ಬೆಂಕಿ ಹಚ್ಚಿದ ಕಿಡಿಗೇಡಿಗಳು ಯಾರೋ, ಬಲಿಯಾದವರು ಇನ್ಯಾರೋ: ಜಮೀರ್ ಅಹ್ಮದ್
ಬೆಂಗಳೂರು, ಆಗಸ್ಟ್ 13: ನಗರದ ಕೆಜಿ ಹಳ್ಳಿ ಮತ್ತು ಡಿಜೆ ಹಳ್ಳಿ ಪ್ರದೇಶಗಳಲ್ಲಿ ಮಂಗಳವಾರ ರಾತ್ರಿ ನಡೆದ ಹಿಂಸಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಸಕ ಜಮೀರ್ ಅಹ್ಮದ್ ಖಾನ್, ಬಿಜೆಪಿ ಮುಖಂಡ ಬಿಎಲ್ ಸಂತೋಷ್ ಹೇಳಿಕೆಗೆ ತಿರುಗೇಟು ನೀಡಿದ್ದಾರೆ.
Recommended Video
ಕಾಂಗ್ರೆಸ್ಗೆ ಸೇರಿದ ದಲಿತ ಶಾಸಕರ ಮನೆ ಮೇಲೆ ದಾಳಿಯಾಗಿದ್ದರೂ ಕಾಂಗ್ರೆಸ್ನವರು ಒಬ್ಬರೂ ಮಾತನಾಡುತ್ತಿಲ್ಲ ಎಂದು ಬಿಎಲ್ ಸಂತೋಷ್ ವಾಗ್ದಾಳಿ ನಡೆಸಿದ್ದರು. ಇದಕ್ಕೆ ಪ್ರತಿಯಾಗಿ ಜಮೀರ್ ಅಹ್ಮದ್ ಹೇಳಿಕೆ ನೀಡಿದ್ದಾರೆ.
ಪ್ರವಾದಿ ಮಹಮ್ಮದ್ ಪೈಗಂಬರರನ್ನು ವ್ಯಕ್ತಿಯೊಬ್ಬ ನಿಂದಿಸಿರುವುದು ವೈಯಕ್ತಿಕವಾಗಿ ನನಗೂ ಸಾಕಷ್ಟು ನೋವಾಗಿದೆ. ನಮ್ಮ ನೋವು, ಆಕ್ರೋಶವನ್ನು ಕಾನೂನು ಹೋರಾಟದ ಮೂಲಕದ ತೋರಿಸಿ, ಕಠಿಣ ಶಿಕ್ಷೆಗೆ ಆಗ್ರಹಿಸಬೇಕೇ ಹೊರತು ಅಶಾಂತಿಯ ಮೂಲಕವಲ್ಲ. ನ್ಯಾಯಕ್ಕಾಗಿ ನಡೆಸುವ ಕಾನೂನು ಹೋರಾಟದಲ್ಲಿ ನಾನೂ ನಿಮ್ಮ ಜೊತೆಗಿರುತ್ತೇನೆ ಎಂದು ಜಮೀರ್ ಹೇಳಿದ್ದಾರೆ. ಮುಂದೆ ಓದಿ...

ಕುಟುಂಬಗಳ ಸ್ಥಿತಿಕಂಡು ಕಣ್ಣೀರು ಬಂತು
'ಗೋಲಿಬಾರ್ನಿಂದ ಮೃತಪಟ್ಟ ಯುವಕರ ಮನೆಗೆ ನಿನ್ನೆ ಭೇಟಿ ನೀಡಿದ್ದೆ, ನಿಜಕ್ಕೂ ಅವರ ಕುಟುಂಬಗಳ ಪರಿಸ್ಥಿತಿ ಕಂಡು ಕಣ್ಣೀರು ಬಂತು. ಇದ್ದ ಒಬ್ಬ ಮಗನನ್ನು ಕಳೆದುಕೊಂಡ ತಾಯಿ, ತಂಗಿಗೆ ಯಾರು ದಿಕ್ಕು? ಯಾರೋ ಕಿಡಿಗೇಡಿಗಳು ಕಲ್ಲು ತೂರಿ, ಬೆಂಕಿ ಹಚ್ಚಿದರು, ಬಲಿಯಾದವರು ಇನ್ಯಾರೋ' ಎಂದು ಗೋಲಿಬಾರ್ಗೆ ಬಲಿಯಾದ ಯುವಕರ ಪರ ಮಾತನಾಡಿದ್ದಾರೆ.

ಕಾನೂನು ಹೋರಾಟದ ಮೂಲಕ ನ್ಯಾಯ
ಹಿರಿಯ ಪೊಲೀಸ್ ಅಧಿಕಾರಿಗಳು, ಧಾರ್ಮಿಕ ಮುಖಂಡರೊಂದಿಗೆ ಚರ್ಚೆ ಮಾಡಿದ್ದೇನೆ. ತಪ್ಪಿತಸ್ಥರಿಗೆ ಖಂಡಿತಾ ಕಠಿಣ ಶಿಕ್ಷೆ ಆಗಲಿದೆ. ಗಾಳಿ ಸುದ್ದಿಗಳಿಗೆ ಕಿವಿ ಕೊಡಬೇಡಿ, ಕಾನೂನು ಹೋರಾಟದ ಮೂಲಕ ನ್ಯಾಯ ಪಡೆಯುವ ನಮ್ಮ ನಿರ್ಧಾರ ಅಚಲವಾಗಿರಲಿ. ಶಾಂತಿ, ಸೌಹಾರ್ದತೆಗೆ ಎಲ್ಲರೂ ಸಹಕರಿಸಿ ಎಂದು ಕೈ ಮುಗಿದು ಮನವಿ ಮಾಡುತ್ತೇನೆ ಎಂದು ಜಮೀರ್ ಹೇಳಿದ್ದಾರೆ.

ನಿಮ್ಮ ವೈಫಲ್ಯಕ್ಕೆ ಬೇರೆಯವರನ್ನು ಪ್ರಶ್ನಿಸುವುದೇಕೆ?
'ಶ್ರೀಯುತ ಬಿಎಲ್ ಸಂತೋಷ್ ಅವರೇ, ರಾಜ್ಯದ 224 ಶಾಸಕರಿಗೂ ರಕ್ಷಣೆ ನೀಡಬೇಕಾಗಿರುವುದು ಸರ್ಕಾರದ ಕರ್ತವ್ಯ. ರಾಜ್ಯ ಮತ್ತು ಕೇಂದ್ರದಲ್ಲಿ ಎರಡೂ ಕಡೆ ನಿಮ್ಮದೇ ಸರ್ಕಾರಗಳಿವೆ, ಪೊಲೀಸ್ ಇಲಾಖೆ ನಿಮ್ಮ ಅಧೀನದಲ್ಲಿದೆ. ನಿಮ್ಮ ವೈಫಲ್ಯಕ್ಕೆ ಬೇರೆಯವರನ್ನು ಪ್ರಶ್ನಿಸಿದರೆ ಹೇಗೆ ಸ್ವಾಮಿ?

ರಾಜಕೀಯ ಲಾಭಕ್ಕೆ ಸೀಮಿತ
ಆತ್ಮೀಯರಾದ ಅಖಂಡ ಶ್ರೀನಿವಾಸ ಮೂರ್ತಿಯವರು ದಲಿತ ಎಂಬ ಕಾರಣಕ್ಕೆ ನಮ್ಮ ಪಕ್ಷದಲ್ಲಿ ರಕ್ಷಣೆ ನೀಡುತ್ತಿಲ್ಲ ಎಂಬ ಸಂತೋಷ್ ಅವರ ಆರೋಪ ಕೇವಲ ರಾಜಕೀಯ ಲಾಭಕ್ಕಷ್ಟೇ ಸೀಮಿತ. ಸಾಮಾಜಿಕ ನ್ಯಾಯ, ಜಾತ್ಯತೀತತೆ, ಸೋದರತೆ, ಸಮಾನತೆ ಸಾರುವ ಸಂವಿಧಾನವನ್ನೇ ಬದಲಾಯಿಸಲು ಹೊರಟಿರುವವರು ನೀವೇ ಅಲ್ಲವೇ? ಎಂದು ಪ್ರಶ್ನಿಸಿದ್ದಾರೆ.

ನಿಮ್ಮ ಆತ್ಮಸಾಕ್ಷಿ ಪರೀಕ್ಷಿಸಿಕೊಳ್ಳಿ
ದಲಿತರನ್ನು ಹೀನಾಯವಾಗಿ ಬೈಯ್ಯುವ, ನಾವು ಅಧಿಕಾರಕ್ಕೆ ಬಂದಿರುವುದೇ ಸಂವಿಧಾನ ಬದಲಾಯಿಸಲು ಎಂದಿರುವ, ಸದಾ ಮೀಸಲಾತಿಯನ್ನು ವಿರೋಧಿಸುತ್ತಾ ಹೇಳಿಕೆ ನೀಡುವ ಅನಂತ ಕುಮಾರ್ ಹೆಗಡೆ ನಿಮ್ಮ ಪಕ್ಷದ ಸಂಸದರಲ್ಲವೇ? ಅವರಿಗೆ ಒಮ್ಮೆಯಾದರೂ ತಾವು ಬುದ್ದಿ ಹೇಳಿದ್ದೀರಾ ಸಂತೋಷ್ ಅವರೇ? ನಿಮ್ಮ ಪಕ್ಷದಿಂದ ಎಷ್ಟು ಜನ ದಲಿತರಿಗೆ ವಿಧಾನಸಭೆ, ವಿಧಾನ ಪರಿಷತ್, ಬಿಬಿಎಂಪಿ, ಪಂಚಾಯತ್ ರಾಜ್ ಚುನಾವಣೆಗಳಲ್ಲಿ ಟಿಕೆಟ್ ನೀಡಿದ್ದೀರ? ಹೋಗಲಿ ಸಾಮಾಜಿಕ ನ್ಯಾಯದ ಪರವಾಗಿ ಒಮ್ಮೆಯಾದರೂ ಮಾತಾಡಿದ್ದೀರ? ದಲಿತರ ಬಗ್ಗೆ ಮಾತನಾಡುವ ಮುನ್ನ ನಿಮ್ಮ ಆತ್ಮಸಾಕ್ಷಿಯನ್ನು ಪ್ರಶ್ನಿಸಿಕೊಳ್ಳುವುದು ಒಳಿತು.

ಬಿಜೆಪಿಗೆ ನೈತಿಕತೆ ಇದೆಯೇ?
ಕಾಂಗ್ರೆಸ್ ಪಕ್ಷ ಎಂದಿಗೂ ಧರ್ಮಾಧಾರಿತ, ಜಾತಿ ಆಧಾರಿತ ರಾಜಕಾರಣ ಮಾಡಿಲ್ಲ. ನಮ್ಮದು ಸಮಾನತೆ, ಜಾತ್ಯತೀತತೆಯಲ್ಲಿ ನಂಬಿಕೆಯಿರುವ ಪಕ್ಷ. ಕೋಮು ಗಲಭೆಗಳ ಮೂಲಕ ಮತ ಧ್ರುವೀಕರಣ ಮಾಡುವ ಬಿಜೆಪಿಗೆ ನಮ್ಮ ಪಕ್ಷವನ್ನು ಪ್ರಶ್ನಿಸುವ ನೈತಿಕತೆ ಇದೆಯೇ?

ಆಡಳಿತದಲ್ಲಿರುವ ನಿಮ್ಮ ಪಕ್ಷದ ಕೆಲಸ
ಕಳೆದ 60 ವರ್ಷಗಳಲ್ಲಿ ದೇಶಕ್ಕೆ ಕಾಂಗ್ರೆಸ್ ಕೊಡುಗೆ ಏನು ಎಂಬುದು ಜನರ ಮನಸ್ಸಿನಲ್ಲಿದೆ. ಯಾವ ಪಕ್ಷ ಪ್ರಜಾಪ್ರಭುತ್ವ, ಸಂವಿಧಾನ, ಜಾತ್ಯತೀತತೆಯ ಪರವಿದೆ ಎಂಬುದು ಜನತೆಗೆ ಚೆನ್ನಾಗಿಯೇ ಗೊತ್ತು. ನಿಮ್ಮ ಸುಳ್ಳು ಪ್ರಚಾರಗಳಿಗೆ ಜನರೇ ತಕ್ಕ ಪಾಠ ಕಲಿಸಲಿದ್ದಾರೆ. ತಪ್ಪಿತಸ್ಥರನ್ನು ಕಠಿಣ ಶಿಕ್ಷೆಗೆ ಒಳಪಡಿಸಿ, ಜನರಿಗೆ ರಕ್ಷಣೆ ನೀಡಬೇಕಾಗಿರುವುದು ಆಡಳಿತದಲ್ಲಿರುವ ನಿಮ್ಮ ಪಕ್ಷದ ಕೆಲಸ. ಶಾಂತಿ ಸ್ಥಾಪನೆಗಾಗಿ ನಾನು ಶಕ್ತಿಮೀರಿ ಪ್ರಯತ್ನ ಮಾಡಿದ್ದೇನೆ. ಇನ್ನಾದರೂ ನಿಮ್ಮ ರಾಜಕೀಯ ಲಾಭ ನಷ್ಟದ ಲೆಕ್ಕಾಚಾರ ಬದಿಗಿಟ್ಟು, ನಮ್ಮೊಂದಿಗೆ ನೆರವಾಗಿ ಎಂದು ಜಮೀರ್ ಅಹ್ಮದ್ ಹೇಳಿದ್ದಾರೆ.
-
ಬೆಂಗಳೂರು ಇ-ಖಾತಾ ದಂಧೆ ಬಯಲು: ಬ್ರ್ಯಾಂಡ್ ಬೆಂಗಳೂರಿಗೆ ಆರ್ ಅಶೋಕ್ ತೀವ್ರ ಟೀಕೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ












Click it and Unblock the Notifications