ಎಂಎಲ್ ಸಿ ಶರವಣರಿಂದ ಏಪ್ರಿಲ್ 3ರಂದು ಆಹಾರ ವಿತರಣೆ
ಬೆಂಗಳೂರು, ಏಪ್ರಿಲ್ 2: ಕೊರೊನಾ ವೈರಾಣು ಹರಡದಂತೆ ತಡೆಯೊಡ್ಡಲು ಲಾಕ್ ಡೌನ್ ಘೋಷಣೆ ಮಾಡಲಾಗಿದೆ. ಈ ಲಾಕ್ ಡೌನ್ ಉದ್ದೇಶ ಒಳ್ಳೆಯದೇ ಆದರೂ ಅನೇಕರಿಗೆ ತುತ್ತು ಅನ್ನಕ್ಕೂ ಸಮಸ್ಯೆಯಾಗಿದೆ. ಆ ಕಾರಣಕ್ಕೆ ಹಸಿವಿನಿಂದ ಇರುವವರಿಗೆ ಆಹಾರ ವಿತರಿಸುವ ಉದ್ದೇಶದಿಂದ ಜೆಡಿಎಸ್ ಮುಖಂಡ ಹಾಗೂ ವಿಧಾನಪರಿಷತ್ ಸದಸ್ಯರೂ ಆದ ಟಿ.ಎ. ಶರವಣ ಏಪ್ರಿಲ್ 3ರ ಶುಕ್ರವಾರ ಆಹಾರ ವಿತರಣೆ ಮಾಡಲಿದ್ದಾರೆ.
'ಅಪ್ಪಾಜಿ ಕ್ಯಾಂಟೀನ್' ವತಿಯಿಂದ ಶುಕ್ರವಾರ ಮಧ್ಯಾಹ್ನ 12.30ಕ್ಕೆ ಸ್ವತಃ ಶರವಣ ಅವರೇ ಆಹಾರ ವಿತರಿಸಲಿದ್ದಾರೆ. ಕೆ.ಆರ್. ಮಾರ್ಕೆಟ್, ಕಲಾಸಿಪಾಳ್ಯ, ದೊಡ್ಡಪೇಟೆ, ನಗರ್ತ ಪೇಟೆ ಸುತ್ತಮುತ್ತಲಿನಲ್ಲಿ ಇರುವ ಸಾವಿರಾರು ಮಂದಿಗೆ ಆಹಾರ ವಿತರಣೆ ಮಾಡಲಿದ್ದಾರೆ. ಈ ಸಂದರ್ಭದಲ್ಲಿ ಕೊರೊನಾ ತಡೆಯಲು ಸಾಮಾಜಿಕ ಅಂತರ ಕಾಯ್ದುಕೊಳ್ಳುವ ಬಗ್ಗೆ ಕೂಡ ತಿಳಿವಳಿಕೆ ಮೂಡಿಸಲಿದ್ದಾರೆ.
"ಯಾರೂ ಹಸಿವಿನಿಂದ ಇರಬಾರದು ಎಂಬುದು ನಾನು ನಂಬಿಕೊಂಡು ಬಂದಿರುವ ಸಿದ್ಧಾಂತ. ಅದೇ ಕಾರಣಕ್ಕೆ ಅಪ್ಪಾಜಿ ಕ್ಯಾಂಟೀನ್ ಆರಂಭಿಸಿದೆ. ಆ ನಂತರ ಆಸ್ಪತ್ರೆಗಳ ಬಳಿ ಮೊಬೈಲ್ ಕ್ಯಾಂಟೀನ್ ಗಳನ್ನು ಶುರು ಮಾಡಿದೆ. ಆದರೆ ಸದ್ಯಕ್ಕೆ ಜನರ ಸಮಸ್ಯೆ ಮತ್ತೂ ಹೆಚ್ಚಾಗಿದೆ. ಈ ಹಿನ್ನೆಲೆಯಲ್ಲಿ ಅವರ ಅಗತ್ಯಗಳನ್ನು ಅರಿತುಕೊಂಡು, ಶುಕ್ರವಾರದಂದು ಸ್ವತಃ ನಾನೇ ಆಹಾರ ವಿತರಿಸಬೇಕು ಅಂತಿದ್ದೇನೆ. ಇದೇ ವೇಳೆ ಸಾಮಾಜಿಕ ಅಂತರ ಕಾಯ್ದುಕೊಳ್ಳುವ ಬಗ್ಗೆ ಕೂಡ ತಿಳಿವಳಿಕೆ ಮೂಡಿಸುತ್ತೇವೆ.

"ಈಗಾಗಲೇ ಕೊರೊನಾ ಜಾಗೃತಿಗೆ ಸಂಬಂಧಿಸಿದಂತೆ ಸಾಕಷ್ಟು ಕೆಲಸ ಮಾಡಿದ್ದೇನೆ. ಇನ್ನು ಮುಂದೆ ಕೂಡ ನನ್ನಿಂದ ಸಾಧ್ಯವಾಗುವ ಎಲ್ಲ ಕೆಲಸ ಮಾಡುತ್ತೇನೆ" ಎಂದು ಅವರು ತಿಳಿಸಿದ್ದಾರೆ.
-
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
ಐಪಿಎಲ್ಗೂ ಮುನ್ನ ಆರ್ಸಿಬಿ ಹೊಸ ದಾಖಲೆ: 16,000 ಕೋಟಿಗೆ ಆದಿತ್ಯ ಬಿರ್ಲಾ ಗ್ರೂಪ್ ಪಾಲಾದ ರಾಯಲ್ ಚಾಲೆಂಜರ್ಸ್ ಬೆಂಗಳೂರು -
KEA: ರಾಜ್ಯದ ವಸತಿ ಶಾಲೆಗಳ ಪ್ರವೇಶ ಪರೀಕ್ಷೆ, ಅಂತಿಮ ಅಂಕಪಟ್ಟಿ ಪ್ರಕಟ -
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Expressway: ಏಪ್ರಿಲ್ 1ರಿಂದ ರಾಜ್ಯಾದ್ಯಂತ ಟೋಲ್ ದರ ಏರಿಕೆ; ಬೆಂಗಳೂರು-ಮೈಸೂರು ಸೇರಿ ಈ ಪ್ರಮುಖ ಹೆದ್ದಾರಿಗಳಲ್ಲಿ ಸಂಚಾರ ದುಬಾರಿ -
Bengaluru: ಶ್ರೀರಾಮ ನವಮಿ ಹಬ್ಬದ ಪ್ರಯುಕ್ತ ಮಾ.27ರಂದು ನಗರದಲ್ಲಿ ಮಾಂಸ ಮಾರಾಟ ಬಂದ್ಗೆ GBA ಆದೇಶ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
ಬೆಂಗಳೂರು ಇ-ಖಾತಾ ದಂಧೆ ಬಯಲು: ಬ್ರ್ಯಾಂಡ್ ಬೆಂಗಳೂರಿಗೆ ಆರ್ ಅಶೋಕ್ ತೀವ್ರ ಟೀಕೆ












Click it and Unblock the Notifications