ ಬೆಲೆಯಲ್ಲಿ ಅಚ್ಚರಿಯ ಬೆಳವಣಿಗೆ, ಎಷ್ಟಾಗಿದೆ ಇಂದಿನ ಬಂಗಾರದ ಬೆಲೆ -
ದ್ವಿತೀಯ PUC ರಿಪೀಟರ್ಸ್ ಗಮನಕ್ಕೆ: ತಾಂತ್ರಿಕ ದೋಷ ಸರಿಪಡಿಸಿ ಪರಿಷ್ಕೃತ ಫಲಿತಾಂಶ ಪ್ರಕಟಿಸಿದ ಮಂಡಳಿ -
ಸಾಮಾಜಿಕ ಜಾಲತಾಣದ ಕರೆಗೆ ಓಗೊಟ್ಟ ಹೆಚ್.ಡಿ.ಕುಮಾರಸ್ವಾಮಿ: ನಂಜನಗೂಡಿನ ಹುಲ್ಲಳ್ಳಿಯ ನೊಂದ ಕುಟುಂಬಕ್ಕೆ ಅಭಯ -
ಡಿವಿಜಿ ಒಡನಾಡಿ,ರಾಷ್ಟ್ರೋತ್ಥಾನದ ಮಾಜಿ ಅಧ್ಯಕ್ಷ ಎಸ್ಆರ್ ರಾಮಸ್ವಾಮಿ ನಿಧನ












Click it and Unblock the Notifications