ಜಮೀರ್ ಗೆ ಎಚ್ಚರಿಕೆ ಕೊಟ್ಟ ದೇವೇಗೌಡರ ಮಾನಸ ಪುತ್ರ
Recommended Video

ಬೆಂಗಳೂರು, ಅಕ್ಟೋಬರ್ 17: ಜೆಡಿಎಸ್ ಹಾಗೂ ರೆಬೆಲ್ ಶಾಸಕರ ನಡುವಿನ ಮಾತಿನ ಚಕಮಕಿ ಮುಂದುವರೆದಿದೆ. ಈ ನಡುವೆ ಜೆಡಿಎಸ್ ವರಿಷ್ಠರ ಬಗ್ಗೆ ರೆಬೆಲ್ ಶಾಸಕ ಜಮೀರ್ ಅಹಮದ್ ಖಾನ್ ಅವರು ನೀಡಿದ ಹೇಳಿಕೆಯನ್ನು ವಿಧಾನಪರಿಷತ್ ಸದಸ್ಯ ಟಿ.ಎ ಶರವಣ ಖಂಡಿಸಿದ್ದಾರೆ.
ಪಕ್ಷದ ವರಿಷ್ಠರ ಬಗ್ಗೆ ಲಘುವಾಗಿ ಮಾತನಾಡಿರುವ ಶಾಸಕ ಜಮೀರ್ ಅಹಮದ್ ಖಾನ್ ಬೇಷರತ್ ಕ್ಷಮೆಯಾಚಿಸಬೇಕು. ಇಲ್ಲದಿದ್ದರೆ ತೀವ್ರ ಹೋರಾಟ ನಡೆಸಲಾಗುವುದು ಎಂದು ಜೆಡಿಎಸ್ ರಾಜ್ಯ ಉಪಾಧ್ಯಕ್ಷ ಟಿ.ಎ. ಶರವಣ ಎಚ್ಚರಿಕೆ ನೀಡಿದ್ದಾರೆ.
'ಉಂಡ ಮನೆಗೆ ದ್ರೋಹ ಬಗೆದಿರುವ ನೀವು ತಕ್ಷಣವೇ ರಾಜೀನಾಮೆ ನೀಡಿ ಹೊರನಡೆಯಿರಿ. ನೀವು ಯಾಕೆ, ಹೇಗೆ ರಾಜಕೀಯಕ್ಕೆ ಬಂದಿರಿ ಎಂಬುದು ಎಲ್ಲರಿಗೂ ಗೊತ್ತಿದೆ. ಚುನಾವಣೆ ಮೂರು ದಿನ ಇರುವಾಗ ಎಲ್ಲಿ ಹೋಗಿದ್ದೀರಿ? ಹಣ ಖರ್ಚು ಮಾಡಿ ಶಾಸಕರನ್ನಾಗಿ ಮಾಡಿದವರು ಯಾರು?' ಎಂದು ಸುದ್ದಿಗೋಷ್ಠಿಯಲ್ಲಿ ಜಮೀರ್ ವಿರುದ್ಧ ಕಿಡಿಕಾರಿದರು.

ಕಾಂಗ್ರೆಸ್ ನಿಮ್ಮ ಪಾಲಿಗೆ ಸಮುದ್ರವಿರಬಹುದು,ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಅದೇ ಸಮುದ್ರದಲ್ಲಿ ಕೊಚ್ಚಿಹೋಗುತ್ತೀರಿ. ಪಕ್ಷದ ವರಿಷ್ಠರಾದ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರ ಬಗ್ಗೆ ನಾಲಿಗೆ ಬಿಗಿಹಿಡಿದು ಮಾತನಾಡಬೇಕು ಎಂದು ಎಚ್ಚರಿಸಿದರು.
ದೇವೇಗೌಡರು ಆಲದ ಮರವಿದ್ದ ಹಾಗೆ. ಅವರ ಬಗ್ಗೆ ಲಘುವಾಗಿ ಮಾತನಾಡುತ್ತೀರಾ? ನಮ್ಮದು ನಾಯಕರನ್ನು ತಯಾರು ಮಾಡುವ ಫ್ಯಾಕ್ಟರಿ ಇದ್ದ ಹಾಗೆ. ನಾವು ಯಾವ ಪಕ್ಷವನ್ನೂ ಸೇರುವುದಿಲ್ಲ ಎಂದರು.
ಚಾಮರಾಜಪೇಟೆ ವಿಧಾನಸಭಾ ಕ್ಷೇತ್ರದಲ್ಲಿ ತನ್ನ ವಿರುದ್ಧ ಸ್ಪರ್ಧಿಸಲು ಮೀಟರ್ ಇದೆಯೇ ಎಂದು ಪ್ರಶ್ನೆ ಮಾಡಿದ್ದೀರಿ. ಆ ಮೀಟರ್ ಕೊಟ್ಟವರ್ಯಾರು, 3 ಬಾರಿ ಶಾಸಕರನ್ನಾಗಿ, ಸಚಿವರನ್ನಾಗಿ ಮಾಡಿದ್ದು ಯಾವ ಪಕ್ಷ ಎಂಬುದು ನೆನಪಿರಲಿ. ಚಾಮರಾಜಪೇಟೆಯಲ್ಲಿ ನಿಮ್ಮ ವಿರುದ್ಧ ಸ್ಪರ್ಧಿಸಲು ಸಾಮಾನ್ಯ ಕಾರ್ಯಕರ್ತರು ಸಾಕು ಎಂದು ಹೇಳಿದರು.
-
Ankita Jayaram: ನಟನೆಯ ನಡುವೆಯೂ ದ್ವಿತೀಯ ಪಿಯುಸಿಯಲ್ಲಿ ಕರ್ಣ ಧಾರಾವಾಹಿ ಖ್ಯಾತಿಯ ನಟಿ ಅಂಕಿತಾ ಜಯರಾಮ್ ಅಮೋಘ ಸಾಧನೆ -
Gold Rate April 9: ಚಿನ್ನ - ಬೆಳ್ಳಿ ಬೆಲೆಯಲ್ಲಿ ಭರ್ಜರಿ ಇಳಿಕೆ: ಬಂಗಾರ ಖರೀದಿದಾರರಿಗೆ ಸಂತೋಷದ ಸುದ್ದಿ -
ರಾಜ್ಯದ ಕಳೆದ 3 ವರ್ಷಗಳ ದ್ವಿತೀಯ PUC ಫಲಿತಾಂಶದ ಹೈಲೈಟ್ಸ್; ಮೇಲುಗೈ ಸಾಧಿಸಿದ ಜಿಲ್ಲೆಗಳು ಯಾವುವು? ಇಲ್ಲಿದೆ ಮಾಹಿತಿ -
Dhurandhar-2 OTT: ನೆಟ್ಫ್ಲಿಕ್ಸ್ ಅಲ್ಲ, ಈ ಒಟಿಟಿಯಲ್ಲಿ 'ಧರಂಧರ-2' ಅಬ್ಬರ, ಯಾವಾಗ? -
Karnataka Weather: ಕರ್ನಾಟಕದ 4 ಜಿಲ್ಲೆಗಳಲ್ಲಿ ಮಳೆ - ವಿವಿಧ ಭಾಗಗಳಲ್ಲಿ ಭಾರೀ ಬಿಸಿಲು, ಕರ್ನಾಟಕದ ಹವಾಮಾನ ವರದಿ -
Ragi Price Today: ಕರ್ನಾಟಕದ ಮಾರುಕಟ್ಟೆಗಳಲ್ಲಿ ಇಂದಿನ "ರಾಗಿ' ಬೆಲೆ ಎಷ್ಟಿದೆ? ಲೇಟೆಸ್ಟ್ ಅಪ್ಡೇಟ್ -
April 9 Horoscope: 12 ರಾಶಿಗಳಿಗೆ ಇಂದು ಸಂತೋಷ, ಸವಾಲು ಮತ್ತು ಅವಕಾಶಗಳ ಮಿಶ್ರ ಫಲ -
Viral: ಬೆಂಗಳೂರಿಗೆ ಕಾಲಿಟ್ಟಿತೇ ಡೇಂಜರಸ್ 'ಜಾಂಬಿ ಡ್ರಗ್'?: ಯುವಕನ ವಿಡಿಯೋ ನೋಡಿ ಬೆಚ್ಚಿಬಿದ್ದ ಸಿಲಿಕಾನ್ ಸಿಟಿ ಜನ -
April 10 Horoscope: 12 ರಾಶಿಗಳಿಗೆ ಇಂದು ಆರೋಗ್ಯ, ಹಣಕಾಸು ಮತ್ತು ಪ್ರೇಮದಲ್ಲಿ ಮಿಶ್ರ ಫಲ -
ಬೆಂಗಳೂರು ನಾಯಂಡಳ್ಳಿಯಲ್ಲಿ ಮನೆಯ ಮೊದಲ ಮಹಡಿಯಿಂದ ಬಿದ್ದ ಒಂದೂವರೆ ವರ್ಷದ ಕಂದಮ್ಮ -
SSLC Hindi: ಅಂಕ ಬದಲು ಗ್ರೇಡಿಂಗ್ ವಿರೋಧಿಸಿ ಅರ್ಜಿ ಸಲ್ಲಿಸಿದ ಅರ್ಜಿದಾರರಿಗೆ 1 ಲಕ್ಷ ರೂ. ದಂಡ: ಕರವೇ ಹೇಳಿದ್ದೇನು -
PUC Results: 2026ರ ದ್ವಿತೀಯ PUC ಪರೀಕ್ಷೆ ಫಲಿತಾಂಶ ಪ್ರಕಟ, ಇವರೇ ನೋಡಿ ಟಾಪರ್












Click it and Unblock the Notifications